AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟ ಮೊದಲ ಬಾರಿಗೆ ಪ್ರಿಯಾಮಣಿಗೆ ಶಾರುಖ್​ ನೀಡಿದ್ರು 300 ರೂಪಾಯಿ; ಆ ಹಣದ ಪ್ರಾಮುಖ್ಯತೆ ವಿವರಿಸಿದ ನಟಿ

ಪ್ರಿಯಾಮಣಿ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಮೂಲಕ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದುಕೊಂಡಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಪ್ರಿಯಾಮಣಿಗೆ ಶಾರುಖ್​ ನೀಡಿದ್ರು 300 ರೂಪಾಯಿ; ಆ ಹಣದ ಪ್ರಾಮುಖ್ಯತೆ ವಿವರಿಸಿದ ನಟಿ
ರಾಜೇಶ್ ದುಗ್ಗುಮನೆ
|

Updated on: Jun 18, 2021 | 2:55 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ನಲ್ಲಿ ನಟಿಸುವ ಮೂಲಕ ಪ್ರಿಯಾಮಣಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರು ತಮ್ಮ ನಟನೆ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ. ಇತ್ತೀಚಿಗಿನ ಸಂದರ್ಶನವೊಂದರಲ್ಲಿ ಪ್ರಿಯಾಮಣಿ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಶಾರುಖ್​ ಖಾನ್​ ಅವರು ಪ್ರಿಯಾಮಣಿಗೆ 300 ರೂಪಾಯಿ ನೀಡಿದ್ದರಂತೆ! ಈ ವಿಚಾರದ ಬಗ್ಗೆ ಪ್ರಿಯಾಮಣಿ ಹೇಳಿಕೊಂಡಿದ್ದಾರೆ.

2013ರಲ್ಲಿ ‘ಚೆನ್ನೈ ಎಕ್ಸ್​ಪ್ರೆಸ್’​ ಸಿನಿಮಾ ತೆರೆಗೆ ಬಂದು ದೊಡ್ಡಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾದಲ್ಲಿ ಶಾರುಖ್​ ಹಾಗೂ ದೀಪಿಕಾ ಕಾಂಬಿನೇಷನ್​ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ದೊಡ್ಡಮಟ್ಟದಲ್ಲೇ ಗಳಿಕೆ ಮಾಡಿತ್ತು. ಈ ಚಿತ್ರದಲ್ಲಿ ‘ಒನ್​ ಟೂ ತ್ರೀ ಫೋರ್..’ ಸಾಂಗ್​ ಇದೆ. ಈ ಹಾಡಿನಲ್ಲಿ ಪ್ರಿಯಾಮಣಿ ಕೂಡ ಹೆಜ್ಜೆ ಹಾಕಿದ್ದಾರೆ. ಈ ವಿಶೇಷ ಹಾಡಿನ ಶೂಟಿಂಗ್​ ವೇಳೆ ಶಾರುಖ್​ ಅವರು ಪ್ರಿಯಾಮಣಿಗೆ 300 ರೂಪಾಯಿ ನೀಡಿದ್ದರು.

ಶಾರುಖ್​ ಈ ಹಣವನ್ನು ನೀಡೋಕೆ ಕಾರಣವೇನು? ಅದನ್ನು ಕೂಡ ಪ್ರಿಯಾಮಣಿ ವಿವರಿಸಿದ್ದಾರೆ. ​ ಐಪ್ಯಾಡ್​ನಲ್ಲಿ ಶಾರುಖ್​ ಖಾನ್ ಹಾಗೂ ಪ್ರಿಯಾಮಣಿ ಕೌನ್​ ಬನೇಗಾ ಕರೋಡ್​​​ಪತಿ ಆಡಿದ್ದರು. ಈ ಆಟದಲ್ಲಿ ಪ್ರಿಯಾಮಣಿ ಗೆದ್ದಿದ್ದರು. ಆಗ ಶಾರುಖ್​ 300 ರೂಪಾಯಿ ನೀಡಿದ್ದರು. ಇದನ್ನು, ಪ್ರಿಯಾಮಣಿ ಖರ್ಚು ಮಾಡಿಕೊಳ್ಳದೇ ಹಾಗೆಯೇ ಪರ್ಸ್​ನಲ್ಲಿ ಇಟ್ಟುಕೊಂಡಿದ್ದಾರೆ.

‘ಶಾರುಖ್​ ಖಾನ್​ ಬಾಲಿವುಡ್​ ಬಾದ್​ಶಾ. ಆದರೆ, ಅವರು ತಮ್ಮ ಯಶಸ್ಸನ್ನು ಎಂದಿಗೂ ತಲೆಗೆ ಹತ್ತಿಸಿಕೊಂಡಿಲ್ಲ. ಅವರ ಜತೆ ಕೆಲಸ ಮಾಡೋದು ತುಂಬಾನೇ ಖುಷಿಯ ವಿಚಾರ. ಅವರಿಂದ ಕಲಿಯೋದು ತುಂಬಾನೇ ಇದೆ, ಅವರು ನೀಡಿರೋ ಹಣ ತುಂಬಾನೇ ವಿಶೇಷವಾದುದು’ ಎಂದು ಪ್ರಿಯಾಮಣಿ ಹೇಳಿಕೊಂಡಿದ್ದಾರೆ.

ಪ್ರಿಯಾಮಣಿ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಮೂಲಕ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದುಕೊಂಡಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಪ್ರಿಯಾಮಣಿ ತಮಗಾದ ಬಾಡಿ ಶೇಮಿಂಗ್​ ಬಗ್ಗೆ ಮುಕ್ತವಾಗಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಕಪ್ಪಗಿದ್ದೀಯ, ಆಂಟಿ ಥರ ಕಾಣ್ತೀಯ, ಡುಮ್ಮಿ ಆಗಿದೀಯ ಅಂದ್ರು’; ಬೇಸರದ ಸಂಗತಿ ಹೊರಹಾಕಿದ ಪ್ರಿಯಾಮಣಿ

 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ