AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಆರಂಭಿಸಿದ್ದ ಹೋಟೆಲ್ ಬಿಸ್ನೆಸ್​ನಿಂದ ಹೊರ ನಡೆದ ನಟಿ ಪ್ರಿಯಾಂಕಾ ಚೋಪ್ರಾ

ನ್ಯೂಯಾರ್ಕ್​ನಲ್ಲಿರುವ ‘ಸೋನಾ’ ರೆಸ್ಟೋರೆಂಟ್​​​ನಲ್ಲಿ ಪ್ರಮುಖವಾಗಿ ಭಾರತದ ಖಾದ್ಯಗಳನ್ನು ಸಿದ್ಧಪಡಿಸಲಾಗುತ್ತಿತ್ತು. ಪ್ರಿಯಾಂಕಾ ಚೋಪ್ರಾ ಅವರು ನಡೆಸುತ್ತಿರುವ ರೆಸ್ಟೋರೆಂಟ್ ಎನ್ನುವ ಕಾರಣಕ್ಕೆ ಇದಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಈಗ ಎರಡು ವರ್ಷಗಳ ಬಳಿಕ ಅವರು ಈ ಉದ್ಯಮದಿಂದ ಹೊರ ನಡೆದಿರುವುದಾಗಿ ಘೋಷಿಸಿದ್ದಾರೆ.

ಅಮೆರಿಕದಲ್ಲಿ ಆರಂಭಿಸಿದ್ದ ಹೋಟೆಲ್ ಬಿಸ್ನೆಸ್​ನಿಂದ ಹೊರ ನಡೆದ ನಟಿ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 17, 2023 | 3:05 PM

Share

ಪಾಪ್ ಸಿಂಗರ್ ನಿಕ್ ಜೋನಸ್ (Nick Jonas) ಅವರನ್ನು ಮದುವೆ ಆದ ಬಳಿಕ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಬಾಲಿವುಡ್ ಬಿಟ್ಟು ಅವರು ಹಾಲಿವುಡ್ ಸಿನಿಮಾ ಹಾಗೂ ವೆಬ್​ ಸೀರಿಸ್​ಗಳಲ್ಲಿ ಬ್ಯುಸಿ ಇದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು ಈಗ ಒಂದು ಪ್ರಮುಖ ನಿರ್ಧಾರ ಮಾಡಿದ್ದಾರೆ. ಈ ಮೊದಲು ಆರಂಭಿಸಿದ್ದ ರೆಸ್ಟೋರೆಂಟ್​ (Sona Restaurant) ಬಿಸ್ನೆಸ್​ನಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿಯೇ ಇದೆ.

ಸೆಲೆಬ್ರಿಟಿಗಳು ಹೋಟೆಲ್ ಉದ್ಯಮ ನಡೆಸೋದು ಹೊಸದೇನೂ ಅಲ್ಲ. ಸೋನು ಸೂದ್ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಕೂಡ ಅಮೆರಿಕದ ಪ್ರಮುಖ ನಗರವಾದ ನ್ಯೂಯಾರ್ಕ್​ನಲ್ಲಿ ರೆಸ್ಟೋರೆಂಟ್ ಆರಂಭಿಸಿದ್ದರು. ಇದಕ್ಕೆ ಸೋನಾ ಎಂದು ಹೆಸರು ಇಡಲಾಗಿತ್ತು. ಉದ್ಯಮಿ ಮನೀಶ್ ಕೆ. ಗೋಯಲ್ ಜೊತೆಗೂಡಿ ಅವರು ಈ ರೆಸ್ಟೋರೆಂಟ್ ಆರಂಭಿಸಿದ್ದರು. ಆದರೆ, ಈಗ ಅವರು ಉದ್ಯಮದಿಂದ ಹೊರ ಬಂದಿದ್ದಾರೆ.

ಹಾಡುವಾಗ ನಿಕ್ ಜೋನಸ್ ಕಡೆ ಬ್ರಾ ಎಸೆದ ಮಹಿಳೆ; ಪ್ರಿಯಾಂಕಾ ಚೋಪ್ರಾ ಪತಿಯ ರಿಯಾಕ್ಷನ್ ಏನು?

2021ರ ಸಂದರ್ಭದಲ್ಲಿ ‘ಸೋನಾ’ ರೆಸ್ಟೋರೆಂಟ್​ ಆರಂಭ ಆಗಿತ್ತು. ನ್ಯೂಯಾರ್ಕ್​ನಲ್ಲಿರುವ ಈ ರೆಸ್ಟೋರೆಂಟ್​​​ನಲ್ಲಿ ಪ್ರಮುಖವಾಗಿ ಭಾರತದ ಖಾದ್ಯಗಳನ್ನು ಸಿದ್ಧಪಡಿಸಲಾಗುತ್ತಿತ್ತು. ಪ್ರಿಯಾಂಕಾ ಚೋಪ್ರಾ ಅವರು ನಡೆಸುತ್ತಿರುವ ರೆಸ್ಟೋರೆಂಟ್ ಎನ್ನುವ ಕಾರಣಕ್ಕೆ ಇದಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಈಗ ಎರಡು ವರ್ಷಗಳ ಬಳಿಕ ಅವರು ಈ ಉದ್ಯಮದಿಂದ ಹೊರ ನಡೆದಿರುವುದಾಗಿ ಘೋಷಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎಂಬುದು ರಿವೀಲ್ ಆಗಿಲ್ಲ. ಬಿಸ್ನೆಸ್ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಈ ರೆಸ್ಟೋರೆಂಟ್​​ಗೂ ಅವರಿಗೂ ಯಾವುದೇ ರೀತಿಯಲ್ಲಿ ಸಂಬಂಧ ಇರುವುದಿಲ್ಲ.

ಪ್ರಿಯಾಂಕಾ ಚೋಪ್ರಾಗೆ ವಿಶೇಷ ರೀತಿಯಲ್ಲಿ ವಿಶ್ ಮಾಡಿದ ತಂಗಿ ಪರಿಣೀತಿ

ಪ್ರಿಯಾಂಕಾ ಚೋಪ್ರಾ ಹಾಗೂ ಮನೀಶ್ ಗೋಯಲ್ 2019ರಲ್ಲೇ ನ್ಯೂಯಾರ್ಕ್​ನಲ್ಲಿ ಜಾಗ ನಿಗದಿ ಮಾಡಿದ್ದರು. ಅದನ್ನು ಬಾಡಿಗೆ ತೆದುಕೊಂಡು ಪೂಜಾ ಕಾರ್ಯ ಮಾಡಿದ್ದರು. 2020ರಲ್ಲಿ ಕೊವಿಡ್ ಬಂದಿದ್ದರಿಂದ ಹೋಟೆಲ್ ನಿರ್ಮಾಣ ಕಾರ್ಯ ವಿಳಂಬ ಆಯಿತು. 2021ರ ಮಾರ್ಚ್​ ವೇಳೆಗೆ ರೆಸ್ಟೋರೆಂಟ್ ಆರಂಭ ಆಯಿತು. ಈ ಬಗ್ಗೆ ಟ್ವೀಟ್ ಮಾಡಿದ್ದ ಪ್ರಿಯಾಂಕಾ, ರೆಸ್ಟೋರೆಂಟ್ ಓಪನ್ ಆಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಜೊತೆಗೆ ಮನೀಶ್ ಅವರಿಗೆ ಧನ್ಯವಾದ ತಿಳಿಸಿದ್ದರು. ಆದರೆ, ಈಗ ಅವರು ಏಕಾಏಕಿ ಈ ಬಿಸ್ನೆಸ್​ನಿಂದ ಹೊರ ನಡೆದಿದ್ದಾರೆ.

ರೆಸ್ಟೋರೆಂಟ್ ಆರಂಭದ ವೇಳೆ ಪ್ರಿಯಾಂಕಾ ಚೋಪ್ರಾ ಮಾಡಿದ್ದ ಟ್ವೀಟ್​:

ಪ್ರಿಯಾಂಕಾ ಚೋಪ್ರಾ ನಟನೆಯ ‘ಸಿಟಾಡೆಲ್’ ಸೀರಿಸ್ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಇತ್ತೀಚೆಗೆ ರಿಲೀಸ್ ಆಯಿತು. ಇದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ಪ್ರಿಯಾಂಕಾ ಚೋಪ್ರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಮಗಳು ಮಾಲ್ತಿ ಮೇರಿ ಚೋಪ್ರಾ ಜೋನಸ್ ಆರೈಕೆಯಲ್ಲೂ ತೊಡಗಿಕೊಂಡಿದ್ದಾರೆ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು