AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನ್ಯಾರು? ಯಾವ ರಾಜ್ಯದವನು?’ ಪ್ರಕಾಶ್ ರೈಗೆ ತೆಲುಗು ನಿರ್ಮಾಪಕ ಪ್ರಶ್ನೆ

Prakash Raj-Bandla Ganesh: ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಅವರು ರಾಜಕೀಯದಲ್ಲಿ, ಸಾಮಾಜಿಕವಾಗಿಯೂ ಸಕ್ರಿಯವಾಗಿರುತ್ತಾರೆ. ಸಾಮಾಜಿಕ ಜಾಲತಾಣದ ಮೂಲಕ ರಾಜಕೀಯ ವಿದ್ಯಮಾನಗಳ ಟೀಕೆ, ವಿಮರ್ಶೆಗಳನ್ನು ಮಾಡುತ್ತಾರೆ. ಆದರೆ ಇದೇ ಕಾರಣಕ್ಕೆ ಖುದ್ದು ಸಾಕಷ್ಟು ಟೀಕೆ ಮತ್ತು ನಿಂದನೆಗೂ ಗುರಿ ಆಗುತ್ತಾರೆ. ಇದೀಗ ತೆಲುಗಿನ ನಿರ್ಮಾಪಕನೊಬ್ಬ ಇದೇ ವಿಷಯವಾಗಿ ಪ್ರಕಾಶ್ ರೈ ಅವರನ್ನು ಟೀಕಿಸಿದ್ದಾರೆ.

‘ನೀನ್ಯಾರು? ಯಾವ ರಾಜ್ಯದವನು?’ ಪ್ರಕಾಶ್ ರೈಗೆ ತೆಲುಗು ನಿರ್ಮಾಪಕ ಪ್ರಶ್ನೆ
Prakash Bandla
ಮಂಜುನಾಥ ಸಿ.
|

Updated on: Jun 05, 2026 | 5:53 PM

Share

ಪ್ರಕಾಶ್ ರೈ (Prakash Raj) ಬಹುಭಾಷಾ ನಟ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ವರ್ಷಗಳಿಂದಲೂ ನಟಿಸುತ್ತಾ ಬರುತ್ತಿದ್ದಾರೆ. ಮೂಲತಃ ಕರ್ನಾಟಕದವರಾದರೂ ಪ್ರಕಾಶ್ ರೈ ಹೆಚ್ಚಿಗೆ ನಟಿಸಿರುವುದು ತೆಲುಗು ಮತ್ತು ತಮಿಳು ಭಾಷೆಯ ಸಿನಿಮಾಗಳಲ್ಲೇ. ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಅವರು ರಾಜಕೀಯದಲ್ಲಿ, ಸಾಮಾಜಿಕವಾಗಿಯೂ ಸಕ್ರಿಯವಾಗಿರುತ್ತಾರೆ. ಲೋಕಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಪ್ರಕಾಶ್ ರೈ, ಕರ್ನಾಟಕದ ಮಾತ್ರವಲ್ಲ ಬೇರೆ ಬೇರೆ ರಾಜ್ಯಗಳ ರಾಜಕೀಯದ ಬಗ್ಗೆಯೂ ಆಸಕ್ತಿ ಉಳ್ಳವರಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ರಾಜಕೀಯ ವಿದ್ಯಮಾನಗಳ ಟೀಕೆ, ವಿಮರ್ಶೆಗಳನ್ನು ಮಾಡುತ್ತಾರೆ. ಆದರೆ ಇದೇ ಕಾರಣಕ್ಕೆ ಖುದ್ದು ಸಾಕಷ್ಟು ಟೀಕೆ ಮತ್ತು ನಿಂದನೆಗೂ ಗುರಿ ಆಗುತ್ತಾರೆ.

ಪ್ರಕಾಶ್ ರೈ, ಬಿಜೆಪಿಯ ವಿರುದ್ಧ ಪದೇ ಪದೇ ಮಾತನಾಡುತ್ತಿರುತ್ತಾರೆ. ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಅವರು ಬಿಜೆಪಿ ಜೊತೆ ಕೈಜೋಡಿಸಿದ ಬಳಿಕ ಅವರನ್ನೂ ಸಹ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಪವನ್ ಕಲ್ಯಾಣ್ ಅವರು ತೆಲಂಗಾಣ ರಾಜ್ಯದಲ್ಲಿ ಬಹಿರಂಗ ಸಮಾವೇಶ ಮಾಡಲು ಕೋರಿದ್ದ ಅನುಮತಿಯನ್ನು ತೆಲಂಗಾಣ ಸರ್ಕಾರ ನಿರಾಕರಿಸಿತ್ತು. ಇದರ ವಿರುದ್ಧ ಮಾತನಾಡಿದ್ದ ಡಿಸಿಎಂ ಪವನ್ ಕಲ್ಯಾಣ್, ‘ತೆಲಂಗಾಣ ಯಾರ ಅಪ್ಪನ ಆಸ್ತಿ ಅಲ್ಲ’ ಎಂದು ಗುಡುಗಿದ್ದರು.

ಈ ಬಗ್ಗೆ ಟ್ವೀಟ್ ಮಾಡಿದ್ದ ಪ್ರಕಾಶ್ ರೈ, ‘ನೀವು ಬರುವುದಾದರೆ ಬನ್ನಿ, ಆದರೆ ಏಕೆ ಬರುತ್ತಿದ್ದೀರಿ ಎಂದು ಹೇಳಿ ಬನ್ನಿ, ಸುಮ್ಮನೆ ಬರುತ್ತಿದ್ದೀರಾ? ಏನಾದರೂ ಕೆಲಸ ಇದ್ದು ಬರುತ್ತಿದ್ದೀರಾ? ಒಬ್ಬರೇ ಬರುತ್ತಿದ್ದೀರಾ? ಜೊತೆಗಾರರನ್ನೂ ಕರೆದುಕೊಂಡು ಬರುತ್ತಿದ್ದೀರಾ?’ ಎಂದು ಕಾಲೆಳೆದಿದ್ದರು. ಇದೀಗ ತೆಲುಗು ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ಹಾಗೂ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿರುವ ಬಂಡ್ಲ ಗಣೇಶ್, ಪ್ರಕಾಶ್ ರೈ ಅವರನ್ನು ಏಕ ವಚನದಲ್ಲಿ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ:‘ಫೈಲ್ಸು-ಪೈಲ್ಸು’ಗಳಿಗೆಲ್ಲ ಪ್ರಶಸ್ತಿ: ಪ್ರಕಾಶ್ ರೈ ವ್ಯಂಗ್ಯ

ಪ್ರಕಾಶ್ ರೈ ಅವರ ಟ್ವೀಟ್​​ಗೆ ಮರು ಟ್ವೀಟ್ ಮಾಡಿರುವ ಬಂಡ್ಲ ಗಣೇಶ್, ‘ಸುಮ್ಮನೆ ಯಾಕೆ ಎಲ್ಲದರಲ್ಲೂ ಮೂಗು ತೂರಿಸುವುದು? ನೀನ್ಯಾರು?, ನೀನು ತೆಲುಗಿನವನಾ? ತಮಿಳಿನವನಾ? ಅಥವಾ ಕನ್ನಡಿಗನಾ? ನಿನ್ನ ಊರು ಯಾವುದು? ನಿನ್ನ ಕತೆ ಏನು? ಪ್ರತಿ ವಿಷಯದಲ್ಲೂ ಜಡ್ಜ್​​ಮೆಂಟ್ ಕೊಡಲು ನೀನೇನು ಕಲೆಕ್ಟರ್ರಾ? ಅಥವಾ ದೇಶದ ಪ್ರಧಾನಿಯಾ? ಎಲ್ಲಿ ನೋಡಿದರೂ ನೀನೆ, ನಿನ್ನ ಜೀವನಕ್ಕೆ ಏನಾದರೂ ಕೆಲಸ ಹುಡುಕಿಕೊ, ಪ್ರತಿ ವಿಷಯದಲ್ಲೂ ಮಧ್ಯಕ್ಕೆ ತೂರಿ ಹೀರೋ ಅಂದುಕೊಳ್ಳಬೇಡ. ಮೊದಲು ನಿನ್ನ ಅಡ್ರೆಸ್ ನೀನು ಹುಡುಕಿಕೊ, ನಂತರ ಪ್ರಪಂಚವನ್ನು ಬದಲಾಯಿಸಲು ಯತ್ನಿಸು’ ಎಂದಿದ್ದಾರೆ ಬಂಡ್ಲ ಗಣೇಶ್.

ಬಂಡ್ಲ ಗಣೇಶ್ ಅವರ ಪ್ರತಿಕ್ರಿಯೆಗೆ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಪ್ರಕಾಶ್ ರೈ ಅಂಥಹಾ ಹಿರಿಯ ನಟರನ್ನು ಏಕವಚನದಲ್ಲಿ ಟೀಕೆ ಮಾಡಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದಾರೆ. ಬಂಡ್ಲ ಗಣೇಶ್ ಅವರು ಪವನ್ ಕಲ್ಯಾಣ್ ಅವರ ಆಪ್ತರಲ್ಲಿ ಒಬ್ಬರಾಗಿದ್ದಾರೆ. ಬಂಡ್ಲ ಗಣೇಶ್, ತಮ್ಮ ಆಕ್ರೋಶ ಭರಿತ ಭಾಷಣಗಳು, ಸಂದರ್ಶನಗಳಿಂದಲೇ ಜನಪ್ರಿಯರು. ಈಗ ಪ್ರಕಾಶ್ ರೈ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!