AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?

‘ಹಿರಿಯರ ಆಶೀರ್ವಾದ ಪಡೆದು ಚುನಾವಣೆಗೆ ಸ್ಪರ್ಧಿಸುತ್ತೇನೆ. ಹಲವು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದೇನೆ’ ಎಂದು ನಿರ್ಮಾಪಕ ಕೆ. ಮಂಜು ಹೇಳಿದ್ದಾರೆ.

K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?
ನಿರ್ಮಾಪಕ ಕೆ. ಮಂಜು
ಮದನ್​ ಕುಮಾರ್​
|

Updated on:Mar 31, 2023 | 12:38 PM

Share

ಮುಖ್ಯಾಂಶಗಳು

  • ನಿರ್ಮಾಪಕ ಕೆ. ಮಂಜು ಅವರು ರಾಜಕಾರಣಕ್ಕೆ ಎಂಟ್ರಿ ನೀಡುವ ಸೂಚನೆ ಸಿಕ್ಕಿದೆ
  • ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಕೆ. ಮಂಜು ಸ್ಪರ್ಧಿಸುವ ಸಾಧ್ಯತೆ
  • ಶೀಘದಲ್ಲೇ ಕೆಲವು ರಾಜಕೀಯ ಮುಖಂಡರ ಜೊತೆ ನಡೆಯಲಿದೆ ಮಾತುಕತೆ 

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಸ್ಪರ್ಧಿಸಲು ಸಿನಿಮಾರಂಗದ ಹಲವರು ಸಜ್ಜಾಗಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್​ ಸಿಗಲಿದೆ ಎಂಬುದು ಶೀಘ್ರದಲ್ಲೇ ಬಹಿರಂಗ ಆಗಲಿದೆ. ಈ ನಡುವೆ ನಿರ್ಮಾಪಕ ಕೆ. ಮಂಜು ಅವರು ರಾಜಕಾರಣಕ್ಕೆ ಎಂಟ್ರಿ ನೀಡುವ ಸೂಚನೆ ಸಿಕ್ಕಿದೆ. ಪದ್ಮನಾಭ ನಗರ (Padmanabha Nagar) ವಿಧಾನಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಶೀಘ್ರದಲ್ಲೇ ಅಧಿಕೃತಯಾಗಿ ಘೋಷಣೆ ಮಾಡಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕನಾಗಿ ಕೆ. ಮಂಜು (K. Manju) ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಈಗ ಅವರು ರಾಜಕೀಯದ ಕಡೆಗೆ ಆಸಕ್ತಿ ತೋರಿಸುತ್ತಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಚರ್ಚಿಸಲು ಅವರು ಶೀಘದಲ್ಲೇ ಕೆಲವು ರಾಜಕೀಯ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ.

‘ನಮ್ಮ ಕೆಲವು ನಾಯಕರನ್ನ ಭೇಟಿ ಮಾಡುತ್ತೇನೆ. ಶೀಘ್ರದಲ್ಲೇ ಎಲ್ಲವೂ ಫೈನಲ್ ಆಗುತ್ತದೆ. ಪದ್ಮನಾಭ ನಗರದಲ್ಲಿ ಒಕ್ಕಲಿಗರ ಮತಗಳು ಜಾಸ್ತಿ ಇವೆ. ನನಗೆ ಹಲವು ನಾಯಕರ ಬೆಂಬಲ ಸಿಗುವ ಸಾಧ್ಯತೆ ಇದೆ. ಹೀಗಾಗಿ ಹಿರಿಯರ ಆಶೀರ್ವಾದ ಪಡೆದು ಚುನಾವಣೆಗೆ ಸ್ಪರ್ಧಿಸುತ್ತೇನೆ. ಹಲವು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದೇನೆ’ ಎಂದು ಕೆ. ಮಂಜು ಹೇಳಿದ್ದಾರೆ.

ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಗಡಿಭಾಗದ ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ

ಒಂದುವೇಳೆ ಕೆ. ಮಂಜು ಅವರು ಪದ್ಮನಾಭ ನಗರದಿಂದ ಚುನಾವಣೆಗೆ ಸ್ಪರ್ಧಿಸಿದ್ದೇ ಹೌದಾದರೆ ಪೈಪೋಟಿ ಬಲವಾಗಲಿದೆ. ಯಾಕೆಂದರೆ, ಕಳೆದ ಚುನಾವಣೆಗಳಲ್ಲಿ ಈ ಕ್ಷೇತ್ರವು ಪ್ರಮುಖ ಪಕ್ಷಗಳ ಹೊಂದಾಣಿಕೆ ರಾಜಕೀಯಕ್ಕೆ ಸಾಕ್ಷಿ ಆಗಿತ್ತು. ಇದು ಬಿಜೆಪಿಯ ಆರ್​. ಅಶೋಕ್​ ಅವರ ಪ್ರಾಬಲ್ಯ ಇರುವಂತಹ ಕ್ಷೇತ್ರ. ಈ ಬಾರಿ ಕೂಡ ಅವರೇ ಸ್ಪರ್ಧಿಸುವುದು ಬಹುತೇಕ ಖಚಿತ. ಅಶೋಕ್​ ವಿರುದ್ಧ ಕಾಂಗ್ರೆಸ್​ನಿಂದ ಪಿಜಿಆರ್ ಸಿಂಧ್ಯಾ ಅವರು ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ಇನ್ನು, ಒಕ್ಕಲಿಗರ ಮತಗಳನ್ನು ಸೆಳಯಲು ಜೆಡಿಎಸ್​ನಿಂದ ಕೆ. ಮಂಜು ಸ್ಪರ್ಧಿಸಿದರೆ ಮೂರೂ ಪಕ್ಷಗಳ ನಡುವೆ ಹಣಾಹಣಿ ಜೋರಾಗಲಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:47 am, Fri, 31 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು