AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಆಡು ಜೀವಿತಂ’ ಚಿತ್ರಕ್ಕಿಲ್ಲ ಪ್ರಶಸ್ತಿ; ಶುರುವಾಯ್ತು ಚರ್ಚೆ

Aadujeevithamm movie: ಕೆಲ ದಿನಗಳ ಹಿಂದಷ್ಟೆ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಘೋಷಣೆ ಆಗಿದೆ. 12 ಫೇಲ್ ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾ, ‘ದಿ ಕಾಶ್ಮೀರ್ ಫೈಲ್ಸ್’ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿವೆ. ಆದರೆ ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಆಡುಜೀವಿತಂ’ ಸಿನಿಮಾಕ್ಕೆ ಯಾವುದೇ ಪ್ರಶಸ್ತಿ ಸಿಕ್ಕಿಲ್ಲ. ಈ ಬಗ್ಗೆ ಚರ್ಚೆ ಆರಂಭವಾಗಿದೆ.

ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಆಡು ಜೀವಿತಂ’ ಚಿತ್ರಕ್ಕಿಲ್ಲ ಪ್ರಶಸ್ತಿ; ಶುರುವಾಯ್ತು ಚರ್ಚೆ
Aadujeevithamm
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Aug 04, 2025 | 7:37 AM

Share

ಇತ್ತೀಚೆಗೆ 71ನೇ ಸಾಲಿನ ರಾಷ್ಟ್ರಪ್ರಶಸ್ತಿ ಅವಾರ್ಡ್​ನ ಅನೌನ್ಸ್ ಮಾಡಲಾಗಿದೆ. ‘ಜವಾನ್’ ಸಿನಿಮಾದ ನಟನೆಗಾಗಿ ಶಾರುಖ್ ಖಾನ್ ಹಾಗೂ ‘12th ಫೇಲ್’ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮಾಸಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಇಬ್ಬರು ಅವಾರ್ಡ್​ನ ಹಂಚಿಕೊಂಡಿದ್ದಾರೆ. ‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡರು. ಈ ಮಧ್ಯೆ ಪೃಥ್ವಿರಾಜ್​ಗೆ ಅವಾರ್ಡ್ ಸಿಗದೇ ಇರುವುದು ಚರ್ಚೆ ಹುಟ್ಟುಹಾಕಿದೆ.

2023ರಲ್ಲಿ ಸೆನ್ಸಾರ್ ಮಾಡಿಸಿಕೊಂಡ ಸಿನಿಮಾಗಳಿಗೆ ಅವಾರ್ಡ್ ನೀಡಾಗಿದೆ. ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಾಗಿದೆ. 2023ರಲ್ಲಿ ಸೆನ್ಸಾರ್ ಮಾಡಿಕೊಂಡು, 2024ರಲ್ಲಿ ಬಿಡುಗಡೆ ಕಂಡ ‘ಆಡುಜೀವಿತಂ’ ಸಿನಿಮಾಗೆ ಯಾವುದೇ ಅವಾರ್ಡ್ ಸಿಗದಿರುವುದು ಚರ್ಚೆ ಹುಟ್ಟುಹಾಕಿದೆ.

‘ಆಡು ಜೀವಿತಂ’ ಚಿತ್ರಕ್ಕೆ ಡಿಸೆಂಬರ್ 31, 2022ರಂದು ಸೆನ್ಸಾರ್ ಮಾಡಲಾಗಿದೆ. ಹೀಗಾಗಿ, ಈ ಚಿತ್ರ ನ್ಯಾಷನಲ್ ಅವಾರ್ಡ್​ಗೆ ಅರ್ಹತೆ ಪಡೆದಿತ್ತು. ಬ್ಲೆಸ್ಸಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ನಜೀಬ್ ಎಂಬ ವ್ಯಕ್ತಿಯ ನಿಜವಾದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಕೇರಳ ಮೂಲದ ಈ ವ್ಯಕ್ತಿ ಸೌದಿ ಅರೇಬಿಯಾಗೆ ಕೆಲಸಕ್ಕೆ ಹೋಗುತ್ತಾನೆ. ಅಲ್ಲಿ ಅವನನ್ನು ಮರಳುಗಾಡಲ್ಲಿ ಕುರಿ ಕಾಯಲು ಹಾಕುತ್ತಾರೆ. ಅಲ್ಲಿಂದ ಆತ ಹೇಗೆ ತಪ್ಪಿಸಿಕೊಂಡು ಬರುತ್ತಾನೆ ಎಂಬುದು ಚಿತ್ರದ ಕಥೆ.

ಇದನ್ನೂ ಓದಿ:ಉದ್ಘಾಟನೆಯಾಯ್ತು 16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವ, ಇಲ್ಲಿವೆ ಚಿತ್ರಗಳು

ಈ ಚಿತ್ರದಲ್ಲಿ ನಜೀಬ್ ಪಾತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್ ಅವರು ನಟಿಸಿದ್ದಾರೆ. ಅವರು ಹಲವು ದಿನ ಊಟ ಮಾಡದೆ ಕಳೆದ ಉದಾಹರಣೆಯೂ ಇದೆ. ಇದಕ್ಕಾಗಿ ಸಾಕಷ್ಟು ತೂಕವನ್ನು ಕೂಡ ಇಳಿಸಿಕೊಂಡಿದ್ದಾರೆ. ಈ ಸಿನಿಮಾಗೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಇತ್ತು. ಹೀಗಾಗಿ, ‘ಆಡು ಜೀವಿತಂ’ ಸಿನಿಮಾಗೆ ಒಂದಾದರೂ ರಾಷ್ಟ್ರಪ್ರಶಸ್ತಿ ಸಿಗಬಬಹುದು ಎಂಬ ನಿರೀಕ್ಷೆ ಇತ್ತು. ಅತ್ಯುತ್ತಮ ನಟ, ಅತ್ಯುತ್ತಮ ಫೀಚರ್ ಸಿನಿಮಾ, ಅತ್ಯುತ್ತಮ ನಿರ್ದೇಶಕ ವಿಭಾಗದ ಅಡಿಯಲ್ಲಿ ಅವಾರ್ಡ್ ಸಿಗಲಿದೆ ಎಂದು ಭಾವಿಸಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಈ ಚಿತ್ರವನ್ನು 2024ನೇ ಸಾಲಿಗೆ ಜೂರಿಗಳು ಪರಿಗಣಿಸಿರಬಹುದು ಎಂದು ಕೂಡ ಹೇಳಲಾಗುತ್ತಿದೆ.

ಪ್ರಕ್ರಿಯೆ ಹೇಗೆ?

ಹಿಂದಿನ ವರ್ಷದ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಸೆನ್ಸಾರ್ ಮಂಡಳಿ ಪ್ರಮಾಣೀಕರಿಸಿದ ಚಲನಚಿತ್ರಗಳು ಅರ್ಹವಾಗಿರುತ್ತವೆ. ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೇಮಿಸಿದ ತೀರ್ಪುಗಾರರ ತಂಡವು ಪ್ರಶಸ್ತಿಗಳನ್ನು ಘೋಷಿಸುತ್ತದೆ ಮತ್ತು ಭಾರತದ ರಾಷ್ಟ್ರಪತಿಗಳು ಪ್ರದಾನ ಮಾಡುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Sun, 3 August 25

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ