AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ವದಂತಿ ಹಬ್ಬಿಸಿದವರಿಗೆ ಸೈಲೆಂಟ್​ ಆಗಿ ಉತ್ತರಿಸಿದ ಪ್ರಿಯಾಮಣಿ

ದೀಪಾವಳಿ ನಿಮಿತ್ತ ಪ್ರಿಯಾಮಣಿ ಅವರು ಪತಿ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ‘ನಾನು ಮತ್ತು ನನ್ನವನಿಂದ ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಹೇಳಿದ್ದಾರೆ.

ವಿಚ್ಛೇದನ ವದಂತಿ ಹಬ್ಬಿಸಿದವರಿಗೆ ಸೈಲೆಂಟ್​ ಆಗಿ ಉತ್ತರಿಸಿದ ಪ್ರಿಯಾಮಣಿ
ಪ್ರಿಯಾಮಣಿ
TV9 Web
| Edited By: |

Updated on:Nov 08, 2021 | 7:37 PM

Share

ಫ್ಯಾಮಿಲಿ ಮ್ಯಾನ್ ವೆಬ್ ಸರಣಿಯ ಮೂಲಕ ಪ್ರಿಯಾಮಣಿ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಈ ವೆಬ್​ ಸರಣಿಯಲ್ಲಿ ಮನೋಜ್​ ಭಾಜಪೇಯ್​ ಮತ್ತು ಪ್ರಿಯಾಮಣಿ ಅವರು ಶ್ರೀಕಾಂತ್​ ತಿವಾರಿ-ಸುಚಿತ್ರಾ ಐಯ್ಯರ್​​ ಎಂಬ ಗಂಡ-ಹೆಂಡತಿಯ ಪಾತ್ರ ಮಾಡಿದ್ದರು. ಸುಚಿ ತನ್ನ ಸ್ನೇಹಿತನ ಜೊತೆಗೆ ಹೊಂದಿರುವ ಆಪ್ತತೆಯ ಕಾರಣದಿಂದ ಶ್ರೀಕಾಂತ್​ ತಿವಾರಿಯ ಸಂಸಾರದಲ್ಲಿ ಬಿರುಕು ಉಂಟಾಗುತ್ತದೆ. ಈ ವೆಬ್ ಸೀರಿಸ್​ ತೆರೆಕಂಡ ಬೆನ್ನಲ್ಲೇ ಮುಸ್ತಫಾ ರಾಜ್ ಅವರ ಜತೆಗಿನ ವೈವಾಹಿಕ ಜೀವನಕ್ಕೆ ಪ್ರಿಯಾಮಣಿ ಅಂತ್ಯ ಹಾಡಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಪ್ರಿಯಾಮಣಿ ಸ್ಪಷ್ಟನೆ ನೀಡುವ ಕೆಲಸವನ್ನು ಮಾಡಿದ್ದರು. ಈಗ ಅವರು ವಿಚ್ಛೇದನ ಕುರಿತು ಸೈಲೆಂಟ್​ ಆಗಿಯೇ ಉತ್ತರ ನೀಡಿದ್ದಾರೆ.

ದೀಪಾವಳಿ ನಿಮಿತ್ತ ಪ್ರಿಯಾಮಣಿ ಅವರು ಪತಿ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ‘ನಾನು ಮತ್ತು ನನ್ನವನಿಂದ ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಹೇಳಿದ್ದಾರೆ. ಈ ಮೂಲಕ ತಮ್ಮ ಸಂಬಂಧದಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಈ ಮೊದಲು ಕೂಡ ಪ್ರಿಯಾಮಣಿ ಈ ಬಗ್ಗೆ ನೇರವಾಗಿಯೇ ಮಾತನಾಡಿದ್ದರು. ‘ನನ್ನ ಮತ್ತು ಮುಸ್ತಫಾ ಸಂಬಂಧ ಬಹಳ ಚೆನ್ನಾಗಿದೆ. ಇಬ್ಬರೂ ಪರಸ್ಪರ ಅರ್ಥ ಮಾಡಿಕೊಂಡಿದ್ದೇವೆ. ಒಂದು ವೇಳೆ ನಾನು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರೂ ಪತಿಯ ಜತೆ ಮಾತನಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಮುಸ್ತಫಾ ಅವರ ಕೆಲಸದ ಒತ್ತಡವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಇಬ್ಬರಿಗೂ ಸಮಯ ಸಿಕ್ಕಾಗ ಮನಬಿಚ್ಚಿ ಮಾತನಾಡುತ್ತೇವೆ. ಇದರಿಂದಾಗಿ ನಮ್ಮ ಸಂಬಂಧ ಬಹಳ ಗಟ್ಟಿಯಾಗಿದೆ’ ಎಂದು ಅವರು ಹೇಳಿಕೊಂಡಿದ್ದರು.

ಮುಸ್ತಫಾ ಮೊದಲ ಪತ್ನಿ ತಗಾದೆ ಒಂದನ್ನು ತೆಗೆದಿದ್ದರು. ಮುಸ್ತಫಾ ರಾಜ್ ಅವರು ಮೊದಲ ಪತ್ನಿ ಆಯೆಷಾ ಅವರಿಂದ 2013ರಲ್ಲಿ ದೂರವಾಗಿದ್ದರು. ನಂತರ 2017ರಲ್ಲಿ ಪ್ರಿಯಾಮಣಿ ಅವರನ್ನು ವಿವಾಹವಾದರು. ಮುಸ್ತಫಾ ಮತ್ತು ಆಯೆಷಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮುಸ್ತಫಾ ವಿರುದ್ಧ ಆಯೆಷಾ ಆರೋಪ ಒಂದನ್ನು ಮಾಡಿದ್ದರು. ‘ಕಾನೂನಿನ ಪ್ರಕಾರ ನಾವಿನ್ನೂ ಬೇರ್ಪಟ್ಟಿಲ್ಲ. ನಾನೀಗಲೂ ಅವರ ಪತ್ನಿ. ಆದ್ದರಿಂದ ಪ್ರಿಯಾಮಣಿ ಮತ್ತು ಮುಸ್ತಫಾ ಅವರ ಮದುವೆ ಅಸಿಂಧು’ ಎಂದಿದ್ದರು.

ಇದನ್ನೂ ಓದಿ: ‘ನಿಮ್ಮಂಥ ಹೆಂಡತಿ ಯಾರಿಗೂ ಸಿಗಬಾರದು’; ಪ್ರಿಯಾಮಣಿಗೆ ನೇರವಾಗಿ ಶಾಪ ಹಾಕಿದ ಜನರು

ಸೆಟ್ಟೇರಿತು ಶಾರುಖ್- ನಯನತಾರಾ ನಟನೆಯ ನೂತನ ಚಿತ್ರ; ಬಣ್ಣಹಚ್ಚಲಿದ್ದಾರಾ ಪ್ರಿಯಾಮಣಿ, ರಾಣಾ ದಗ್ಗುಬಾಟಿ?

Published On - 7:12 pm, Mon, 8 November 21

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ