2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​

ಹಲವು ಕಾರಣಗಳಿಂದಾಗಿ ‘ಆಡುಜೀವಿತಂ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇದರಲ್ಲಿ ಖ್ಯಾತ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಭಿನ್ನವಾಗಿದೆ. ಹಲವು ವರ್ಷಗಳಿಂದ ಈ ಸಿನಿಮಾದ ಕೆಲಸ ಸಾಗಿಬಂದಿದೆ. ಈಗ ಈ ಚಿತ್ರಕ್ಕೆ ಬಿಡುಗಡೆ ಭಾಗ್ಯ ಸಿಗುತ್ತಿದೆ. ರಿಲೀಸ್​ ಡೇಟ್​ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​
ಪೃಥ್ವಿರಾಜ್​ ಸುಕುಮಾರನ್​
Follow us
|

Updated on: Feb 21, 2024 | 11:51 AM

ಕಡೆಯೂ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಹಳ ವಿಳಂಬವಾಗಿದ್ದ ‘ಆಡುಜೀವಿತಂ’ (Aadujeevitham) ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಕೆಲವು ವರ್ಷಗಳ ಹಿಂದೆ ಸೆಟ್ಟೇರಿದ ಈ ಸಿನಿಮಾದ ರಿಲೀಸ್​ ತಡವಾಗುತ್ತಲೇ ಇತ್ತು. ಏಪ್ರಿಲ್​ 10ರಂದು ಬಿಡುಗಡೆ ಆಗಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಆದರೆ ಈಗ ನಟ ಪೃಥ್ವಿರಾಜ್​ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ಎರಡು ವಾರ ಮುಂಚಿತವಾಗಿಯೇ ‘ಆಡುಜೀವಿತಂ’ (The Goat Life) ಸಿನಿಮಾ ತೆರೆಕಾಣಲಿದೆ. ಮಾರ್ಚ್​ 28ರಂದು ಈ ಸಿನಿಮಾ ಬಿಡುಗಡೆ ಆಗುವುದು ಖಚಿತ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಹೊಸ ಪೋಸ್ಟರ್​ಗಳ ಮೂಲಕ ‘ಆಡುಜೀವಿತಂ’ ಸಿನಿಮಾದ ರಿಲೀಸ್​ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಕಾನ್ಸೆಪ್ಟ್​ ಸಿದ್ಧಗೊಂಡು 16 ವರ್ಷದಿಂದ, ಸ್ಕ್ರಿಪ್​ ಕೆಲಸ ಶುರುವಾಗಿ 10 ವರ್ಷದಿಂದ, ಶೂಟಿಂಗ್​ ಶುರುವಾಗಿ 6 ವರ್ಷದಿಂದ ಆ ಕಾಯುವಿಕೆಯ ಅವಧಿ ಈಗ ಚಿಕ್ಕದಾಗಿದೆ’ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ. ಈ ಸಿನಿಮಾ ಮಾರ್ಚ್​ 28ರಂದು ಹಲವು ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ.

‘ಆಡುಜೀವಿತಂ’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿದೆ. ಮಲಯಾಳಂನ ಜನಪ್ರಿಯ ‘ಆಡುಜೀವಿತಂ’ ಕಾದಂಬರಿ ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಸತ್ಯ ಘಟನೆಗಳನ್ನು ಆಧರಿಸಿ ಬರೆದ ಈ ಕಾದಂಬರಿ 12 ಭಾಷೆಗಳಿಗೆ ಭಾಷಾಂತರಗೊಂಡಿದೆ. 90ರ ದಶಕದಲ್ಲಿ ಉತ್ತಮ ಭವಿಷ್ಯ ಹುಡುಕಿಕೊಂಡು ಬೇರೆ ದೇಶಕ್ಕೆ ಹೋದ ನಜೀಬ್​ ಎಂಬ ಯುವಕನ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೈರೆಕ್ಟರ್​ ಬ್ಲೆಸ್ಸಿ ಥಾಮಸ್​ ಅವರು ‘ಆಡುಜೀವಿತಂ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದ ಬಹಳ ನಿರೀಕ್ಷೆ ಮೂಡಿದೆ. ‘ವಿಷ್ಯುವಲ್​ ರೊಮ್ಯಾನ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಹಾಲಿವುಡ್​ ನಟ ಜಿಮ್ಮಿ ಜೀನ್​ ಲೂಯಿಸ್​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅಮಲಾ ಪೌಲ್​ ಮತ್ತು ಪೃಥ್ವಿರಾಜ್​ ಅವರು ತೆರೆಹಂಚಿಕೊಂಡಿದ್ದಾರೆ. ಜನಪ್ರಿಯ ಅರಬ್​ ನಟರಾದ ತಲಿಬ್​ ಅಲ್​ ಬಲುಶಿ, ರಿಕ್​ ಅಬಿ ಅವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ನಟ ಪೃಥ್ವಿರಾಜ್ ಸುಕುಮಾರನ್ ಸಿನಿಮಾ, ಕುಟುಂಬ ಇತ್ಯಾದಿ ಮಾಹಿತಿ

ಈ ಸಿನಿಮಾದ ತಾಂತ್ರಿಕ ವಿಭಾಗದಲ್ಲಿ ನುರಿತ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತರಾದ ಎ.ಆರ್​. ರೆಹಮಾನ್​ ಅವರು ‘ಆಡುಜೀವಿತಂ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಸೂಲ್​ ಪೂಕುಟ್ಟಿ ಅವರು ಸೌಂಡ್​ ಡಿಸೈನ್ ಮಾಡಿದ್ದಾರೆ. ಸುನಿಲ್​ ಕೆ.ಎಸ್​. ಛಾಯಾಗ್ರಹಣ, ಎ. ಶ್ರೀಕರ್​ ಪ್ರಸಾದ್​ ಅವರ ಸಂಕಲನ ಈ ಸಿನಿಮಾಗಿದೆ. ಪೃಥ್ವಿರಾಜ್​ ಸುಕುಮಾರನ್​ ಅವರ ವೃತ್ತಿಜೀವನದಲ್ಲಿ ಇದು ಗಮನಾರ್ಹ ಸಿನಿಮಾ ಆಗಿರಲಿದೆ ಎಂದು ಫ್ಯಾನ್ಸ್​ ನಿರೀಕ್ಷಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ