AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್​​​ಗೆ ನಿರಾಸೆ

Thalapathy Vijay: ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್​​ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ನ್ಯಾಯಾಲಯದಲ್ಲಿ ಸಹ ಚಿತ್ರತಂಡಕ್ಕೆ ನ್ಯಾಯ ವಿಳಂಬ ಆಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಸನಿಹದಲ್ಲೇ ಇದ್ದು, ಒಂದೊಮ್ಮೆ ಚುನಾವಣೆ ಘೋಷಣೆ ಆಗಿಬಿಟ್ಟರೆ ಸಿನಿಮಾ ಬಿಡುಗಡೆ ಎರಡು ತಿಂಗಳು ಮುಂದೂಡಲೇ ಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ಚಿತ್ರತಂಡವು, ಆಗಿದ್ದು ಆಗಲೆಂದು 20 ನಿಮಿಷಗಳ ದೃಶ್ಯಕ್ಕೆ ಕತ್ತರಿ ಹಾಕಲು ಒಪ್ಪಿದೆ ಎನ್ನಲಾಗುತ್ತಿದೆ.

‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್​​​ಗೆ ನಿರಾಸೆ
ಜನ ನಾಯಗನ್
ಮಂಜುನಾಥ ಸಿ.
|

Updated on: Feb 03, 2026 | 8:09 PM

Share

ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗಿರುವ ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್​​ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ನ್ಯಾಯಾಲಯದಲ್ಲಿ ಸಹ ಚಿತ್ರತಂಡಕ್ಕೆ ನ್ಯಾಯ ವಿಳಂಬ ಆಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಸನಿಹದಲ್ಲೇ ಇದ್ದು, ಒಂದೊಮ್ಮೆ ಚುನಾವಣೆ ಘೋಷಣೆ ಆಗಿಬಿಟ್ಟರೆ ಸಿನಿಮಾ ಬಿಡುಗಡೆ ಎರಡು ತಿಂಗಳು ಮುಂದೂಡಲೇ ಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ಚಿತ್ರತಂಡವು, ಆಗಿದ್ದು ಆಗಲೆಂದು 20 ನಿಮಿಷಗಳ ದೃಶ್ಯಕ್ಕೆ ಕತ್ತರಿ ಹಾಕಲು ಒಪ್ಪಿದೆ ಎನ್ನಲಾಗುತ್ತಿದೆ.

‘ಜನ ನಾಯಗನ್’ ಸಿನಿಮಾವು ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿದೆ. ಆದರೆ ವಿಜಯ್ ಅವರಿಗೆ ರಾಜಕೀಯವಾಗಿ ಅನುಕೂಲವಾಗಲೆಂದು ಕೆಲವು ದೃಶ್ಯಗಳನ್ನು, ಸಂಭಾಷಣೆಗಳನ್ನು ಸೇರಿಸಲಾಗಿದೆಯಂತೆ. ವಿಜಯ್ ಅವರ ರಾಜಕೀಯ ಪಕ್ಷದ ಸಿದ್ಧಾಂತ, ಆದರ್ಶಗಳ ಪ್ರಚಾರ ಮಾಡುವಂಥ ಕೆಲವು ಸಂಭಾಷಣೆಗಳಿವೆ, ಜೊತೆಗೆ ವಿಪಕ್ಷಗಳನ್ನು ಟೀಕೆ ಮಾಡುವ ಕೆಲವು ಸಂಭಾಷಣೆ, ದೃಶ್ಯಗಳು ಸಿನಿಮಾನಲ್ಲಿದ್ದು ಇದೇ ಕಾರಣಕ್ಕೆ ಸಿಬಿಎಫ್​​ಸಿ ‘ಜನ ನಾಯಗನ್’ಗೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿದೆ ಎನ್ನಲಾಗಿದೆ.

ನ್ಯಾಯಾಲಯದಲ್ಲಿ ಪ್ರಕರಣ ತಡವಾಗುವ ಸಂಭವ ಇರುವ ಕಾರಣ, ಚಿತ್ರತಂಡವು ಇದೀಗ ಎಲ್ಲ ರಾಜಕೀಯ ಸಂಬಂಧಿಸಿದ ದೃಶ್ಯಗಳಿಗೂ ಕತ್ತರಿ ಹಾಕಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಸಿನಿಮಾನಲ್ಲಿರುವ ರಾಜಕೀಯ ಅಂಶಗಳಿಂದಾಗಿಯೇ ಸಿನಿಮಾ ವಿವಾದಕ್ಕೆ ಸಿಲುಕಿದ್ದು, ವಿವಾದಕ್ಕೆ ಕಾರಣವಾದ ಎಲ್ಲ ದೃಶ್ಯಗಳು, ಸಂಭಾಷಣೆಗಳನ್ನು ತೆಗೆದು ಹಾಕಲು ನಿರ್ಮಾಪಕರು ನಿರ್ಧರಿಸಿದ್ದಾರಂತೆ. ಇದರಿಂದ, ನ್ಯಾಯಾಲಯದ ವಿಚಾರಣೆ ಇಲ್ಲದೆ, ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲಿದ್ದು, ಸಿನಿಮಾ ಬಿಡುಗಡೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ.

ಇದನ್ನೂ ಓದಿ:ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಮ್’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ. ಕೆಲವೇ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆ ಆಗಲಿದ್ದು, ತಮಿಳುನಾಡಿನ ಎಲ್ಲ ಕ್ಷೇತ್ರದಿಂದಲೂ ವಿಜಯ್ ಅವರ ಪಕ್ಷದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ‘ಜನ ನಾಯಗನ್’ ಸಿನಿಮಾವನ್ನು ತಮ್ಮ ಪಕ್ಷದ ಪ್ರಚಾರಕ್ಕೆ ಬಳಸುವ ಯೋಜನೆ ಹಾಕಿಕೊಂಡಿದ್ದರು ವಿಜಯ್, ಆದರೆ ಸಿನಿಮಾದ ಬಿಡುಗಡೆಯೇ ಇಕ್ಕಟ್ಟಿಗೆ ಸಿಲುಕಿದೆ.

‘ಜನ ನಾಯಗನ್’ ಸಿನಿಮಾವನ್ನು ಎಚ್ ವಿನೋದ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಲಯಾಳಂ ಸ್ಟಾರ್ ನಟಿ ಮಮಿತಾ ಬಿಜು ನಟಿಸಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಕೆವಿಎನ್​​ ನಿರ್ಮಾಣ ಸಂಸ್ಥೆಯ ಮಾಲೀಕ ವೆಂಕಟ್. ಸಂಗೀತ ನೀಡಿರುವುದು ಅನಿರುದ್ಧ್ ರವಿಚಂದ್ರನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ