AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣಿನ ಶಾಪ; ಈ ವಾರ ಮನೆಯಿಂದ ಹೊರ ಹೋಗೋ ಸ್ಪರ್ಧಿ ಶಮಂತ್?

ಕಳಪೆ ಪಟ್ಟ ಪಡೆದು ಜೈಲು ಸೇರಿದ ನಂತರದಲ್ಲಿ ಪ್ರಿಯಾಂಕಾ ಅವರನ್ನು ಶಮಂತ್​ ಮಾತನಾಡಿಸೋಕೆ ಬಂದಿದ್ದಾರೆ. ಆಗ ಪ್ರಿಯಾಂಕಾ ಸಿಡುಕಿನಿಂದಲೇ ಉತ್ತರಿಸಿದ್ದಾರೆ.

ಹೆಣ್ಣಿನ ಶಾಪ; ಈ ವಾರ ಮನೆಯಿಂದ ಹೊರ ಹೋಗೋ ಸ್ಪರ್ಧಿ ಶಮಂತ್?
ಬಿಗ್​ಬಾಸ್​ ಸ್ಪರ್ಧಿ ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on:May 03, 2021 | 2:57 PM

Share

ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ಆ್ಯಕ್ಟಿವ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಜಸ್ಟ್​ ಬಚಾವ್​ ಆಗಿದ್ದ ಅವರು, ಒಂಬತ್ತನೇ ವಾರ ಅತ್ಯುತ್ತಮ ಪರ್ಫಾರ್ಮೆನ್ಸ್​ ತೋರಿ ಪದಕ ಗಳಿಸಿಕೊಂಡಿದ್ದಾರೆ. ಆದಾಗ್ಯೂ ಶಮಂತ್​ ಮೇಲೆ ಪ್ರಿಯಾಂಕಾ ತಿಮ್ಮೇಶ್​ ಅಸಮಾಧಾನ ಹೊರಹಾಕಿದ್ದಾರೆ. ಅಷ್ಟೇ ಅಲ್ಲ, 10ನೇ ವಾರ ನೀನೇ ಮನೆಯಿಂದ ಹೊರಹೋಗು ಎಂದು ಶಾಪ ಹಾಕಿದ್ದಾರೆ.

ಈ ವಾರ ಕಳಪೆ ಪಟ್ಟ ನೀಡುವಾಗ ಎಲ್ಲರೂ ಪ್ರಿಯಾಂಕಾ ತಿಮ್ಮೇಶ್​ ಹೆಸರನ್ನು ತೆಗೆದುಕೊಂಡರು. ಇದಕ್ಕೆ ಶಮಂತ್​ ಕೂಡ ಹೊರತಾಗಿರಲಿಲ್ಲ. ಪ್ರಿಯಾಂಕಾ ಯಾರ ಜತೆಯೂ ಅಷ್ಟಾಗಿ ಬೆರೆಯುತ್ತಿಲ್ಲ ಎನ್ನುವ ಕಾರಣ ನೀಡಿ ಅವರಿಗೆ ಕಳಪೆ ಪಟ್ಟ ಕಟ್ಟಿದರು ಶಮಂತ್. ಅತಿ ಹೆಚ್ಚು ವೋಟ್​ ಬಿದ್ದ ಕಾರಣ ಪ್ರಿಯಾಂಕಾ ಜೈಲು ಪಾಲಾದರು. ಇದು ಪ್ರಿಯಾಂಕಾಗೆ ಅವಮಾನ ತಂದಿದೆ. ಅಲ್ಲದೆ, ಈ ಬಗ್ಗೆ ಅವರು ಸಿಟ್ಟಾಗಿದ್ದಾರೆ.

ಕಳಪೆ ಪಟ್ಟ ಪಡೆದು ಜೈಲು ಸೇರಿದ ನಂತರದಲ್ಲಿ ಪ್ರಿಯಾಂಕಾ ಅವರನ್ನು ಶಮಂತ್​ ಮಾತನಾಡಿಸೋಕೆ ಬಂದಿದ್ದಾರೆ. ಆಗ ಪ್ರಿಯಾಂಕಾ ಸಿಡುಕಿನಿಂದಲೇ ಉತ್ತರಿಸಿದ್ದಾರೆ. ನಾನು ಜೈಲಿನಿಂದ ಹೊರ ಬಂದಮೇಲೆ ನಿನ್ನ ಜೊತೆ ಸೇರುವುದಿಲ್ಲ. ನನಗೆ ಇಷ್ಟಬಂದವರ ಜೊತೆಗೆ ನಾನು ಇರುತ್ತೇನೆ. ನಾನಿಲ್ಲಿಗೆ ಸಂಬಂಧಗಳನ್ನು ಹುಟ್ಟುಹಾಕೋಕೆ ಬಂದಿಲ್ಲ. ಹೊರ ಜಗತ್ತಿಗೆ ನಾನು ಏನು ಎಂಬುದನ್ನು ತೋರಿಸಬೇಕಿದೆ ಎಂದರು.

ಈ ಮಾತನ್ನು ಕೇಳಿ ಶಮಂತ್ ಕಂಗಾಲಾದರು. ಅಷ್ಟೇ ಅಲ್ಲ, ಬೆಣ್ಣೆ ಸವರೋಕೆ ಬಂದರು. ಆದರೆ, ಪ್ರಿಯಾಂಕಾ ಇದಕ್ಕೆ ಸೊಪ್ಪು ಹಾಕಲಿಲ್ಲ. ಮುಂದಿನ ವಾರವೇ ಈ ಮನೆಯಿಂದ ನೀನು ಹೊರಗೆ ಹೋಗು. ನಂದೇ ಶಾಪ. ನೀನು ಬಂದು 10ನೇ ವಾರಕ್ಕೆ ಇವಾಗ ಚೆನ್ನಾಗಿ ಆಡ್ತಾ ಇದ್ದಾನೆ, ಪರವಾಗಿಲ್ಲ ಎಂದು ಹೇಳಿಸಿಕೊಳ್ತೀಯಾ? ನಾಚಿಕೆ ಆಗಬೇಕು ನಿನಗೆ ಥೂ ಎಂದು ಬೈದರು.

ಅಂದಹಾಗೆ ಶಮಂತ್​ ಈ ವಾರ ನಾಮಿನೇಷನ್​ ಲಿಸ್ಟ್​ನಲ್ಲಿ ಇಲ್ಲ. ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ನಾಮಿನೇಟ್​ ಆಗಿದ್ದಾರೆ. ಇವರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗುತ್ತಾರೆ.

ಇದನ್ನೂ ಓದಿ: Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!

Published On - 2:55 pm, Mon, 3 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ