AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​

ಹಲವು ಕಾರಣಗಳಿಂದಾಗಿ ‘ಆಡುಜೀವಿತಂ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇದರಲ್ಲಿ ಖ್ಯಾತ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಭಿನ್ನವಾಗಿದೆ. ಹಲವು ವರ್ಷಗಳಿಂದ ಈ ಸಿನಿಮಾದ ಕೆಲಸ ಸಾಗಿಬಂದಿದೆ. ಈಗ ಈ ಚಿತ್ರಕ್ಕೆ ಬಿಡುಗಡೆ ಭಾಗ್ಯ ಸಿಗುತ್ತಿದೆ. ರಿಲೀಸ್​ ಡೇಟ್​ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Feb 21, 2024 | 11:51 AM

Share

ಕಡೆಯೂ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಹಳ ವಿಳಂಬವಾಗಿದ್ದ ‘ಆಡುಜೀವಿತಂ’ (Aadujeevitham) ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಕೆಲವು ವರ್ಷಗಳ ಹಿಂದೆ ಸೆಟ್ಟೇರಿದ ಈ ಸಿನಿಮಾದ ರಿಲೀಸ್​ ತಡವಾಗುತ್ತಲೇ ಇತ್ತು. ಏಪ್ರಿಲ್​ 10ರಂದು ಬಿಡುಗಡೆ ಆಗಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಆದರೆ ಈಗ ನಟ ಪೃಥ್ವಿರಾಜ್​ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ಎರಡು ವಾರ ಮುಂಚಿತವಾಗಿಯೇ ‘ಆಡುಜೀವಿತಂ’ (The Goat Life) ಸಿನಿಮಾ ತೆರೆಕಾಣಲಿದೆ. ಮಾರ್ಚ್​ 28ರಂದು ಈ ಸಿನಿಮಾ ಬಿಡುಗಡೆ ಆಗುವುದು ಖಚಿತ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಹೊಸ ಪೋಸ್ಟರ್​ಗಳ ಮೂಲಕ ‘ಆಡುಜೀವಿತಂ’ ಸಿನಿಮಾದ ರಿಲೀಸ್​ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಕಾನ್ಸೆಪ್ಟ್​ ಸಿದ್ಧಗೊಂಡು 16 ವರ್ಷದಿಂದ, ಸ್ಕ್ರಿಪ್​ ಕೆಲಸ ಶುರುವಾಗಿ 10 ವರ್ಷದಿಂದ, ಶೂಟಿಂಗ್​ ಶುರುವಾಗಿ 6 ವರ್ಷದಿಂದ ಆ ಕಾಯುವಿಕೆಯ ಅವಧಿ ಈಗ ಚಿಕ್ಕದಾಗಿದೆ’ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ. ಈ ಸಿನಿಮಾ ಮಾರ್ಚ್​ 28ರಂದು ಹಲವು ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ.

‘ಆಡುಜೀವಿತಂ’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿದೆ. ಮಲಯಾಳಂನ ಜನಪ್ರಿಯ ‘ಆಡುಜೀವಿತಂ’ ಕಾದಂಬರಿ ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಸತ್ಯ ಘಟನೆಗಳನ್ನು ಆಧರಿಸಿ ಬರೆದ ಈ ಕಾದಂಬರಿ 12 ಭಾಷೆಗಳಿಗೆ ಭಾಷಾಂತರಗೊಂಡಿದೆ. 90ರ ದಶಕದಲ್ಲಿ ಉತ್ತಮ ಭವಿಷ್ಯ ಹುಡುಕಿಕೊಂಡು ಬೇರೆ ದೇಶಕ್ಕೆ ಹೋದ ನಜೀಬ್​ ಎಂಬ ಯುವಕನ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೈರೆಕ್ಟರ್​ ಬ್ಲೆಸ್ಸಿ ಥಾಮಸ್​ ಅವರು ‘ಆಡುಜೀವಿತಂ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದ ಬಹಳ ನಿರೀಕ್ಷೆ ಮೂಡಿದೆ. ‘ವಿಷ್ಯುವಲ್​ ರೊಮ್ಯಾನ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಹಾಲಿವುಡ್​ ನಟ ಜಿಮ್ಮಿ ಜೀನ್​ ಲೂಯಿಸ್​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅಮಲಾ ಪೌಲ್​ ಮತ್ತು ಪೃಥ್ವಿರಾಜ್​ ಅವರು ತೆರೆಹಂಚಿಕೊಂಡಿದ್ದಾರೆ. ಜನಪ್ರಿಯ ಅರಬ್​ ನಟರಾದ ತಲಿಬ್​ ಅಲ್​ ಬಲುಶಿ, ರಿಕ್​ ಅಬಿ ಅವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ನಟ ಪೃಥ್ವಿರಾಜ್ ಸುಕುಮಾರನ್ ಸಿನಿಮಾ, ಕುಟುಂಬ ಇತ್ಯಾದಿ ಮಾಹಿತಿ

ಈ ಸಿನಿಮಾದ ತಾಂತ್ರಿಕ ವಿಭಾಗದಲ್ಲಿ ನುರಿತ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತರಾದ ಎ.ಆರ್​. ರೆಹಮಾನ್​ ಅವರು ‘ಆಡುಜೀವಿತಂ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಸೂಲ್​ ಪೂಕುಟ್ಟಿ ಅವರು ಸೌಂಡ್​ ಡಿಸೈನ್ ಮಾಡಿದ್ದಾರೆ. ಸುನಿಲ್​ ಕೆ.ಎಸ್​. ಛಾಯಾಗ್ರಹಣ, ಎ. ಶ್ರೀಕರ್​ ಪ್ರಸಾದ್​ ಅವರ ಸಂಕಲನ ಈ ಸಿನಿಮಾಗಿದೆ. ಪೃಥ್ವಿರಾಜ್​ ಸುಕುಮಾರನ್​ ಅವರ ವೃತ್ತಿಜೀವನದಲ್ಲಿ ಇದು ಗಮನಾರ್ಹ ಸಿನಿಮಾ ಆಗಿರಲಿದೆ ಎಂದು ಫ್ಯಾನ್ಸ್​ ನಿರೀಕ್ಷಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್