Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀರೋ ಸೈಜ್ ವಿಚಾರದ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ ಪ್ರಿಯಾಮಣಿ

ಬಾಲಿವುಡ್​ನಲ್ಲಿ ಗ್ಲಾಮರ್​ಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ಮಲಯಾಳಂ ಸೇರಿ ದಕ್ಷಿಣದ ಕೆಲವು ಭಾಷೆಗಳ ಸಿನಿಮಾಗಳಲ್ಲಿ ಗ್ಲಾಮರ್​ಗಿಂತ ನಟನೆಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಇದನ್ನು ಪ್ರಿಯಾಮಣಿ ಒಪ್ಪಿಕೊಂಡಿದ್ದಾರೆ.

ಜೀರೋ ಸೈಜ್ ವಿಚಾರದ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ ಪ್ರಿಯಾಮಣಿ
ಪ್ರಿಯಾಮಣಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Apr 16, 2024 | 10:05 AM

ಬಾಡಿ ಶೇಮಿಂಗ್ ವಿಚಾರ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ಚರ್ಮದ ಬಣ್ಣ, ದೇಹದ ವಿಚಾರ ಇಟ್ಟುಕೊಂಡು ನಟಿಯರನ್ನು ಟೀಕೆ ಮಾಡಿದ ಅನೇಕ ಉದಾಹರಣೆ ಇದೆ. ಅಂತರ್ಜಾಲ ಬಳಕೆ ಕೂಡ ಹೆಚ್ಚಿದ್ದು, ನಟಿಯರ ಬಗ್ಗೆ ಸುಲಭದಲ್ಲಿ ಕಮೆಂಟ್ ಮಾಡಬಹುದು. ಸೋಶಿಯಲ್ ಮೀಡಿಯಾದಲ್ಲಿ ಅವರ ಪ್ರಾಫೈಲ್​ಗೆ ಹೋಗಿ ಪೋಸ್ಟ್​ಗಳಿಗೆ ಕಮೆಂಟ್ ಮಾಡೋ ಅವಕಾಶ ಇದೆ. ಅನೇಕ ಸೆಲೆಬ್ರಿಟಿಗಳು ಇದರಿಂದ ತೊಂದರೆ ಅನುಭವಿಸಿದ್ದಾರೆ. ನಟಿ ಪ್ರಿಯಾಮಣಿ (Priyamani) ಅವರು ಈ ಬಗ್ಗೆ ಮಾತನಾಡಿದ್ದಾರೆ. ಜೀರೋ ಸೈಜ್ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೆ.

ಬಾಲಿವುಡ್​ನಲ್ಲಿ ಗ್ಲಾಮರ್​ಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ಮಲಯಾಳಂ ಸೇರಿ ದಕ್ಷಿಣದ ಕೆಲವು ಭಾಷೆಗಳ ಸಿನಿಮಾಗಳಲ್ಲಿ ಗ್ಲಾಮರ್​ಗಿಂತ ನಟನೆಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಇದನ್ನು ಪ್ರಿಯಾಮಣಿ ಒಪ್ಪಿಕೊಂಡಿದ್ದಾರೆ. ‘ನೀವು ಉತ್ತಮವಾಗಿ ಕಾಣಬೇಕು ಎಂದಿದ್ದರೆ ಅದಕ್ಕೆ ಬೇಕಾದದ್ದನ್ನು ನೀವೇ ಮಾಡಬೇಕು. ಅದು ನಿಮ್ಮ ವೈಯಕ್ತಿಕ ಆಯ್ಕೆ. ನಾನು ಇರುವ ಇಂಡಸ್ಟ್ರಿ ಹೇಗಿದೆ ಎಂದರೆ ಇಲ್ಲಿ ಹೋಲಿಕೆಗಳು ನಡೆಯುತ್ತಲೇ ಇರುತ್ತವೆ. ದಕ್ಷಿಣದಲ್ಲಿ ನನಗೆ ಯಾರೂ ಜೀರೋ ಸೈಜ್ ಮಾಡಿಕೊಳ್ಳಿ ಎಂದು ಹೇಳಿಲ್ಲ’ ಎಂದಿದ್ದಾರೆ ಅವರು.

‘ನನ್ನ ಸಮಕಾಲೀನರಂತೆ ನಾನು ಏಕೆ ಕಾಣುವುದಿಲ್ಲ ಎಂದು ಜನರು ನನ್ನನ್ನು ಕೇಳುತ್ತಾರೆ. ಈ ರೀತಿಯ ಮಾತು ಕುಟುಂಬದಿಂದಲೂ ಬರಬಹುದು. ಅವರು ನಿಮ್ಮ ಮೇಲೆ ನೆಗಟಿವ್ ಕಮೆಂಟ್ ಮಾಡುವ ಉದ್ದೇಶ ಹೊಂದಿರುವುದಿಲ್ಲ. ಅವರು ನಿಮ್ಮನ್ನು ಡುಮ್ಮಿ ಎಂದು ಕರೆಯುವುದಿಲ್ಲ’ ಎಂದಿದ್ದಾರೆ ಪ್ರಿಯಾಮಣಿ.

‘ಇಂದು ನಮ್ಮ ನಟಿಯರು ತುಂಬಾ ಫಿಟ್ ಆಗಿದ್ದಾರೆ. ತಿನ್ನುವ ಆಹಾರದ ಬಗ್ಗೆ ಮತ್ತು ಹೇಗೆ ಕಾಣಿಸಿಕೊಳ್ಳಬೇಕು ಎಂಬ ಬಗ್ಗೆ ತುಂಬಾ ಜಾಗೃತರಾಗಿದ್ದಾರೆ. ಆದರೆ ಒಂದು ಕಾಲದಲ್ಲಿ ಅಷ್ಟೊಂದು ಜಾಗೃತರಾಗಿದ್ದ ನಟಿಯರು ಕಡಿಮೆ. ಅವರು ಏನು ಬೇಕೋ ಅದನ್ನು ತಿಂದರು. ಪ್ರೇಕ್ಷಕರು ಕಲಾವಿದರಾಗಿ ನಮ್ಮನ್ನು ಇಷ್ಟಪಟ್ಟರು. ಇತ್ತೀಚೆಗೆ ಸೈಜ್ ಜೀರೋ ವಿಚಾರ ಹೆಚ್ಚು ಚರ್ಚೆಯಲ್ಲಿದೆ’ ಎಂದಿದ್ದಾರೆ ಅವರು.

ಪ್ರಿಯಾಮಣಿ ಅವರು ಮುಸ್ಲಿಂ ವ್ಯಕ್ತಿಯನ್ನು ಮದುವೆ ಆದ ಕಾರಣಕ್ಕೂ ಅವರನ್ನು ಅನೇಕರು ಟೀಕೆ ಮಾಡಿದ್ದಿದೆ. ಆದರೆ, ಈ ಟೀಕೆಗಳನ್ನು ಅವರು ಮೆಟ್ಟಿ ನಿಂತಿದ್ದಾರೆ. ಪತಿಯನ್ನು ಅವರು ಬೆಂಬಲಿಸುತ್ತಾ ಬಂದಿದ್ದಾರೆ. ಜೊತೆಗೆ ಸಿನಿಮಾಗಳನ್ನು ಮಾಡಲು ಪತಿಯಿಂದ ಬೆಂಬಲ ಸಿಗುತ್ತಿರುವುದಕ್ಕೆ ಅವರು ಖುಷಿಪಟ್ಟಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಹೆಮ್ಮೆ ಇದೆ. ಪತಿಯ ವಿಚಾರದಲ್ಲಿ ಮಾಡಿದ ಟ್ರೋಲ್​ಗಳು ತಮ್ಮ ಮೇಲೆ ಹಾಗೂ ತಮ್ಮ ಕುಟುಂಬದ ಮೇಲೆ ಪ್ರಭಾವ ಬೀರದಂತೆ ಅವರು ನೋಡಿಕೊಂಡಿದ್ದಾರಂತೆ.

ಇದನ್ನೂ ಓದಿ: ‘ಇಡೀ ಜೀವನವನ್ನು ಒಟ್ಟಿಗೆ ಕಳೆಯುತ್ತೇವೆ’; ಪತಿ ಮುಸ್ತಫಾ ಬಗ್ಗೆ ಪ್ರಿಯಾಮಣಿ ಮಾತು

ಪ್ರಿಯಾಮಣಿಗೆ ಬ್ಯಾಕ್​ ಟು ಬ್ಯಾಕ್ ಗೆಲುವು ಸಿಗುತ್ತಿದೆ. ಅವರ ನಟನೆಯ ‘ಜವಾನ್’ ಯಶಸ್ಸು ಕಂಡಿದೆ. ಇದರ ಜೊತೆಗೆ ‘ಮೈದಾನ್’ ಕೂಡ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:05 am, Tue, 16 April 24

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ