AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟ ಮೊದಲ ಬಾರಿಗೆ ಪ್ರಿಯಾಮಣಿಗೆ ಶಾರುಖ್​ ನೀಡಿದ್ರು 300 ರೂಪಾಯಿ; ಆ ಹಣದ ಪ್ರಾಮುಖ್ಯತೆ ವಿವರಿಸಿದ ನಟಿ

ಪ್ರಿಯಾಮಣಿ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಮೂಲಕ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದುಕೊಂಡಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಪ್ರಿಯಾಮಣಿಗೆ ಶಾರುಖ್​ ನೀಡಿದ್ರು 300 ರೂಪಾಯಿ; ಆ ಹಣದ ಪ್ರಾಮುಖ್ಯತೆ ವಿವರಿಸಿದ ನಟಿ
ರಾಜೇಶ್ ದುಗ್ಗುಮನೆ
|

Updated on: Jun 18, 2021 | 2:55 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ನಲ್ಲಿ ನಟಿಸುವ ಮೂಲಕ ಪ್ರಿಯಾಮಣಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರು ತಮ್ಮ ನಟನೆ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ. ಇತ್ತೀಚಿಗಿನ ಸಂದರ್ಶನವೊಂದರಲ್ಲಿ ಪ್ರಿಯಾಮಣಿ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಶಾರುಖ್​ ಖಾನ್​ ಅವರು ಪ್ರಿಯಾಮಣಿಗೆ 300 ರೂಪಾಯಿ ನೀಡಿದ್ದರಂತೆ! ಈ ವಿಚಾರದ ಬಗ್ಗೆ ಪ್ರಿಯಾಮಣಿ ಹೇಳಿಕೊಂಡಿದ್ದಾರೆ.

2013ರಲ್ಲಿ ‘ಚೆನ್ನೈ ಎಕ್ಸ್​ಪ್ರೆಸ್’​ ಸಿನಿಮಾ ತೆರೆಗೆ ಬಂದು ದೊಡ್ಡಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾದಲ್ಲಿ ಶಾರುಖ್​ ಹಾಗೂ ದೀಪಿಕಾ ಕಾಂಬಿನೇಷನ್​ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ದೊಡ್ಡಮಟ್ಟದಲ್ಲೇ ಗಳಿಕೆ ಮಾಡಿತ್ತು. ಈ ಚಿತ್ರದಲ್ಲಿ ‘ಒನ್​ ಟೂ ತ್ರೀ ಫೋರ್..’ ಸಾಂಗ್​ ಇದೆ. ಈ ಹಾಡಿನಲ್ಲಿ ಪ್ರಿಯಾಮಣಿ ಕೂಡ ಹೆಜ್ಜೆ ಹಾಕಿದ್ದಾರೆ. ಈ ವಿಶೇಷ ಹಾಡಿನ ಶೂಟಿಂಗ್​ ವೇಳೆ ಶಾರುಖ್​ ಅವರು ಪ್ರಿಯಾಮಣಿಗೆ 300 ರೂಪಾಯಿ ನೀಡಿದ್ದರು.

ಶಾರುಖ್​ ಈ ಹಣವನ್ನು ನೀಡೋಕೆ ಕಾರಣವೇನು? ಅದನ್ನು ಕೂಡ ಪ್ರಿಯಾಮಣಿ ವಿವರಿಸಿದ್ದಾರೆ. ​ ಐಪ್ಯಾಡ್​ನಲ್ಲಿ ಶಾರುಖ್​ ಖಾನ್ ಹಾಗೂ ಪ್ರಿಯಾಮಣಿ ಕೌನ್​ ಬನೇಗಾ ಕರೋಡ್​​​ಪತಿ ಆಡಿದ್ದರು. ಈ ಆಟದಲ್ಲಿ ಪ್ರಿಯಾಮಣಿ ಗೆದ್ದಿದ್ದರು. ಆಗ ಶಾರುಖ್​ 300 ರೂಪಾಯಿ ನೀಡಿದ್ದರು. ಇದನ್ನು, ಪ್ರಿಯಾಮಣಿ ಖರ್ಚು ಮಾಡಿಕೊಳ್ಳದೇ ಹಾಗೆಯೇ ಪರ್ಸ್​ನಲ್ಲಿ ಇಟ್ಟುಕೊಂಡಿದ್ದಾರೆ.

‘ಶಾರುಖ್​ ಖಾನ್​ ಬಾಲಿವುಡ್​ ಬಾದ್​ಶಾ. ಆದರೆ, ಅವರು ತಮ್ಮ ಯಶಸ್ಸನ್ನು ಎಂದಿಗೂ ತಲೆಗೆ ಹತ್ತಿಸಿಕೊಂಡಿಲ್ಲ. ಅವರ ಜತೆ ಕೆಲಸ ಮಾಡೋದು ತುಂಬಾನೇ ಖುಷಿಯ ವಿಚಾರ. ಅವರಿಂದ ಕಲಿಯೋದು ತುಂಬಾನೇ ಇದೆ, ಅವರು ನೀಡಿರೋ ಹಣ ತುಂಬಾನೇ ವಿಶೇಷವಾದುದು’ ಎಂದು ಪ್ರಿಯಾಮಣಿ ಹೇಳಿಕೊಂಡಿದ್ದಾರೆ.

ಪ್ರಿಯಾಮಣಿ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಮೂಲಕ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದುಕೊಂಡಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಪ್ರಿಯಾಮಣಿ ತಮಗಾದ ಬಾಡಿ ಶೇಮಿಂಗ್​ ಬಗ್ಗೆ ಮುಕ್ತವಾಗಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಕಪ್ಪಗಿದ್ದೀಯ, ಆಂಟಿ ಥರ ಕಾಣ್ತೀಯ, ಡುಮ್ಮಿ ಆಗಿದೀಯ ಅಂದ್ರು’; ಬೇಸರದ ಸಂಗತಿ ಹೊರಹಾಕಿದ ಪ್ರಿಯಾಮಣಿ

 

Follow Us
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ