AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​

ಹಲವು ಕಾರಣಗಳಿಂದಾಗಿ ‘ಆಡುಜೀವಿತಂ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇದರಲ್ಲಿ ಖ್ಯಾತ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಭಿನ್ನವಾಗಿದೆ. ಹಲವು ವರ್ಷಗಳಿಂದ ಈ ಸಿನಿಮಾದ ಕೆಲಸ ಸಾಗಿಬಂದಿದೆ. ಈಗ ಈ ಚಿತ್ರಕ್ಕೆ ಬಿಡುಗಡೆ ಭಾಗ್ಯ ಸಿಗುತ್ತಿದೆ. ರಿಲೀಸ್​ ಡೇಟ್​ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Feb 21, 2024 | 11:51 AM

Share

ಕಡೆಯೂ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಹಳ ವಿಳಂಬವಾಗಿದ್ದ ‘ಆಡುಜೀವಿತಂ’ (Aadujeevitham) ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಕೆಲವು ವರ್ಷಗಳ ಹಿಂದೆ ಸೆಟ್ಟೇರಿದ ಈ ಸಿನಿಮಾದ ರಿಲೀಸ್​ ತಡವಾಗುತ್ತಲೇ ಇತ್ತು. ಏಪ್ರಿಲ್​ 10ರಂದು ಬಿಡುಗಡೆ ಆಗಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಆದರೆ ಈಗ ನಟ ಪೃಥ್ವಿರಾಜ್​ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ಎರಡು ವಾರ ಮುಂಚಿತವಾಗಿಯೇ ‘ಆಡುಜೀವಿತಂ’ (The Goat Life) ಸಿನಿಮಾ ತೆರೆಕಾಣಲಿದೆ. ಮಾರ್ಚ್​ 28ರಂದು ಈ ಸಿನಿಮಾ ಬಿಡುಗಡೆ ಆಗುವುದು ಖಚಿತ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಹೊಸ ಪೋಸ್ಟರ್​ಗಳ ಮೂಲಕ ‘ಆಡುಜೀವಿತಂ’ ಸಿನಿಮಾದ ರಿಲೀಸ್​ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಕಾನ್ಸೆಪ್ಟ್​ ಸಿದ್ಧಗೊಂಡು 16 ವರ್ಷದಿಂದ, ಸ್ಕ್ರಿಪ್​ ಕೆಲಸ ಶುರುವಾಗಿ 10 ವರ್ಷದಿಂದ, ಶೂಟಿಂಗ್​ ಶುರುವಾಗಿ 6 ವರ್ಷದಿಂದ ಆ ಕಾಯುವಿಕೆಯ ಅವಧಿ ಈಗ ಚಿಕ್ಕದಾಗಿದೆ’ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ. ಈ ಸಿನಿಮಾ ಮಾರ್ಚ್​ 28ರಂದು ಹಲವು ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ.

‘ಆಡುಜೀವಿತಂ’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿದೆ. ಮಲಯಾಳಂನ ಜನಪ್ರಿಯ ‘ಆಡುಜೀವಿತಂ’ ಕಾದಂಬರಿ ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಸತ್ಯ ಘಟನೆಗಳನ್ನು ಆಧರಿಸಿ ಬರೆದ ಈ ಕಾದಂಬರಿ 12 ಭಾಷೆಗಳಿಗೆ ಭಾಷಾಂತರಗೊಂಡಿದೆ. 90ರ ದಶಕದಲ್ಲಿ ಉತ್ತಮ ಭವಿಷ್ಯ ಹುಡುಕಿಕೊಂಡು ಬೇರೆ ದೇಶಕ್ಕೆ ಹೋದ ನಜೀಬ್​ ಎಂಬ ಯುವಕನ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೈರೆಕ್ಟರ್​ ಬ್ಲೆಸ್ಸಿ ಥಾಮಸ್​ ಅವರು ‘ಆಡುಜೀವಿತಂ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದ ಬಹಳ ನಿರೀಕ್ಷೆ ಮೂಡಿದೆ. ‘ವಿಷ್ಯುವಲ್​ ರೊಮ್ಯಾನ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಹಾಲಿವುಡ್​ ನಟ ಜಿಮ್ಮಿ ಜೀನ್​ ಲೂಯಿಸ್​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅಮಲಾ ಪೌಲ್​ ಮತ್ತು ಪೃಥ್ವಿರಾಜ್​ ಅವರು ತೆರೆಹಂಚಿಕೊಂಡಿದ್ದಾರೆ. ಜನಪ್ರಿಯ ಅರಬ್​ ನಟರಾದ ತಲಿಬ್​ ಅಲ್​ ಬಲುಶಿ, ರಿಕ್​ ಅಬಿ ಅವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ನಟ ಪೃಥ್ವಿರಾಜ್ ಸುಕುಮಾರನ್ ಸಿನಿಮಾ, ಕುಟುಂಬ ಇತ್ಯಾದಿ ಮಾಹಿತಿ

ಈ ಸಿನಿಮಾದ ತಾಂತ್ರಿಕ ವಿಭಾಗದಲ್ಲಿ ನುರಿತ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತರಾದ ಎ.ಆರ್​. ರೆಹಮಾನ್​ ಅವರು ‘ಆಡುಜೀವಿತಂ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಸೂಲ್​ ಪೂಕುಟ್ಟಿ ಅವರು ಸೌಂಡ್​ ಡಿಸೈನ್ ಮಾಡಿದ್ದಾರೆ. ಸುನಿಲ್​ ಕೆ.ಎಸ್​. ಛಾಯಾಗ್ರಹಣ, ಎ. ಶ್ರೀಕರ್​ ಪ್ರಸಾದ್​ ಅವರ ಸಂಕಲನ ಈ ಸಿನಿಮಾಗಿದೆ. ಪೃಥ್ವಿರಾಜ್​ ಸುಕುಮಾರನ್​ ಅವರ ವೃತ್ತಿಜೀವನದಲ್ಲಿ ಇದು ಗಮನಾರ್ಹ ಸಿನಿಮಾ ಆಗಿರಲಿದೆ ಎಂದು ಫ್ಯಾನ್ಸ್​ ನಿರೀಕ್ಷಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ