AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

Priyanka Chopra: ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್​​ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ ವೈರಲ್ ಆಗಿದೆ.

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ
Priyanka Chopra
ಮಂಜುನಾಥ ಸಿ.
|

Updated on: Apr 01, 2026 | 11:57 AM

Share

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಪ್ರಸ್ತುತ ಹಾಲಿವುಡ್​​ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​​ನೊಂದಿಗೆ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿದ್ದು ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಭಾರತೀಯ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್​​ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ ವೈರಲ್ ಆಗಿದೆ.

ಪ್ರಿಯಾಂಕಾ ಚೋಪ್ರಾ, ಹಾಲಿವುಡ್​​ನಲ್ಲಿ ನೆಲೆಸಿದ್ದರೂ ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಮರೆತಿಲ್ಲ. ಹಾಲಿವುಡ್​​ನಲ್ಲಿ ನೆಲೆಸಿದ್ದರೂ ಅಲ್ಲಿಯೂ ಸಹ ತಪ್ಪದೇ ಭಾರತೀಯ ಸಂಪ್ರದಾಯದ ಹಬ್ಬಗಳ ಆಚರಣೆಗಳನ್ನು ಸಹ ಮಾಡುತ್ತಲೇ ಇರುತ್ತಾರೆ. ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಭಾರತಕ್ಕೆ ಬಂದಾಗೆಲ್ಲ ಇಲ್ಲಿನ ಕೆಲ ದೇವಾಲಯಗಳಿಗೆ ಸಹ ಭೇಟಿ ನೀಡುತ್ತಾರೆ. ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬಂದಿದ್ದರು. ಈ ಭೇಟಿಯ ಸಂದರ್ಭದಲ್ಲಿ ಅವರು ಅಮೃತಸರದ ಗೋಲ್ಡನ್ ಟೆಂಪಲ್​​ಗೆ ಭೇಟಿ ನೀಡಿದ್ದರು.

ದರ್ಬಾರ್ ಸಾಹೀಬ್ ಎಂದು ಕರೆಯಲಾಗುವ ಸಿಖ್ಖರ ಈ ಪವಿತ್ರ ದೇವಾಲಯದಲ್ಲಿ ಭಕ್ತರು ಸೇವೆ ಮಾಡುತ್ತಾರೆ. ಕಸ ಗುಡಿಸುವುದು, ಪಾತ್ರೆಗಳನ್ನು ತೊಳೆಯುವುದು, ಅಡುಗೆ ಮಾಡುವುದು, ಬಡಿಸುವುದು ಹೀಗೆ ನಾನಾ ರೀತಿಯ ಸೇವೆಗಳನ್ನು ಭಕ್ತರು ಮಾಡುತ್ತಾರೆ. ದೇವಾಲಯಕ್ಕೆ ಭೇಟಿ ನೀಡಿದ್ದ ನಟಿ ಪ್ರಿಯಾಂಕಾ ಚೋಪ್ರಾ ಸಹ ಸೇವೆ ಸಲ್ಲಿಸಿದ್ದು, ದೇವಾಲಯಕ್ಕೆ ಬಂದ ಭಕ್ತರು ಊಟ ತಿಂದ ತಟ್ಟೆಗಳು, ಲೋಟಗಳನ್ನು ತೊಳೆದಿದ್ದಾರೆ. ನಟಿ ಪ್ರಿಯಾಂಕಾ ಅವರು ಈ ‘ಬರ್ತನ್ ಸೇವಾ’ (ಪಾತ್ರೆಗಳ್ನು ತೊಳೆಯುವ ಸೇವೆ) ಮಾಡುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಪ್ರಿಯಾಂಕಾ ಚೋಪ್ರಾ ಅವರ ಈ ಸೇವೆಯ ವಿಡಿಯೋಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಹಲವರು ಪ್ರಿಯಾಂಕಾರ ಸೇವೆಯನ್ನು ಮೆಚ್ಚಿ ಕಮೆಂಟ್ ಮಾಡಿದ್ದು, ‘ಗ್ಲೋಬಲ್ ಸ್ಟಾರ್ ಆದರೂ ಸಹ ತಮ್ಮ ಮೂಲವನ್ನು ಪ್ರಿಯಾಂಕಾ ಮರೆತಿಲ್ಲ’ ಎಂದಿದ್ದಾರೆ. ಇನ್ನು ಕೆಲವರು, ‘ವಿದೇಶಿಗನ ಮದುವೆಯಾಗಿ, ವಿದೇಶದಲ್ಲಿ ನೆಲೆಸಿದ್ದರೂ ಸಹ ಭಾರತೀಯ ಸಂಸ್ಕೃತಿಗೆ ಗೌರವ ಕೊಡುವುದು ಪ್ರಶಂಸನಾರ್ಹ’ ಎಂದಿದ್ದಾರೆ. ಆದರೆ ಕೆಲವರು ಇದರಲ್ಲೂ ಕೊಂಕು ಹುಡುಕುವ ಕೆಲಸವನ್ನೂ ಸಹ ಮಾಡಿದ್ದಾರೆ. ‘ತಮ್ಮ ಮುಂದಿನ ಸಿನಿಮಾದ ಪ್ರಚಾರಕ್ಕಾಗಿ ಹೀಗೆ ಪೂರ್ವ ಸಿದ್ಧತೆ ಮಾಡುತ್ತಿದ್ದಾರೆ’ ಎಂದೆಲ್ಲ ವ್ಯಂಗ್ಯ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ನಟನೆಯ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಸಿನಿಮಾದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾದವು. ಇದೀಗ ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಹಾಲಿವುಡ್ ಆಕ್ಷನ್ ಸಿನಿಮಾ ‘ಜಡ್ಜ್​ಮೆಂಟ್ ಡೇ’ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಆ ಸಿನಿಮಾ ಸಹ ಇದೇ ವರ್ಷ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ