AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ

ಚಿತ್ರತಂಡ ನೀಡಿದ ಮಾಹಿತಿ ಪ್ರಕಾರ, ಕೇವಲ ಮೂರು ದಿನಕ್ಕೆ ‘ಆಡುಜೀವಿತಂ’ ಸಿನಿಮಾ ವಿಶ್ವಾದ್ಯಂತ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Mar 31, 2024 | 3:24 PM

Share

ಪ್ರತಿಭಾನ್ವಿತ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರು ‘ಆಡುಜೀವಿತಂ’ ಸಿನಿಮಾದ ಮೂಲಕ ಗೆದ್ದು ಬೀಗಿದ್ದಾರೆ. ಈ ಸಿನಿಮಾಗಾಗಿ ಅವರು ಅನೇಕ ವರ್ಷಗಳಿಂದ ಕಷ್ಟಪಟ್ಟಿದ್ದಾರೆ. ತುಂಬ ಡಿಫರೆಂಟ್​ ಆದಂತಹ ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಬ್ಲೆಸ್ಸಿ ನಿರ್ದೇಶನ ಮಾಡಿದ ‘ಆಡುಜೀವಿತಂ’ (Aadujeevitham) ಸಿನಿಮಾಗೆ ಜನರು ಫಿದಾ ಆಗಿದ್ದಾರೆ. ನೋಡನೋಡುತ್ತಿದ್ದಂತೆಯೇ ‘ಆಡುಜೀವಿತಂ’ ಬಾಕ್ಸ್​ ಆಫೀಸ್​ ಕಲೆಕ್ಷನ್​ (Aadujeevitham Box Office Collection) 50 ಕೋಟಿ ರೂಪಾಯಿ ಮುಟ್ಟಿದೆ. ವಿಶ್ವಾದ್ಯಂತ ತೆರೆಕಂಡಿರುವ ಈ ಸಿನಿಮಾ ಮೂರು ದಿನಕ್ಕೆ ಹಾಫ್​ ಸೆಂಚುರಿ ಬಾರಿಸಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ಸಿನಿಮಾದ ಗೆಲುವಿನ ಬಗ್ಗೆ ಪೃಥ್ವಿರಾಜ್​ ಸುಕುಮಾರನ್​ ಅವರು ಟ್ವೀಟ್​ ಮಾಡಿದ್ದಾರೆ. ‘ವಿಶ್ವಾದ್ಯಂತ ಒಟ್ಟು ಕಲೆಕ್ಷನ್​ 50 ಕೋಟಿ ರೂಪಾಯಿಗೂ ಅಧಿಕ ಆಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು’ ಎಂದು ಪೃಥ್ವಿರಾಜ್​ ಅವರು ಪೋಸ್ಟ್​ ಮಾಡಿದ್ದಾರೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಸಿಕ್ಕಿದೆ.

ಪ್ಯಾನ್​ ಇಂಡಿಯಾ ಲೆವೆಲ್​ನಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದೆ. ಮಲಯಾಳಂ, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ದೇಶಾದ್ಯಂತ ಈ ಸಿನಿಮಾ ತೆರೆಕಂಡಿದೆ. ಚಿತ್ರತಂಡದ ಪ್ರಕಾರ ಮೊದಲ ದಿನವೇ ಈ ಸಿನಿಮಾ 16 ಕೋಟಿ ರೂಪಾಯಿ ಬಾಚಿಕೊಂಡಿದೆ. ಭಾರತದಲ್ಲಿ ಮೂರು ದಿನಕ್ಕೆ 21.6 ಕೋಟಿ ರೂಪಾಯಿ ಗಳಿಕೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ:  ‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ

90ರ ದಶಕದಲ್ಲಿ ನಜೀಬ್​ ಎಂಬ ಯುವಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಗಲ್ಫ್​ ರಾಷ್ಟ್ರಕ್ಕೆ ಹೋಗಿ, ನಂತರ ಅಲ್ಲಿ ಜೀತದಾಳಾಗಿ ಶೋಷಣೆಗೆ ಒಳಗಾಗುವ ರಿಯಲ್​ ಕಥೆಯನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬ್ಲೆಸಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾಗಾಗಿ ಅವರು ಹಲವು ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್