AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್

‘ನೀವು ತೆಲುಗು ಸಿನಿಮಾ ಮಾಡೋದು ಯಾವಾಗ’ ಎಂಬ ಪ್ರಶ್ನೆ ಪೃಥ್ವಿರಾಜ್​ ಸುಕುಮಾರನ್​​ಗೆ ಎದುರಾಯಿತು. ಇದಕ್ಕೆ ಅವರು ಮುಚ್ಚುಮರೆ ಮಾಡದೆ ಉತ್ತರಿಸಿದ್ದಾರೆ.

‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್
ಪೃಥ್ವಿರಾಜ್​-ಪ್ರಭಾಸ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 26, 2022 | 7:20 AM

Share

ಪೃಥ್ವಿರಾಜ್​ ಸುಕುಮಾರನ್​ಗೂ (Prithviraj Sukumaran) ಹಾಗೂ ವಿಜಯ್​ ಕಿರಗಂದೂರು ಒಡೆತನದ ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್​ಗೂ ಒಂದು ನಂಟು ಬೆಳೆದಿದೆ. ಈ ಮೊದಲು ‘ಕೆಜಿಎಫ್ 2’ ಚಿತ್ರವನ್ನು ಪೃಥ್ವಿರಾಜ್​ ಅವರು ಮಲಯಾಳಂನಲ್ಲಿ ರಿಲೀಸ್ ಮಾಡಿದ್ದರು. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಇಡೀ ತಂಡದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ಈಗ ಪೃಥ್ವಿರಾಜ್​ ಅವರು ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್​ ಕಿರಗಂದೂರು ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ‘ಸಲಾರ್’ ಚಿತ್ರದಲ್ಲಿ (Salaar Movie) ನಟಿಸುತ್ತಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪೃಥ್ವಿರಾಜ್​ ಅವರು ಸದ್ಯ ‘ಕಡುವ’ ಸಿನಿಮಾ ಪ್ರಚಾರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ಜೂನ್​ 30ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ತೆಲುಗು ನಾಡಿಗೆ ತೆರಳಿದ್ದರು. ಈ ವೇಳೆ ಅವರಿಗೆ ‘ನೀವು ತೆಲುಗು ಸಿನಿಮಾ ಮಾಡೋದು ಯಾವಾಗ’ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಅವರು ಮುಚ್ಚುಮರೆ ಮಾಡದೆ ಉತ್ತರಿಸಿದ್ದಾರೆ.

‘ನಾನು ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಡೇಟ್ಸ್​ ಹೊಂದಾಣಿಕೆ ಆಗುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ನೋಡುತ್ತಿದ್ದೇನೆ. ಸಲಾರ್​ ಚಿತ್ರದಲ್ಲಿ ನಾನು ಪ್ರಮುಖ ಪಾತ್ರ ಮಾಡುತ್ತಿದ್ದೇನೆ. ನನಗೆ ಎರಡು ವರ್ಷಗಳ ಹಿಂದೆಯೇ ಈ ಆಫರ್ ಬಂದಿತ್ತು. ಕಥೆ ಕೇಳಿ ಥ್ರಿಲ್​ ಆಗಿದ್ದೆ. ಹೀಗಾಗಿ, ಸಿನಿಮಾ ಒಪ್ಪಿಕೊಂಡೆ. ಪ್ರಶಾಂತ್ ನೀಲ್​ ನನ್ನ ಗೆಳೆಯ. ಹೊಂಬಾಳೆ ಫಿಲ್ಮ್ಸ್ ಜತೆಯೂ ಒಳ್ಳೆಯ ಒಡನಾಟ ಇದೆ. ಪ್ರಭಾಸ್​ ಜತೆ ಯಾರು ನಟಿಸೋಕೆ ಇಷ್ಟಪಡುವುದಿಲ್ಲ ಹೇಳಿ. ಆದರೆ, ಕೊವಿಡ್​ನಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಡೇಟ್ಸ್​ ಚೇಂಜ್​ ಆದವು. ಹೀಗಾಗಿ, ನನ್ನ ಬಳಿ ಡೇಟ್ಸ್ ಹೊಂದಿಸೋಕೆ ಸಾಧ್ಯವಿಲ್ಲ, ನಾನು ಈ ಸಿನಿಮಾ ಮಾಡುವುದಿಲ್ಲ ಎಂದೇ ಭಾವಿಸಿದ್ದೆ. ಆದರೆ, ಅದೇ ಸಮಯದಲ್ಲಿ ಪ್ರಭಾಸ್​ ಅವರ ಡೇಟ್ಸ್​ ಕೂಡ ಆಚೀಚೆ ಆಯಿತು.  ಈಗ ಈ ಸಿನಿಮಾಗೆ ಡೇಟ್ಸ್ ಹೊಂದಿಸಬಹುದು ಎನಿಸುತ್ತಿದೆ’ ಎಂದಿದ್ದಾರೆ ಪೃಥ್ವಿರಾಜ್​ ಸುಕುಮಾರನ್​.

ಇದನ್ನೂ ಓದಿ
Image
‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ
Image
Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
Image
ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್
Image
ಪ್ರಭಾಸ್​ ಜತೆ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿದ ಶಿವಣ್ಣ; ತೆಲುಗು ಸಿನಿಮಾದಲ್ಲಿ ‘ಸೆಂಚುರಿ ಸ್ಟಾರ್​’ ಕೆಲಸ ಏನು?

ಪೃಥ್ವಿರಾಜ್ ಸುಕುಮಾರನ್ ಕೊಟ್ಟ ಹೊಸ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಮೂಡಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಮಲಯಾಳಂನ ‘ಟೈಸನ್​’ ಚಿತ್ರದಲ್ಲಿ ಪೃಥ್ವಿರಾಜ್​ ನಟಿಸಿ, ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಐಎಎಸ್​ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​

‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ

Published On - 7:09 am, Sun, 26 June 22

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್