AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಬಾರಿ ಮೆಗಾಸ್ಟಾರ್ ಸಿನಿಮಾ ಅವಕಾಶ ನಿರಾಕರಿಸಿದ್ದ ಪೃಥ್ವಿರಾಜ್ ಸುಕುಮಾರನ್

Prithviraj Sukumaran: ಬಹುಭಾಷಾ ಬಟ ಪೃಥ್ವಿರಾಜ್ ಸುಕುಮಾರನ್, ಚಿರಂಜೀವಿ ಅವರೊಟ್ಟಿಗೆ ಕೆಲಸ ಮಾಡುವ ಅವಕಾಶವನ್ನು ಎರಡು ಬಾರಿ ಕಳೆದುಕೊಂಡಿದ್ದು ಹೇಗೆಂದು ಹೇಳಿಕೊಂಡಿದ್ದಾರೆ.

ಎರಡು ಬಾರಿ ಮೆಗಾಸ್ಟಾರ್ ಸಿನಿಮಾ ಅವಕಾಶ ನಿರಾಕರಿಸಿದ್ದ ಪೃಥ್ವಿರಾಜ್ ಸುಕುಮಾರನ್
ಮಂಜುನಾಥ ಸಿ.
|

Updated on: Mar 20, 2024 | 4:52 PM

Share

ಪೃಥ್ವಿರಾಜ್ ಸುಕುಮಾರನ್ (prithviraj sukumaran) ಮಲಯಾಳಂ ಚಿತ್ರರಂಗದಿಂದ ಭಾರತೀಯ ಚಿತ್ರರಂಗಕ್ಕೆ ಸಿಕ್ಕ ಅದ್ಭುತ ಪ್ರತಿಭೆಗಳಲ್ಲಿ ಒಂದು. ಮಲಯಾಳಂ ಚಿತ್ರರಂಗದಲ್ಲಿ ಸ್ಟಾರ್ ಆಗಿರುವ ಪೃಥ್ವಿರಾಜ ಸುಕುಮಾರನ್, ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಅವರೇ ಹೇಳಿಕೊಂಡಿರುವಂತೆ ವಾರಕ್ಕೆ ಎರಡು ಮೂರು ಪರಭಾಷೆ ಅವಕಾಶಗಳು ಬರುತ್ತಲೇ ಇರುತ್ತವೆ ಆದರೆ ವಿಶೇಷ ಅನಿಸದ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿಲ್ಲವಂತೆ. ಆದರೆ ತೆಲುಗಿನ ಸ್ಟಾರ್ ನಟ ಮೆಗಾಸ್ಟಾರ್ ಚಿರಂಜೀವಿ ಅವರೊಟ್ಟಿಗೆ ಕೆಲಸ ಮಾಡುವ ಅವಕಾಶ ಎರಡು ಬಾರಿ ಪೃಥ್ವಿರಾಜ್ ಸುಕುಮಾರನ್ ಗೆ ಸಿಕ್ಕಿತ್ತಂತೆ ಆದರೆ ಒಲ್ಲದ ಮನಸ್ಸಿನಿಂದಲೇ ಅವಕಾಶವನ್ನು ನಿರಾಕರಿಸಿದರಂತೆ ಪೃಥ್ವಿರಾಜ್.

ಕನ್ನಡದ ಕಿಚ್ಚ ಸುದೀಪ್ ನಟಿಸಿರುವ ಮೆಗಾಸ್ಟಾರ್ ಚಿರಂಜೀವಿ ನಾಯಕನಟರಾಗಿ ಕಾಣಿಸಿಕೊಂಡಿರುವ ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾದಲ್ಲಿ ನಟಿಸುವ ಅವಕಾಶ 2018 ರಲ್ಲಿ ಪೃಥ್ವಿರಾಜ್ ಸುಕುಮಾರನ್ ಅವರನ್ನು‌ ಅರಸಿ ಬಂದಿತ್ತಂತೆ. ಸ್ವತಃ ಚಿರಂಜೀವಿ ಅವರೇ ಪೃಥ್ವಿರಾಜ್ ಸುಕುಮಾರನ್ ಅವರಿಗೆ ಆಫರ್ ಕೊಟ್ಟಿದ್ದರಂತೆ. ಆದರೆ ಆಗ ‘ಆಡುಜೀವಿತಂ’ ಸಿನಿಮಾದ ಶೂಟಿಂಗ್ ಗಾಗಿ ಗಡ್ಡ ಬಿಟ್ಟು ತೂಕ ಇಳಿಸಿಕೊಂಡಿದ್ದ ಪೃಥ್ವಿರಾಜ್ ಸುಕುಮಾರನ್, ವಿಧಿ ಇಲ್ಲದೆ ಆ ಅವಕಾಶವನ್ನು ಕೈಬಿಟ್ಟರಂತೆ.

ಇದನ್ನೂ ಓದಿ:‘ಸಲಾರ್’ ನಟ ಪೃಥ್ವಿರಾಜ್ ಸುಕುಮಾರನ್ ಸಿನಿಮಾ, ಕುಟುಂಬ ಇತ್ಯಾದಿ ಮಾಹಿತಿ

ಅದಾದ ಬಳಿಕ 2019 ರಲ್ಲಿ ಚಿರಂಜೀವಿ ಅವರು ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಪ್ರಚಾರಕ್ಕೆ ಕೇರಳಕ್ಕೆ ಹೋಗಿದ್ದರಂತೆ, ಅದೇ ಸಮಯದಲ್ಲಿ ಮೋಹನ್ ಲಾಲ್ ನಟನೆ ‘ಲುಸೀಫರ್’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾವನ್ನು ಪೃಥ್ವಿರಾಜ್ ಸುಕುಮಾರನ್ ಅವರೇ ನಿರ್ದೇಶಿಸಿದ್ದರು. ‘ಲುಸಿಫರ್’ ಸಿನಿಮಾದ ತೆಲುಗು ಬಿಡುಗಡೆ ಹಕ್ಕನ್ನು ಸ್ವತಃ ಚಿರಂಜೀವಿ ಖರೀದೊಸಿದ್ದರು. ಅದಾಗಿ ಕೆಲ ವರ್ಷಗಳಾದ ಬಳಿಕ ‘ಲುಸಿಫರ್’ ಸಿನಿಮಾದ ತೆಲುಗು ರೀಮೇಕ್ ಅನ್ನು ನಿರ್ದೇಶನ ಮಾಡುವಂತೆ ಸ್ವತಃ ಚಿರಂಜೀವಿ ಅವರೇ ಪೃಥ್ವಿರಾಜ್ ಸುಕುಮಾರನ್ ಅವರಲ್ಲಿ ಕೇಳಿದರಂತೆ. ಲಿಜೆಂಡ್ ನಟನಿಗೆ ಆಕ್ಷನ್ ಕಟ್ ಹೇಳುವ ಅವಕಾಶ ಕೈಯಲ್ಲಿದ್ದರೂ ಒಲ್ಲೆ ಎನ್ನಬೇಕಾಯ್ತಂತೆ. ಈ ಕಠಿಣ ನಿರ್ಧಾರಕ್ಕೆ ಕಾರಣವಾಗಿದ್ದು ಮತ್ತೆ ಅದೇ ‘ಆಡುಜೀವಿತಂ’ ಸಿನಿಮಾ.

‘ಆಡುಜೀವಿತಂ’ ಸಿನಿಮಾಕ್ಕೆ ತಾವು ಎಷ್ಟು ಕಮಿಟ್ ಆಗಿದ್ದೆ, ಅದೊಂದು ಸಿನಿಮಾಕ್ಕಾಗಿ ಎಷ್ಟು ಸಿನಿಮಾ ಅವಕಾಶಗಳ ಕೈವಿಟ್ಟೆ ಎಂದು ಪೃಥ್ವಿರಾಜ್ ಸುಕುಮಾರನ್ ಮೇಲಿನ ಘಟನೆಗಳನ್ನು ಹೇಳಿದ್ದಾರೆ. ‘ಆಟುಜೀವಿತಂ’ ಸಿನಿಮಾ ಪ್ರಾರಂಭವಾಗಿ ಬರೋಬ್ಬರಿ 10 ವರ್ಷಗಳಾಗಿವೆ. ನಿಜ ಘಟನೆಯನ್ನು ಆಧರಿಸಿದ ಸಿನಿಮಾ ಇದಾಗಿದೆ. ಸಿನಿಮಾ ಮಾರ್ಚ್ 28 ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್