‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್

‘ನೀವು ತೆಲುಗು ಸಿನಿಮಾ ಮಾಡೋದು ಯಾವಾಗ’ ಎಂಬ ಪ್ರಶ್ನೆ ಪೃಥ್ವಿರಾಜ್​ ಸುಕುಮಾರನ್​​ಗೆ ಎದುರಾಯಿತು. ಇದಕ್ಕೆ ಅವರು ಮುಚ್ಚುಮರೆ ಮಾಡದೆ ಉತ್ತರಿಸಿದ್ದಾರೆ.

‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್
ಪೃಥ್ವಿರಾಜ್​-ಪ್ರಭಾಸ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 26, 2022 | 7:20 AM

ಪೃಥ್ವಿರಾಜ್​ ಸುಕುಮಾರನ್​ಗೂ (Prithviraj Sukumaran) ಹಾಗೂ ವಿಜಯ್​ ಕಿರಗಂದೂರು ಒಡೆತನದ ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್​ಗೂ ಒಂದು ನಂಟು ಬೆಳೆದಿದೆ. ಈ ಮೊದಲು ‘ಕೆಜಿಎಫ್ 2’ ಚಿತ್ರವನ್ನು ಪೃಥ್ವಿರಾಜ್​ ಅವರು ಮಲಯಾಳಂನಲ್ಲಿ ರಿಲೀಸ್ ಮಾಡಿದ್ದರು. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಇಡೀ ತಂಡದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ಈಗ ಪೃಥ್ವಿರಾಜ್​ ಅವರು ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್​ ಕಿರಗಂದೂರು ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ‘ಸಲಾರ್’ ಚಿತ್ರದಲ್ಲಿ (Salaar Movie) ನಟಿಸುತ್ತಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪೃಥ್ವಿರಾಜ್​ ಅವರು ಸದ್ಯ ‘ಕಡುವ’ ಸಿನಿಮಾ ಪ್ರಚಾರ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ಜೂನ್​ 30ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ತೆಲುಗು ನಾಡಿಗೆ ತೆರಳಿದ್ದರು. ಈ ವೇಳೆ ಅವರಿಗೆ ‘ನೀವು ತೆಲುಗು ಸಿನಿಮಾ ಮಾಡೋದು ಯಾವಾಗ’ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಅವರು ಮುಚ್ಚುಮರೆ ಮಾಡದೆ ಉತ್ತರಿಸಿದ್ದಾರೆ.

‘ನಾನು ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಡೇಟ್ಸ್​ ಹೊಂದಾಣಿಕೆ ಆಗುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ನೋಡುತ್ತಿದ್ದೇನೆ. ಸಲಾರ್​ ಚಿತ್ರದಲ್ಲಿ ನಾನು ಪ್ರಮುಖ ಪಾತ್ರ ಮಾಡುತ್ತಿದ್ದೇನೆ. ನನಗೆ ಎರಡು ವರ್ಷಗಳ ಹಿಂದೆಯೇ ಈ ಆಫರ್ ಬಂದಿತ್ತು. ಕಥೆ ಕೇಳಿ ಥ್ರಿಲ್​ ಆಗಿದ್ದೆ. ಹೀಗಾಗಿ, ಸಿನಿಮಾ ಒಪ್ಪಿಕೊಂಡೆ. ಪ್ರಶಾಂತ್ ನೀಲ್​ ನನ್ನ ಗೆಳೆಯ. ಹೊಂಬಾಳೆ ಫಿಲ್ಮ್ಸ್ ಜತೆಯೂ ಒಳ್ಳೆಯ ಒಡನಾಟ ಇದೆ. ಪ್ರಭಾಸ್​ ಜತೆ ಯಾರು ನಟಿಸೋಕೆ ಇಷ್ಟಪಡುವುದಿಲ್ಲ ಹೇಳಿ. ಆದರೆ, ಕೊವಿಡ್​ನಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಡೇಟ್ಸ್​ ಚೇಂಜ್​ ಆದವು. ಹೀಗಾಗಿ, ನನ್ನ ಬಳಿ ಡೇಟ್ಸ್ ಹೊಂದಿಸೋಕೆ ಸಾಧ್ಯವಿಲ್ಲ, ನಾನು ಈ ಸಿನಿಮಾ ಮಾಡುವುದಿಲ್ಲ ಎಂದೇ ಭಾವಿಸಿದ್ದೆ. ಆದರೆ, ಅದೇ ಸಮಯದಲ್ಲಿ ಪ್ರಭಾಸ್​ ಅವರ ಡೇಟ್ಸ್​ ಕೂಡ ಆಚೀಚೆ ಆಯಿತು.  ಈಗ ಈ ಸಿನಿಮಾಗೆ ಡೇಟ್ಸ್ ಹೊಂದಿಸಬಹುದು ಎನಿಸುತ್ತಿದೆ’ ಎಂದಿದ್ದಾರೆ ಪೃಥ್ವಿರಾಜ್​ ಸುಕುಮಾರನ್​.

ಇದನ್ನೂ ಓದಿ
Image
‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ
Image
Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
Image
ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್
Image
ಪ್ರಭಾಸ್​ ಜತೆ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿದ ಶಿವಣ್ಣ; ತೆಲುಗು ಸಿನಿಮಾದಲ್ಲಿ ‘ಸೆಂಚುರಿ ಸ್ಟಾರ್​’ ಕೆಲಸ ಏನು?

ಪೃಥ್ವಿರಾಜ್ ಸುಕುಮಾರನ್ ಕೊಟ್ಟ ಹೊಸ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಮೂಡಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಮಲಯಾಳಂನ ‘ಟೈಸನ್​’ ಚಿತ್ರದಲ್ಲಿ ಪೃಥ್ವಿರಾಜ್​ ನಟಿಸಿ, ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಐಎಎಸ್​ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​

‘ಕಡುವ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ಪೃಥ್ವಿರಾಜ್​ ಸುಕುಮಾರನ್​; ವೈರಲ್ ಆಯ್ತು ಫೋಟೋ

Published On - 7:09 am, Sun, 26 June 22

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!