AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ

ಚಿತ್ರತಂಡ ನೀಡಿದ ಮಾಹಿತಿ ಪ್ರಕಾರ, ಕೇವಲ ಮೂರು ದಿನಕ್ಕೆ ‘ಆಡುಜೀವಿತಂ’ ಸಿನಿಮಾ ವಿಶ್ವಾದ್ಯಂತ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Mar 31, 2024 | 3:24 PM

Share

ಪ್ರತಿಭಾನ್ವಿತ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರು ‘ಆಡುಜೀವಿತಂ’ ಸಿನಿಮಾದ ಮೂಲಕ ಗೆದ್ದು ಬೀಗಿದ್ದಾರೆ. ಈ ಸಿನಿಮಾಗಾಗಿ ಅವರು ಅನೇಕ ವರ್ಷಗಳಿಂದ ಕಷ್ಟಪಟ್ಟಿದ್ದಾರೆ. ತುಂಬ ಡಿಫರೆಂಟ್​ ಆದಂತಹ ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಬ್ಲೆಸ್ಸಿ ನಿರ್ದೇಶನ ಮಾಡಿದ ‘ಆಡುಜೀವಿತಂ’ (Aadujeevitham) ಸಿನಿಮಾಗೆ ಜನರು ಫಿದಾ ಆಗಿದ್ದಾರೆ. ನೋಡನೋಡುತ್ತಿದ್ದಂತೆಯೇ ‘ಆಡುಜೀವಿತಂ’ ಬಾಕ್ಸ್​ ಆಫೀಸ್​ ಕಲೆಕ್ಷನ್​ (Aadujeevitham Box Office Collection) 50 ಕೋಟಿ ರೂಪಾಯಿ ಮುಟ್ಟಿದೆ. ವಿಶ್ವಾದ್ಯಂತ ತೆರೆಕಂಡಿರುವ ಈ ಸಿನಿಮಾ ಮೂರು ದಿನಕ್ಕೆ ಹಾಫ್​ ಸೆಂಚುರಿ ಬಾರಿಸಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ಸಿನಿಮಾದ ಗೆಲುವಿನ ಬಗ್ಗೆ ಪೃಥ್ವಿರಾಜ್​ ಸುಕುಮಾರನ್​ ಅವರು ಟ್ವೀಟ್​ ಮಾಡಿದ್ದಾರೆ. ‘ವಿಶ್ವಾದ್ಯಂತ ಒಟ್ಟು ಕಲೆಕ್ಷನ್​ 50 ಕೋಟಿ ರೂಪಾಯಿಗೂ ಅಧಿಕ ಆಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು’ ಎಂದು ಪೃಥ್ವಿರಾಜ್​ ಅವರು ಪೋಸ್ಟ್​ ಮಾಡಿದ್ದಾರೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಸಿಕ್ಕಿದೆ.

ಪ್ಯಾನ್​ ಇಂಡಿಯಾ ಲೆವೆಲ್​ನಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದೆ. ಮಲಯಾಳಂ, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ದೇಶಾದ್ಯಂತ ಈ ಸಿನಿಮಾ ತೆರೆಕಂಡಿದೆ. ಚಿತ್ರತಂಡದ ಪ್ರಕಾರ ಮೊದಲ ದಿನವೇ ಈ ಸಿನಿಮಾ 16 ಕೋಟಿ ರೂಪಾಯಿ ಬಾಚಿಕೊಂಡಿದೆ. ಭಾರತದಲ್ಲಿ ಮೂರು ದಿನಕ್ಕೆ 21.6 ಕೋಟಿ ರೂಪಾಯಿ ಗಳಿಕೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ:  ‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ

90ರ ದಶಕದಲ್ಲಿ ನಜೀಬ್​ ಎಂಬ ಯುವಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಗಲ್ಫ್​ ರಾಷ್ಟ್ರಕ್ಕೆ ಹೋಗಿ, ನಂತರ ಅಲ್ಲಿ ಜೀತದಾಳಾಗಿ ಶೋಷಣೆಗೆ ಒಳಗಾಗುವ ರಿಯಲ್​ ಕಥೆಯನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬ್ಲೆಸಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾಗಾಗಿ ಅವರು ಹಲವು ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?