AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?

ಬಾಲಿವುಡ್ ಮತ್ತು ಹಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ ತುಂಬ ಬೇಡಿಕೆ ಇದೆ. ರಾಜಮೌಳಿ ನಿರ್ದೇಶನದ ಹೊಸ ಸಿನಿಮಾ ಅವರೇ ನಾಯಕಿ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ. ಮಹೇಶ್ ಬಾಬುಗೆ ಜೋಡಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಾರೆ ಎನ್ನಲಾಗಿದೆ.

ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?
Mahesh Babu, Priyanka Chopra
ಮದನ್​ ಕುಮಾರ್​
|

Updated on: Jan 31, 2025 | 9:28 PM

Share

ಎಸ್​.ಎಸ್​. ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡರು. ಈಗ ಅವರ ಮುಂದಿನ ಸಿನಿಮಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಟಾಲಿವುಡ್​ ಸ್ಟಾರ್​ ನಟ ಮಹೇಶ್ ಬಾಬು ಜೊತೆ ರಾಜಮೌಳಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ ಅವರು ಈ ಸಿನಿಮಾಗೆ ನಾಯಕಿಯಾಗಲಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ಪಡೆಯುತ್ತಿರುವ ಸಂಭಾವನೆ ಮೊತ್ತ ಎಷ್ಟು ಎಂಬುದು ಕೇಳಿ ಎಲ್ಲರೂ ಹೌಹಾರಿದ್ದಾರೆ.

ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ ಅವರು ‘ಎಸ್​ಎಸ್​ಎಂಬಿ 29’ ಸಿನಿಮಾಗೆ ಬರೋಬ್ಬರಿ 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಸಿನಿಮಾ ಅದ್ದೂರಿ ಬಜೆಟ್​ನಲ್ಲಿ ತಯಾರಾಗುತ್ತಿದೆ. ಹಾಗಾಗಿ ನಿರ್ಮಾಪಕರು ಪ್ರಿಯಾಂಕಾ ಚೋಪ್ರಾಗೆ ಇಷ್ಟು ಸಂಭಾವನೆ ನೀಡಲು ಸಿದ್ಧರಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಸಿನಿಮಾ ಸಲುವಾಗಿಯೇ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಿಂದ ಹೈದರಾಬಾದ್​ಗೆ ಬಂದಿದ್ದಾರೆ.

ಅಮೆರಿಕದ ಗಾಯಕ ನಿಕ್ ಜೋನಸ್ ಜೊತೆ ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಲ್ಲಿ ನೆಲೆಸಿದ್ದಾರೆ. ಅವರು ಬಾಲಿವುಡ್ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಬಹಳ ಸಮಯ ಆಗಿದೆ. ಈಗ ಅವರಿಗೆ ಹಾಲಿವುಡ್​ನಲ್ಲೂ ಡಿಮ್ಯಾಂಡ್ ಇದೆ. ಅದಕ್ಕೆ ತಕ್ಕಂತೆ ಸಂಭಾವನೆ ಕೂಡ ಜಾಸ್ತಿ ಆಗಿದೆ. ಟಾಲಿವುಡ್ ಸಿನಿಮಾದಲ್ಲಿ ಅವರು ನಟಿಸಿದರೆ ಜಾಗತಿಕ ಮಟ್ಟದಲ್ಲಿ ಚಿತ್ರಕ್ಕೆ ಹೈಪ್ ಸಿಗುತ್ತದೆ. ಹಾಗಾಗಿ ದೊಡ್ಡ ಸಂಭಾವನೆಗೆ ಅವರು ಬೇಡಿಕೆ ಇಟ್ಟಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ಇದನ್ನೂ ಓದಿ: ರಾಜಮೌಳಿಯ ಮುಂದಿನ ಸಿನಿಮಾ ಬಗ್ಗೆ ತಂದೆ ಕೊಟ್ಟರು ಮಾಹಿತಿ

ಮಹೇಶ್ ಬಾಬು ಅವರು ‘ಎಸ್​ಎಸ್​ಎಂಬಿ 29’ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್ ಕೂಡ ಬದಲಾಗಲಿದೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದ್ದು, ಆ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ. ಎಂದಿನಂತೆ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ಈ ಸಿನಿಮಾಗೆ ಕಥೆ ಬರೆದಿದ್ದಾರೆ. ಎಂಎಂ ಕೀರವಾಣಿ ಅವರು ಸಂಗೀತ ನೀಡುತ್ತಿದ್ದಾರೆ. ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಎಂಬ ಕಾರಣಕ್ಕೆ ಅಭಿಮಾನಿಗಳ ಮನದಲ್ಲಿ ಸಖತ್ ನಿರೀಕ್ಷೆ ಮನೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು