AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಶಮಂತ್​ಗೆ ಲೈನ್​ ಹೊಡಿತಿದೀನಿ, ಆದರೆ…; ಮನದಾಳದ ಮಾತು ಹೇಳಿಕೊಂಡ ಪ್ರಿಯಾಂಕಾ

ಈಗೆಲ್ಲ ಲೈನ್​ ವರ್ಕೌಟ್​ ಆಗಲ್ಲ. ಇಂದಿನ ಕಾಲದಲ್ಲಿ ಲವ್ ಯೂ ಅಂತ ಹೇಳದೆ ಪ್ರೀತಿ ಮಾಡುತ್ತಾರೆ. ಮನಸ್ಸಿನ ಮೂಲಕವೇ ಮಾತನಾಡಿಕೊಳ್ಳುತ್ತಾರೆ ಎಂದು ಪ್ರಿಯಾಂಕಾ ಹೇಳಿದರು.

ನಾನು ಶಮಂತ್​ಗೆ ಲೈನ್​ ಹೊಡಿತಿದೀನಿ, ಆದರೆ...; ಮನದಾಳದ ಮಾತು ಹೇಳಿಕೊಂಡ ಪ್ರಿಯಾಂಕಾ
ಶಮಂತ್​-ಪ್ರಿಯಾಂಕಾ
ರಾಜೇಶ್ ದುಗ್ಗುಮನೆ
| Edited By: |

Updated on: May 08, 2021 | 7:20 AM

Share

ಬಿಗ್​ ಬಾಸ್​ ಮನೆಯಲ್ಲಿ ಕೆಲವೊಂದು ಲವ್​​ಸ್ಟೋರಿಗಳು ಅದಾಗೇ ಹುಟ್ಟಿಕೊಳ್ಳುತ್ತವೆ. ಇನ್ನೂ ಕೆಲವು ಲವ್​ಸ್ಟೋರಿಗಳನ್ನು ಕೆಲವರು ಹುಟ್ಟುಹಾಕಲು ಪ್ರಯತ್ನಿಸುತ್ತಾರೆ. ಈಗ ಬಿಗ್​ ಬಾಸ್​ ಮನೆಯಲ್ಲೂ ಅದೇ ನಡೆಯುತ್ತಿದೆ. ಶಮಂತ್​ ಬ್ರೋ ಗೌಡ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಅವರನ್ನು ಜೋಡಿ ಮಾಡಲು ಚಕ್ರವರ್ತಿ ಚಂದ್ರಚೂಡ್​ ಪ್ರಯತ್ನಿಸಿದ್ದಾರೆ. ಈ ವೇಳೆ ಪ್ರಿಯಾಂಕಾ ತಮ್ಮ ಮನಸ್ಸಿನಲ್ಲಿರುವುದನ್ನು ಹೇಳಿಕೊಂಡರು.

ಬಿಗ್​ ಬಾಸ್​ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಮಾತನಾಡುತ್ತಿದ್ದರು. ‘ಲೈನ್​ ಹೊಡ್ಯೋದು ಅಂದರೆ ಏನು’ ಎಂದು ಪ್ರಿಯಾಂಕಾ ಬಳಿ ಚಕ್ರವರ್ತಿ ಕೇಳಿದ್ದಾರೆ. ‘ಲೈನ್​ ಹೊಡೆಯೋದು ಅಂದ್ರೆ ನಾನು ಶಮಂತ್​ಗೆ ಹೊಡಿತೀನಲ್ಲ ಅದು. ಅವನು ಏನೋ ಮಾಡ್ತಾ ಇರುತ್ತಾನೆ. ನಾನು ಏನೋ ಮಾಡ್ತಾ ಇರುತ್ತೇನೆ. ಇಬ್ಬರೂ ಒಮ್ಮೆ ನೋಡ್ತೀವಿ. ಆಗ ನಾನು ನಗುತ್ತೇನೆ. ನನ್ನ ಪ್ರಕಾರ ಅದು ಲೈನ್​ ಹೊಡ್ಯೋದು’ ಎಂದು ಪ್ರಿಯಾಂಕಾ ವಿವರಣೆ ನೀಡಿದರು.

ಈ ಮಾತಿಗೆ ಚಕ್ರವರ್ತಿ ಅಚ್ಚರಿ ವ್ಯಕ್ತಪಡಿಸಿದರು. ಅಲ್ಲದೆ, ‘ಶಮಂತ್ ಒಳ್ಳೆಯ ಹುಡುಗ, ನೀನು ಆತನಿಗೆ ಲೈನ್​ ಹೊಡೆಯಬಹುದು’ ಎಂದರು. ಈ ವೇಳೆ ಪ್ರಿಯಾಂಕಾ ಮನದಾಳದ ಮಾತನ್ನು ಹೇಳಿಕೊಂಡರು. ನನಗೆ ಅವನು ಸೂಟ್​ ಆಗಲ್ಲ. ನನಗೆ ಇನ್ನೂ ಚೆನ್ನಾಗಿರೋ ಹುಡುಗಬೇಕು ಎಂದು ಮಾತು ಆರಂಭಿಸಿದರು.

‘ಈಗೆಲ್ಲ ಲೈನ್​ ವರ್ಕೌಟ್​ ಆಗಲ್ಲ. ಇಂದಿನ ಕಾಲದಲ್ಲಿ ಲವ್ ಯೂ ಅಂತ ಹೇಳದೆ ಪ್ರೀತಿ ಮಾಡುತ್ತಾರೆ. ಮನಸ್ಸಿನ ಮೂಲಕವೇ ಮಾತನಾಡಿಕೊಳ್ಳುತ್ತಾರೆ. ಇಷ್ಟ ಆದರೆ ಲವ್​ ಯೂ ಹೇಳೋದೇಕೆ? ಮಾತನಾಡದೆಯೂ ಇಬ್ಬರಿಗೂ ಗೊತ್ತಾಗುತ್ತದೆ. ನಡೆದುಕೊಳ್ಳುವ ರೀತಿಯಲ್ಲೇ ಗೊತ್ತಾಗುತ್ತದೆ,’ ಎಂದರು ಪ್ರಿಯಾಂಕಾ.

ಈ ವೇಳೆ ಪ್ರೀತಿ ಎಂದರೇನು ಎಂದು ಚಕ್ರರ್ತಿ ಪ್ರಶ್ನೆ ಎಸೆದರು. ಇದಕ್ಕೆ ಉತ್ತರಿಸಿದ ಪ್ರಿಯಾಂಕಾ ‘ಪ್ರೀತಿ ಎಂದರೆ, ಲವ್, ನಂಬಿಕೆ, ವಾತ್ಸಲ್ಯ, ವಿಶ್ವಾಸ, ಮಮತೆ. 21ರಿಂದ 26ವರೆಗೆ ಆಗೋದು ಮಾತ್ರ ನಿಜವಾದ ಲವ್’​ ಎಂದರು.

ಚಕ್ರವರ್ತಿ ಚಂದ್ರಚೂಡ್​ ಸುತ್ತಿ-ಬಳಸಿ ಶಮಂತ್​ ವಿಷಯಕ್ಕೆ ಪ್ರೀತಿಯನ್ನು ಎಳೆದುಕೊಂಡು ಹೋಗುತ್ತಿದ್ದರು. ಇದು ಪ್ರಿಯಾಂಕಾಗೆ ಅಸಮಾಧಾನ ತರಿಸಿದೆ. ನೀವು ಯಾವುದಾದರೂ ವಿಚಾರ ಹೇಳುವಾಗ ಅದನ್ನು ನಾನು ನೆಗ್ಲೆಟ್​ ಮಾಡುತ್ತೇನೆ ಎಂದರೆ ಅದು ನನಗೆ ಇಷ್ಟವಿಲ್ಲ ಎಂದರ್ಥ ಎಂದು ಕಠಿಣವಾಗಿಯೇ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ನಾನೇ ಮುಂದೆ ನಿಂತು ಮದುವೆ ಮಾಡಿಸುತ್ತೇನೆ; ಬಿಗ್​ ಬಾಸ್​ ಮನೆಯಲ್ಲಿ ಶಮಂತ್​-ಪ್ರಿಯಾಂಕಾ ಪ್ರೇಮಕಥೆ ಆರಂಭ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ