AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​

ಹಲವು ಕಾರಣಗಳಿಂದಾಗಿ ‘ಆಡುಜೀವಿತಂ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇದರಲ್ಲಿ ಖ್ಯಾತ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಭಿನ್ನವಾಗಿದೆ. ಹಲವು ವರ್ಷಗಳಿಂದ ಈ ಸಿನಿಮಾದ ಕೆಲಸ ಸಾಗಿಬಂದಿದೆ. ಈಗ ಈ ಚಿತ್ರಕ್ಕೆ ಬಿಡುಗಡೆ ಭಾಗ್ಯ ಸಿಗುತ್ತಿದೆ. ರಿಲೀಸ್​ ಡೇಟ್​ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

2 ವಾರ ಮೊದಲೇ ಬಿಡುಗಡೆ ಆಗಲಿದೆ ‘ಆಡುಜೀವಿತಂ’; ಸಿಹಿ ಸುದ್ದಿ ನೀಡಿದ ಪೃಥ್ವಿರಾಜ್​
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Feb 21, 2024 | 11:51 AM

Share

ಕಡೆಯೂ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಹಳ ವಿಳಂಬವಾಗಿದ್ದ ‘ಆಡುಜೀವಿತಂ’ (Aadujeevitham) ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಕೆಲವು ವರ್ಷಗಳ ಹಿಂದೆ ಸೆಟ್ಟೇರಿದ ಈ ಸಿನಿಮಾದ ರಿಲೀಸ್​ ತಡವಾಗುತ್ತಲೇ ಇತ್ತು. ಏಪ್ರಿಲ್​ 10ರಂದು ಬಿಡುಗಡೆ ಆಗಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಆದರೆ ಈಗ ನಟ ಪೃಥ್ವಿರಾಜ್​ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ಎರಡು ವಾರ ಮುಂಚಿತವಾಗಿಯೇ ‘ಆಡುಜೀವಿತಂ’ (The Goat Life) ಸಿನಿಮಾ ತೆರೆಕಾಣಲಿದೆ. ಮಾರ್ಚ್​ 28ರಂದು ಈ ಸಿನಿಮಾ ಬಿಡುಗಡೆ ಆಗುವುದು ಖಚಿತ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಹೊಸ ಪೋಸ್ಟರ್​ಗಳ ಮೂಲಕ ‘ಆಡುಜೀವಿತಂ’ ಸಿನಿಮಾದ ರಿಲೀಸ್​ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಕಾನ್ಸೆಪ್ಟ್​ ಸಿದ್ಧಗೊಂಡು 16 ವರ್ಷದಿಂದ, ಸ್ಕ್ರಿಪ್​ ಕೆಲಸ ಶುರುವಾಗಿ 10 ವರ್ಷದಿಂದ, ಶೂಟಿಂಗ್​ ಶುರುವಾಗಿ 6 ವರ್ಷದಿಂದ ಆ ಕಾಯುವಿಕೆಯ ಅವಧಿ ಈಗ ಚಿಕ್ಕದಾಗಿದೆ’ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ. ಈ ಸಿನಿಮಾ ಮಾರ್ಚ್​ 28ರಂದು ಹಲವು ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ.

‘ಆಡುಜೀವಿತಂ’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿದೆ. ಮಲಯಾಳಂನ ಜನಪ್ರಿಯ ‘ಆಡುಜೀವಿತಂ’ ಕಾದಂಬರಿ ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಸತ್ಯ ಘಟನೆಗಳನ್ನು ಆಧರಿಸಿ ಬರೆದ ಈ ಕಾದಂಬರಿ 12 ಭಾಷೆಗಳಿಗೆ ಭಾಷಾಂತರಗೊಂಡಿದೆ. 90ರ ದಶಕದಲ್ಲಿ ಉತ್ತಮ ಭವಿಷ್ಯ ಹುಡುಕಿಕೊಂಡು ಬೇರೆ ದೇಶಕ್ಕೆ ಹೋದ ನಜೀಬ್​ ಎಂಬ ಯುವಕನ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೈರೆಕ್ಟರ್​ ಬ್ಲೆಸ್ಸಿ ಥಾಮಸ್​ ಅವರು ‘ಆಡುಜೀವಿತಂ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದ ಬಹಳ ನಿರೀಕ್ಷೆ ಮೂಡಿದೆ. ‘ವಿಷ್ಯುವಲ್​ ರೊಮ್ಯಾನ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಹಾಲಿವುಡ್​ ನಟ ಜಿಮ್ಮಿ ಜೀನ್​ ಲೂಯಿಸ್​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅಮಲಾ ಪೌಲ್​ ಮತ್ತು ಪೃಥ್ವಿರಾಜ್​ ಅವರು ತೆರೆಹಂಚಿಕೊಂಡಿದ್ದಾರೆ. ಜನಪ್ರಿಯ ಅರಬ್​ ನಟರಾದ ತಲಿಬ್​ ಅಲ್​ ಬಲುಶಿ, ರಿಕ್​ ಅಬಿ ಅವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ನಟ ಪೃಥ್ವಿರಾಜ್ ಸುಕುಮಾರನ್ ಸಿನಿಮಾ, ಕುಟುಂಬ ಇತ್ಯಾದಿ ಮಾಹಿತಿ

ಈ ಸಿನಿಮಾದ ತಾಂತ್ರಿಕ ವಿಭಾಗದಲ್ಲಿ ನುರಿತ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತರಾದ ಎ.ಆರ್​. ರೆಹಮಾನ್​ ಅವರು ‘ಆಡುಜೀವಿತಂ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಸೂಲ್​ ಪೂಕುಟ್ಟಿ ಅವರು ಸೌಂಡ್​ ಡಿಸೈನ್ ಮಾಡಿದ್ದಾರೆ. ಸುನಿಲ್​ ಕೆ.ಎಸ್​. ಛಾಯಾಗ್ರಹಣ, ಎ. ಶ್ರೀಕರ್​ ಪ್ರಸಾದ್​ ಅವರ ಸಂಕಲನ ಈ ಸಿನಿಮಾಗಿದೆ. ಪೃಥ್ವಿರಾಜ್​ ಸುಕುಮಾರನ್​ ಅವರ ವೃತ್ತಿಜೀವನದಲ್ಲಿ ಇದು ಗಮನಾರ್ಹ ಸಿನಿಮಾ ಆಗಿರಲಿದೆ ಎಂದು ಫ್ಯಾನ್ಸ್​ ನಿರೀಕ್ಷಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು