AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾ ನನ್ನ ಅವಕಾಶ ಕಿತ್ತುಕೊಂಡರು; ಮೀರಾ ಚೋಪ್ರಾ ಗಂಭೀರ ಆರೋಪ

ಮೀರಾ ಚೋಪ್ರಾ ಟಾಲಿವುಡ್​ನಲ್ಲಿ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ಪವನ್​ ಕಲ್ಯಾಣ್​ ನಟನೆಯ ಬಂಗಾರಮ್ ಸೇರಿ ಕೆಲ ದಕ್ಷಿಣ ಭಾರತದ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ನನ್ನ ಅವಕಾಶ ಕಿತ್ತುಕೊಂಡರು; ಮೀರಾ ಚೋಪ್ರಾ ಗಂಭೀರ ಆರೋಪ
ಪ್ರಿಯಾಂಕಾ ಚೋಪ್ರಾ ಮತ್ತು ಮೀರಾ ಚೋಪ್ರಾ
ರಾಜೇಶ್ ದುಗ್ಗುಮನೆ
| Edited By: |

Updated on: Apr 29, 2021 | 4:29 PM

Share

ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಮಾತ್ರವಲ್ಲ ಹಾಲಿವುಡ್​ನಲ್ಲೂ ಗುರುತಿಸಿಕೊಂಡವರು. ಖ್ಯಾತ ಪಾಪ್​ ಸಿಂಗರ್​ ನಿಕ್​ ಜೋನಸ್​ ಅವರನ್ನು ವರಿಸಿದ ನಂತರದಲ್ಲಿ ಪ್ರಿಯಾಂಕಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಈ ಮಧ್ಯೆ ಪ್ರಿಯಾಂಕಾ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಅದು ಅವರ ಸೋದರ ಸಂಬಂಧಿಯಿಂದಲೇ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಮೀರಾ ಚೋಪ್ರಾ ಟಾಲಿವುಡ್​ನ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ಪವನ್​ ಕಲ್ಯಾಣ್​ ನಟನೆಯ ಬಂಗಾರಮ್ ಸೇರಿ ಕೆಲ ದಕ್ಷಿಣ ಭಾರತದ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂಥ ಯಶಸ್ಸು ಸಿಗಲೇ ಇಲ್ಲ. ಬಾಲಿವುಡ್ ಕೂಡ ಅವರ ಕೈ ಹಿಡಿಯಲಿಲ್ಲ. ಇದೆಲ್ಲವುದಕ್ಕೂ ಪ್ರಿಯಾಂಕಾ ಚೋಪ್ರಾ ಅವರೇ ಕಾರಣ ಎಂದು ಮೀರಾ ಚೋಪ್ರಾ ಆರೋಪಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರ ಸೋದರ ಸಂಬಂಧಿ ಮೀರಾ ಈ ಬಗ್ಗೆ ಮಾತನಾಡಿದ್ದಾರೆ. ನಾನು ಬಾಲಿವುಡ್​ಗೆ ಕಾಲಿಟ್ಟಾಗ ಪ್ರಿಯಾಂಕಾ ಚೋಪ್ರಾ ಸಂಬಂಧಿ ಎಂದು ನನ್ನನ್ನು ಗುರುತಿಸುತ್ತಿದ್ದರು. ನನ್ನನ್ನು ಪ್ರಿಯಾಂಕಾಗೆ ಹೋಲಿಕೆ ಮಾಡುತ್ತಿದ್ದರು. ಆದರೆ, ನನಗೆ ಸಿನಿಮಾ ಆಫರ್​ ಸಿಗದಿರಲು ಅವರೇ ಕಾರಣ. ನನ್ನ ಸಿನಿಮಾಗೆ ಹಣ ಹಾಕಲು ಯಾರೂ ಮುಂದೆ ಬರುತ್ತಿರಲಿಲ್ಲ. ಪ್ರಿಯಾಂಕಾ ಎಂದಿಗೂ ನನ್ನ ಸಹಾಯಕ್ಕೆ ಬಂದಿಲ್ಲ ಎಂದು ಮೀರಾ ಹೇಳಿಕೊಂಡಿದ್ದಾರೆ.

ನಾನು ಸಿನಿಮಾ ಹಿನ್ನೆಲೆಯ ಕುಟುಂಬದಿಂದ ಬಂದಿದ್ದೇನೆ ಎನ್ನುವುದು ಮಾತ್ರ ನನ್ನ ಪಾಲಿಗೆ ಇದ್ದಿದ್ದು. ಆದರೆ, ಅದರಿಂದ ಯಾವುದೇ ಪ್ರಯೋಜನ ಆಗಲಿಲ್ಲ. ಅದರಿಂದ ಉಂಟಾದ ತೊಂದರೆಯೇ ಹೆಚ್ಚು. ನಾನು ಚಿತ್ರರಂಗದಲ್ಲಿ ತುಂಬಾನೇ ಕಷ್ಟಪಟ್ಟಿದ್ದೇನೆ ಎಂದು ಮೀರಾ ಹೇಳಿಕೊಂಡಿದ್ದಾರೆ.

ಮೀರಾ ಚೋಪ್ರಾ ಬಾಲಿವುಡ್​ನಲ್ಲಿ ಉಳಿದುಕೊಳ್ಳಲು ಪ್ರಯತ್ನಿಸುತ್ತಿರಬೇಕಾದರೆ ಪ್ರಿಯಾಂಕಾ ಹಾಲಿವುಡ್​ಗೆ ಹಾರಿದ್ದರು. ಈ ವಿಚಾರದಲ್ಲೂ ಮೀರಾ ಅವರಿಗೆ ಬೇಸರ ಇದೆ. ಪರಿಣೀತಿ ಚೋಪ್ರಾ ಕೂಡ ಪ್ರಿಯಾಂಕಾ ಚೋಪ್ರಾ ಕುಟುಂಬದಿಂದಲೇ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ:  Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ