AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಿಂದ ಹೊರ ಬಂದರೂ ನಿಂತಿಲ್ಲ ಟಾಸ್ಕ್​; ಪ್ರಿಯಾಂಕಾ ತಿಮ್ಮೇಶ್ ವಿಡಿಯೋ ವೈರಲ್​

ಬಿಗ್​ ಬಾಸ್​ ಮನೆಯಲ್ಲಿ ಬಿಸ್ಕತ್​ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಹಣೆಯ ಮೇಲೆ ಬಿಸ್ಕತ್​ ಇಟ್ಟುಕೊಂಡು ಅದನ್ನು ಕೈನಲ್ಲಿ ಮುಟ್ಟದೇ ಜಾರಿಸುತ್ತಾ ಬಾಯಿಗೆ ಹಾಕಿಕೊಳ್ಳಬೇಕು. ಈ ಟಾಸ್ಕ್​ ಸ್ಪರ್ಧಿಗಳಿಗೆ ಸಾಕಷ್ಟು ಮಜ ನೀಡಿತ್ತು.

ಬಿಗ್​ ಬಾಸ್​ ಮನೆಯಿಂದ ಹೊರ ಬಂದರೂ ನಿಂತಿಲ್ಲ ಟಾಸ್ಕ್​; ಪ್ರಿಯಾಂಕಾ ತಿಮ್ಮೇಶ್ ವಿಡಿಯೋ ವೈರಲ್​
ಪ್ರಿಯಾಂಕಾ ತಿಮ್ಮೇಶ್
ರಾಜೇಶ್ ದುಗ್ಗುಮನೆ
| Edited By: |

Updated on: May 27, 2021 | 4:04 PM

Share

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ನಿತ್ಯ ಒಂದೊಂದು ಟಾಸ್ಕ್​ ನೀಡಲಾಗುತ್ತಿತ್ತು. ಎಲ್ಲಾ ಸ್ಪರ್ಧಿಗಳು ಇದನ್ನು ಖುಷಿಯಿಂದಲೇ ಮಾಡಿದ್ದರು. ಕೆಲವರು ಈ ಟಾಸ್ಕ್​​ ಯಶಸ್ವಿಗೊಳಿಸಲು ವಿಫಲರಾಗಿದ್ದರು.  ಹೀಗಾಗಿ, ಬಿಗ್​ ಬಾಸ್​ನಿಂದ ಹೊರಬಂದ ನಂತರದಲ್ಲಿ ಕೆಲ ಟಾಸ್ಕ್​ಗಳನ್ನು ಮನೆಯಲ್ಲೇ ಪ್ರಯತ್ನಿಸಿದ್ದಾರೆ​. ಪ್ರಿಯಾಂಕಾ ತಿಮ್ಮೇಶ್​ ಮನೆಯಲ್ಲೇ ಬಿಸ್ಕತ್​ ಟಾಸ್ಕ್​ ಮಾಡುತ್ತಿರುವ ಫನ್​ ವಿಡಿಯೋ ಒಂದು ಈಗ ಸಾಕಷ್ಟು ವೈರಲ್​ ಆಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಬಿಸ್ಕತ್​ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಹಣೆಯ ಮೇಲೆ ಬಿಸ್ಕತ್​ ಇಟ್ಟುಕೊಂಡು ಅದನ್ನು ಕೈನಲ್ಲಿ ಮುಟ್ಟದೇ ಜಾರಿಸುತ್ತಾ ಬಾಯಿಗೆ ಹಾಕಿಕೊಳ್ಳಬೇಕು. ಈ ಟಾಸ್ಕ್​ ಸ್ಪರ್ಧಿಗಳಿಗೆ ಸಾಕಷ್ಟು ಮಜ ನೀಡಿತ್ತು. ಇದು ನೋಡಿದಷ್ಟು ಸುಲಭವಿಲ್ಲ ಎಂಬುದೂ ಸ್ಪಷ್ಟವಾಗಿತ್ತು.

ಬಿಗ್​ ಬಾಸ್​ ಮನೆಯಲ್ಲಿ ನಡೆದ ಈ ಟಾಸ್ಕ್​ನಲ್ಲಿ ರಘು ಗೌಡ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಕಾಂಪಿಟೇಷನ್​ಗೆ ಇಳಿದಿದ್ದರು. ಎಲ್ಲರೂ ರಘು ಗೌಡ ಗೆಲ್ಲುತ್ತಾರೆ ಎಂದೇ ಭಾವಿಸಿದ್ದರು. ಆದರೆ, ಹಾಗಾಗಲೇ ಇಲ್ಲ. ಪ್ರಿಯಾಂಕಾ ತಿಮ್ಮೇಶ್​ ಅತ್ಯುತ್ತಮವಾಗಿ ಟಾಸ್ಕ್​ ಆಡುವ ಮೂಲಕ ಗೆದ್ದರು. ಈ ಮೂಲಕ ಮನೆಯವರ ಮೆಚ್ಚುಗೆಗೆ ಪಾತ್ರರಾದರು.

ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಮುಗಿದ ನಂತರ ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ಯಾರೂ ಮುಟ್ಟುವಂತಿರಲಿಲ್ಲ. ಹೀಗಾಗಿ, ಮತ್ತೊಮ್ಮೆ ಈ ಟಾಸ್ಕ್​ ಮಾಡಬೇಕು ಎಂದರೆ ಅದು ಅಸಾಧ್ಯವೇ ಆಗಿತ್ತು. ಹೀಗಾಗಿ, ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅಲ್ಲಿ ನೀಡಿದ್ದ ಟಾಸ್ಕ್​ಗಳನ್ನು ಪ್ರಯತ್ನ ಮಾಡುತ್ತಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್​ ಕೆಲವರ ಜತೆಗೂಡಿ ಬಿಸ್ಕತ್​ ಟಾಸ್ಕ್​ ಮಾಡಿದ್ದಾರೆ. ಆದರೆ, ಉಳಿದವರಿಗೆ ಈ ಟಾಸ್ಕ್​ ಪೂರ್ಣಗೊಳಿಸೋಕೆ ಸಾಧ್ಯವೇ ಆಗಿಲ್ಲ. ಆದರೆ, ಪ್ರಿಯಾಂಕಾ ತಿಮ್ಮೇಶ್​ ಮಾತ್ರ ಸುಲಭವಾಗಿ ಬಿಸ್ಕತ್​ ತಿಂದರು. ಈ ಮೂಲಕ ಮನೆಯಿಂದ ಹೊರಬಂದ ಮೇಲೂ ಅವರು ಟಾಸ್ಕ್​ ಗೆದ್ದರು.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ