AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Birthday: ಪುನೀತ್ ರಾಜ್​ಕುಮಾರ್ ಜನ್ಮದಿನ; ಅಪರೂಪದ ವ್ಯಕ್ತಿಯ ನೆನಪು ಸದಾ ಜೀವಂತ

ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ರಾಜ್​ಕುಮಾರ್ ಕುಟುಂಬ ಆಗಮಿಸಿ, ಪೂಜೆ ಸಲ್ಲಿಕೆ ಮಾಡಲಿದೆ. ಈಗಾಗಲೇ ಪುನೀತ್ ರಾಜ್​ಕುಮಾರ್ ಅವರ ಸಮಾಧಿಯನ್ನು ಅಲಂಕರಿಸುವ ಕೆಲಸ ಆಗಿದೆ.

Puneeth Rajkumar Birthday: ಪುನೀತ್ ರಾಜ್​ಕುಮಾರ್ ಜನ್ಮದಿನ; ಅಪರೂಪದ ವ್ಯಕ್ತಿಯ ನೆನಪು ಸದಾ ಜೀವಂತ
ಪುನೀತ್ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 17, 2023 | 6:38 AM

Share

ಇಂದು (ಮಾರ್ಚ್ 17) ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ (Puneeth Rajkumar Birthday). ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ಜನ್ಮದಿನ. ಪುನೀತ್ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಪುನೀತ್ (Puneeth Rajkumar) ನಮ್ಮ ಜೊತೆ ಇದ್ದಿದ್ದರೆ ಈ ದಿನದ ಮೆರುಗು ಮತ್ತಷ್ಟು ಹೆಚ್ಚುತ್ತಿತ್ತು. ಆದರೆ, ಅವರಿಲ್ಲ ಎನ್ನುವ ಬೇಸರದಲ್ಲೇ ಈ ದಿನವನ್ನು ಆಚರಿಸಲಾಗುತ್ತಿರುವುದು ನಿಜಕ್ಕೂ ದುಃಖಕರ ವಿಚಾರ. ಪುನೀತ್ ಜನ್ಮದಿನಕ್ಕೆ ಅಭಿಮಾನಿಗಳಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ದಿನದಂದು ‘ಕಬ್ಜ’ ಕೂಡ ರಿಲೀಸ್ ಆಗುತ್ತಿರುವುದು ವಿಶೇಷ.

ಸಮಾಧಿಗೆ ಪೂಜೆ

ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ರಾಜ್​ಕುಮಾರ್ ಕುಟುಂಬ ಆಗಮಿಸಿ, ಪೂಜೆ ಸಲ್ಲಿಕೆ ಮಾಡಲಿದೆ. ಈಗಾಗಲೇ ಪುನೀತ್ ರಾಜ್​ಕುಮಾರ್ ಅವರ ಸಮಾಧಿಯನ್ನು ಅಲಂಕರಿಸುವ ಕೆಲಸ ಆಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್, ಶಿವರಾಜ್​ಕುಮಾರ್ ಸೇರಿದಂತೆ ಕುಟುಂಬದ ಅನೇಕರು ಕಂಠೀರವ ಸ್ಟುಡಿಯೋಗೆ ಬಂದು ಪೂಜೆಯಲ್ಲಿ ಭಾಗಿ ಆಗಲಿದ್ದಾರೆ. ಅಪ್ಪು ಜನ್ಮದಿನ ಅವರ ಸಮಾಧಿಗೆ ಭೇಟಿ ನೀಡಬೇಕು ಅನ್ನೋದು ಅನೇಕ ಅಭಿಮಾನಿಗಳ ಆಸೆ. ಈ ಕಾರಣಕ್ಕೆ ಕಂಠೀರವ ಸ್ಟುಡಿಯೋದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯಲಿದ್ದಾರೆ.

ಸಾಮಾಜಿಕ ಕೆಲಸ

ಪುನೀತ್ ರಾಜ್​ಕುಮಾರ್ ಅವರು ನಟನೆಯ ಜೊತೆ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡಿ ಗುರುತಿಸಿಕೊಂಡಿದ್ದರು. ಅಭಿಮಾನಿಗಳು ಕೂಡ ಈಗ ಅಪ್ಪು ಹಾದಿಯಲ್ಲಿ ಸಾಗುತ್ತಿದ್ದಾರೆ. ಅಪ್ಪು ಜನ್ಮದಿನದಂದು ರಕ್ತದಾನ, ಅನ್ನದಾನದಂತಹ ಕೆಲಸಗಳನ್ನು ಮಾಡಲಾಗುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಈ ಕೆಲಸ ಆಗುತ್ತಿದೆ. ಇದಕ್ಕಾಗಿ ಅನೇಕ ಅಭಿಮಾನಿ ಬಳಗ ಮುಂದೆ ಬಂದಿದೆ.

‘ಗಂಧದ ಗುಡಿ’ ಸಾಕ್ಷ್ಯಚಿತ್ರ ರಿಲೀಸ್

‘ಗಂಧದ ಗುಡಿ’ ಸಾಕ್ಷ್ಯಚಿತ್ರ ಪುನೀತ್ ಅವರ ಕನಸಿನ ಪ್ರಾಜೆಕ್ಟ್ ಆಗಿತ್ತು. ಪುನೀತ್ ಅವರ ಮೊದಲ ವರ್ಷದ ಪುಣ್ಯತಿಥಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಇದನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಗಿತ್ತು. ಇದನ್ನು ನೋಡಿ ಅನೇಕರು ಮೆಚ್ಚಿಕೊಂಡಿದ್ದರು. ಈಗ ಈ ಡಾಕ್ಯುಮೆಂಟರಿ ಒಟಿಟಿಯಲ್ಲಿ ರಿಲೀಸ್ ಆಗಿದೆ. ಇಂದಿನಿಂದ (ಮಾರ್ಚ್​ 17) ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ‘ಗಂಧದ ಗುಡಿ’ ಪ್ರಸಾರ ಆರಂಭಿಸಲಿದೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ ಗಿಫ್ಟ್ ಆಗಿದೆ.

‘ಕಬ್ಜ’ ರಿಲೀಸ್

ಪುನೀತ್ ರಾಜ್​ಕುಮಾರ್ ಬದುಕಿರುವಾಗಲೇ ‘ಕಬ್ಜ’ ಚಿತ್ರ ಸೆಟ್ಟೇರಿತ್ತು. ನಿರ್ದೇಶಕ ಆರ್. ಚಂದ್ರು ಅವರನ್ನು ಅಪ್ಪು ಹುರಿದುಂಬಿಸಿದ್ದರು. ಈ ಕಾರಣಕ್ಕೆ ಪುನೀತ್​ ಬಗ್ಗೆ ಚಂದ್ರುಗೆ ವಿಶೇಷ ಗೌರವ ಇದೆ. ಪುನೀತ್ ಅವರ ನೆನಪಿನಲ್ಲೇ ‘ಕಬ್ಜ’ ಚಿತ್ರ ಮಾರ್ಚ್ 17ಕ್ಕೆ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಪುನೀತ್ ಸಹೋದರ ಶಿವಣ್ಣ ನಟಿಸಿದ್ದಾರೆ.

ಪುನೀತ್ ಅಮರ

ಪುನೀತ್ ರಾಜ್​ಕುಮಾರ್ ಅವರು ದೈಹಿಕವಾಗಿ ಇಂದು ನಮ್ಮ ಜೊತೆ ಇರದೇ ಇರಬಹುದು. ಅವರು ಮಾಡಿದ ಕೆಲಸದ ಮೂಲಕ, ಸಿನಿಮಾ ಮೂಲಕ, ಹಾಡಿದ ಹಾಡುಗಳ ಮೂಲಕ ಅವರು ಸದಾ ಜೀವಂತ. ಅವರ ನಗುಮುಖ ಎಂದಿಗೂ ಮಾಸುವಂತದ್ದಲ್ಲ. ಸೋಶಿಯಲ್ ಮೀಡಿಯಾದಲ್ಲಿ #PuneethRajkumarLiveson ಹ್ಯಾಶ್​ಟ್ಯಾಗ್ ಟ್ರೆಂಡ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:31 am, Fri, 17 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?