AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?

ಬಾಲಿವುಡ್ ಮತ್ತು ಹಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ ತುಂಬ ಬೇಡಿಕೆ ಇದೆ. ರಾಜಮೌಳಿ ನಿರ್ದೇಶನದ ಹೊಸ ಸಿನಿಮಾ ಅವರೇ ನಾಯಕಿ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ. ಮಹೇಶ್ ಬಾಬುಗೆ ಜೋಡಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಾರೆ ಎನ್ನಲಾಗಿದೆ.

ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?
Mahesh Babu, Priyanka Chopra
ಮದನ್​ ಕುಮಾರ್​
|

Updated on: Jan 31, 2025 | 9:28 PM

Share

ಎಸ್​.ಎಸ್​. ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡರು. ಈಗ ಅವರ ಮುಂದಿನ ಸಿನಿಮಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಟಾಲಿವುಡ್​ ಸ್ಟಾರ್​ ನಟ ಮಹೇಶ್ ಬಾಬು ಜೊತೆ ರಾಜಮೌಳಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ ಅವರು ಈ ಸಿನಿಮಾಗೆ ನಾಯಕಿಯಾಗಲಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ಪಡೆಯುತ್ತಿರುವ ಸಂಭಾವನೆ ಮೊತ್ತ ಎಷ್ಟು ಎಂಬುದು ಕೇಳಿ ಎಲ್ಲರೂ ಹೌಹಾರಿದ್ದಾರೆ.

ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ ಅವರು ‘ಎಸ್​ಎಸ್​ಎಂಬಿ 29’ ಸಿನಿಮಾಗೆ ಬರೋಬ್ಬರಿ 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಸಿನಿಮಾ ಅದ್ದೂರಿ ಬಜೆಟ್​ನಲ್ಲಿ ತಯಾರಾಗುತ್ತಿದೆ. ಹಾಗಾಗಿ ನಿರ್ಮಾಪಕರು ಪ್ರಿಯಾಂಕಾ ಚೋಪ್ರಾಗೆ ಇಷ್ಟು ಸಂಭಾವನೆ ನೀಡಲು ಸಿದ್ಧರಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಸಿನಿಮಾ ಸಲುವಾಗಿಯೇ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಿಂದ ಹೈದರಾಬಾದ್​ಗೆ ಬಂದಿದ್ದಾರೆ.

ಅಮೆರಿಕದ ಗಾಯಕ ನಿಕ್ ಜೋನಸ್ ಜೊತೆ ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಲ್ಲಿ ನೆಲೆಸಿದ್ದಾರೆ. ಅವರು ಬಾಲಿವುಡ್ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಬಹಳ ಸಮಯ ಆಗಿದೆ. ಈಗ ಅವರಿಗೆ ಹಾಲಿವುಡ್​ನಲ್ಲೂ ಡಿಮ್ಯಾಂಡ್ ಇದೆ. ಅದಕ್ಕೆ ತಕ್ಕಂತೆ ಸಂಭಾವನೆ ಕೂಡ ಜಾಸ್ತಿ ಆಗಿದೆ. ಟಾಲಿವುಡ್ ಸಿನಿಮಾದಲ್ಲಿ ಅವರು ನಟಿಸಿದರೆ ಜಾಗತಿಕ ಮಟ್ಟದಲ್ಲಿ ಚಿತ್ರಕ್ಕೆ ಹೈಪ್ ಸಿಗುತ್ತದೆ. ಹಾಗಾಗಿ ದೊಡ್ಡ ಸಂಭಾವನೆಗೆ ಅವರು ಬೇಡಿಕೆ ಇಟ್ಟಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ಇದನ್ನೂ ಓದಿ: ರಾಜಮೌಳಿಯ ಮುಂದಿನ ಸಿನಿಮಾ ಬಗ್ಗೆ ತಂದೆ ಕೊಟ್ಟರು ಮಾಹಿತಿ

ಮಹೇಶ್ ಬಾಬು ಅವರು ‘ಎಸ್​ಎಸ್​ಎಂಬಿ 29’ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್ ಕೂಡ ಬದಲಾಗಲಿದೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದ್ದು, ಆ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ. ಎಂದಿನಂತೆ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ಈ ಸಿನಿಮಾಗೆ ಕಥೆ ಬರೆದಿದ್ದಾರೆ. ಎಂಎಂ ಕೀರವಾಣಿ ಅವರು ಸಂಗೀತ ನೀಡುತ್ತಿದ್ದಾರೆ. ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಎಂಬ ಕಾರಣಕ್ಕೆ ಅಭಿಮಾನಿಗಳ ಮನದಲ್ಲಿ ಸಖತ್ ನಿರೀಕ್ಷೆ ಮನೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!