AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ

ಚಿತ್ರತಂಡ ನೀಡಿದ ಮಾಹಿತಿ ಪ್ರಕಾರ, ಕೇವಲ ಮೂರು ದಿನಕ್ಕೆ ‘ಆಡುಜೀವಿತಂ’ ಸಿನಿಮಾ ವಿಶ್ವಾದ್ಯಂತ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Mar 31, 2024 | 3:24 PM

Share

ಪ್ರತಿಭಾನ್ವಿತ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರು ‘ಆಡುಜೀವಿತಂ’ ಸಿನಿಮಾದ ಮೂಲಕ ಗೆದ್ದು ಬೀಗಿದ್ದಾರೆ. ಈ ಸಿನಿಮಾಗಾಗಿ ಅವರು ಅನೇಕ ವರ್ಷಗಳಿಂದ ಕಷ್ಟಪಟ್ಟಿದ್ದಾರೆ. ತುಂಬ ಡಿಫರೆಂಟ್​ ಆದಂತಹ ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಬ್ಲೆಸ್ಸಿ ನಿರ್ದೇಶನ ಮಾಡಿದ ‘ಆಡುಜೀವಿತಂ’ (Aadujeevitham) ಸಿನಿಮಾಗೆ ಜನರು ಫಿದಾ ಆಗಿದ್ದಾರೆ. ನೋಡನೋಡುತ್ತಿದ್ದಂತೆಯೇ ‘ಆಡುಜೀವಿತಂ’ ಬಾಕ್ಸ್​ ಆಫೀಸ್​ ಕಲೆಕ್ಷನ್​ (Aadujeevitham Box Office Collection) 50 ಕೋಟಿ ರೂಪಾಯಿ ಮುಟ್ಟಿದೆ. ವಿಶ್ವಾದ್ಯಂತ ತೆರೆಕಂಡಿರುವ ಈ ಸಿನಿಮಾ ಮೂರು ದಿನಕ್ಕೆ ಹಾಫ್​ ಸೆಂಚುರಿ ಬಾರಿಸಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ಸಿನಿಮಾದ ಗೆಲುವಿನ ಬಗ್ಗೆ ಪೃಥ್ವಿರಾಜ್​ ಸುಕುಮಾರನ್​ ಅವರು ಟ್ವೀಟ್​ ಮಾಡಿದ್ದಾರೆ. ‘ವಿಶ್ವಾದ್ಯಂತ ಒಟ್ಟು ಕಲೆಕ್ಷನ್​ 50 ಕೋಟಿ ರೂಪಾಯಿಗೂ ಅಧಿಕ ಆಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು’ ಎಂದು ಪೃಥ್ವಿರಾಜ್​ ಅವರು ಪೋಸ್ಟ್​ ಮಾಡಿದ್ದಾರೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಸಿಕ್ಕಿದೆ.

ಪ್ಯಾನ್​ ಇಂಡಿಯಾ ಲೆವೆಲ್​ನಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದೆ. ಮಲಯಾಳಂ, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ದೇಶಾದ್ಯಂತ ಈ ಸಿನಿಮಾ ತೆರೆಕಂಡಿದೆ. ಚಿತ್ರತಂಡದ ಪ್ರಕಾರ ಮೊದಲ ದಿನವೇ ಈ ಸಿನಿಮಾ 16 ಕೋಟಿ ರೂಪಾಯಿ ಬಾಚಿಕೊಂಡಿದೆ. ಭಾರತದಲ್ಲಿ ಮೂರು ದಿನಕ್ಕೆ 21.6 ಕೋಟಿ ರೂಪಾಯಿ ಗಳಿಕೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ:  ‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ

90ರ ದಶಕದಲ್ಲಿ ನಜೀಬ್​ ಎಂಬ ಯುವಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಗಲ್ಫ್​ ರಾಷ್ಟ್ರಕ್ಕೆ ಹೋಗಿ, ನಂತರ ಅಲ್ಲಿ ಜೀತದಾಳಾಗಿ ಶೋಷಣೆಗೆ ಒಳಗಾಗುವ ರಿಯಲ್​ ಕಥೆಯನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬ್ಲೆಸಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾಗಾಗಿ ಅವರು ಹಲವು ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್