AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್

‘ನೀವು ತೆಲುಗು ಸಿನಿಮಾ ಮಾಡೋದು ಯಾವಾಗ’ ಎಂಬ ಪ್ರಶ್ನೆ ಪೃಥ್ವಿರಾಜ್​ ಸುಕುಮಾರನ್​​ಗೆ ಎದುರಾಯಿತು. ಇದಕ್ಕೆ ಅವರು ಮುಚ್ಚುಮರೆ ಮಾಡದೆ ಉತ್ತರಿಸಿದ್ದಾರೆ.

‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್
ಪೃಥ್ವಿರಾಜ್​-ಪ್ರಭಾಸ್
TV9 Web
| Edited By: |

Updated on:Jun 26, 2022 | 7:20 AM

Share

ಪೃಥ್ವಿರಾಜ್​ ಸುಕುಮಾರನ್​ಗೂ (Prithviraj Sukumaran) ಹಾಗೂ ವಿಜಯ್​ ಕಿರಗಂದೂರು ಒಡೆತನದ ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್​ಗೂ ಒಂದು ನಂಟು ಬೆಳೆದಿದೆ. ಈ ಮೊದಲು ‘ಕೆಜಿಎಫ್ 2’ ಚಿತ್ರವನ್ನು ಪೃಥ್ವಿರಾಜ್​ ಅವರು ಮಲಯಾಳಂನಲ್ಲಿ ರಿಲೀಸ್ ಮಾಡಿದ್ದರು. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಇಡೀ ತಂಡದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ಈಗ ಪೃಥ್ವಿರಾಜ್​ ಅವರು ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್​ ಕಿರಗಂದೂರು ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ‘ಸಲಾರ್’ ಚಿತ್ರದಲ್ಲಿ (Salaar Movie) ನಟಿಸುತ್ತಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪೃಥ್ವಿರಾಜ್​ ಅವರು ಸದ್ಯ ‘ಕಡುವ’ ಸಿನಿಮಾ ಪ್ರಚಾರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ಜೂನ್​ 30ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ತೆಲುಗು ನಾಡಿಗೆ ತೆರಳಿದ್ದರು. ಈ ವೇಳೆ ಅವರಿಗೆ ‘ನೀವು ತೆಲುಗು ಸಿನಿಮಾ ಮಾಡೋದು ಯಾವಾಗ’ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಅವರು ಮುಚ್ಚುಮರೆ ಮಾಡದೆ ಉತ್ತರಿಸಿದ್ದಾರೆ.

‘ನಾನು ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಡೇಟ್ಸ್​ ಹೊಂದಾಣಿಕೆ ಆಗುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ನೋಡುತ್ತಿದ್ದೇನೆ. ಸಲಾರ್​ ಚಿತ್ರದಲ್ಲಿ ನಾನು ಪ್ರಮುಖ ಪಾತ್ರ ಮಾಡುತ್ತಿದ್ದೇನೆ. ನನಗೆ ಎರಡು ವರ್ಷಗಳ ಹಿಂದೆಯೇ ಈ ಆಫರ್ ಬಂದಿತ್ತು. ಕಥೆ ಕೇಳಿ ಥ್ರಿಲ್​ ಆಗಿದ್ದೆ. ಹೀಗಾಗಿ, ಸಿನಿಮಾ ಒಪ್ಪಿಕೊಂಡೆ. ಪ್ರಶಾಂತ್ ನೀಲ್​ ನನ್ನ ಗೆಳೆಯ. ಹೊಂಬಾಳೆ ಫಿಲ್ಮ್ಸ್ ಜತೆಯೂ ಒಳ್ಳೆಯ ಒಡನಾಟ ಇದೆ. ಪ್ರಭಾಸ್​ ಜತೆ ಯಾರು ನಟಿಸೋಕೆ ಇಷ್ಟಪಡುವುದಿಲ್ಲ ಹೇಳಿ. ಆದರೆ, ಕೊವಿಡ್​ನಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಡೇಟ್ಸ್​ ಚೇಂಜ್​ ಆದವು. ಹೀಗಾಗಿ, ನನ್ನ ಬಳಿ ಡೇಟ್ಸ್ ಹೊಂದಿಸೋಕೆ ಸಾಧ್ಯವಿಲ್ಲ, ನಾನು ಈ ಸಿನಿಮಾ ಮಾಡುವುದಿಲ್ಲ ಎಂದೇ ಭಾವಿಸಿದ್ದೆ. ಆದರೆ, ಅದೇ ಸಮಯದಲ್ಲಿ ಪ್ರಭಾಸ್​ ಅವರ ಡೇಟ್ಸ್​ ಕೂಡ ಆಚೀಚೆ ಆಯಿತು.  ಈಗ ಈ ಸಿನಿಮಾಗೆ ಡೇಟ್ಸ್ ಹೊಂದಿಸಬಹುದು ಎನಿಸುತ್ತಿದೆ’ ಎಂದಿದ್ದಾರೆ ಪೃಥ್ವಿರಾಜ್​ ಸುಕುಮಾರನ್​.

ಇದನ್ನೂ ಓದಿ
Image
‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ
Image
Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
Image
ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್
Image
ಪ್ರಭಾಸ್​ ಜತೆ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿದ ಶಿವಣ್ಣ; ತೆಲುಗು ಸಿನಿಮಾದಲ್ಲಿ ‘ಸೆಂಚುರಿ ಸ್ಟಾರ್​’ ಕೆಲಸ ಏನು?

ಪೃಥ್ವಿರಾಜ್ ಸುಕುಮಾರನ್ ಕೊಟ್ಟ ಹೊಸ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಮೂಡಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಮಲಯಾಳಂನ ‘ಟೈಸನ್​’ ಚಿತ್ರದಲ್ಲಿ ಪೃಥ್ವಿರಾಜ್​ ನಟಿಸಿ, ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಐಎಎಸ್​ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​

‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ

Published On - 7:09 am, Sun, 26 June 22

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ