AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ 11ನೇ ದಿನದ ತಿಥಿ ಇಂದು: ಅಪ್ಪನ ಅಗಲಿಕೆಯ ನೋವಲ್ಲಿ ಪರೀಕ್ಷೆ ಬರೆಯಲಿರೋ ಪುನೀತ್ ರಾಜ್​ಕುಮಾರ್ ಪುತ್ರಿ ವಂದಿತಾ

ಕನ್ನಡಿಗರ ಪ್ರೀತಿಯ ನಟ ಪುನೀತ್ ರಾಜಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಇಂದು. ಆದರೆ ಇಂದೇ ಅವರ ಎರಡನೆಯ ಪುತ್ರಿ ವಂದಿತಾ 10ನೆಯ ತರಗತಿ ಸೆಮಿಸ್ಟರ್ ಪರೀಕ್ಷೆ ಬೆರಯಬೇಕಿದೆ. ಮತ್ತು ಅಪ್ಪನ ಆಶೋತ್ತರದಂತೆ ಅಪಾರ ನೋವಿನ ನಡುವೆಯೂ ವಂದಿತಾ ಎಕ್ಸಾಂ ಬರೆಯಲು ಮುಂದಾಗಿದ್ದಾಳೆ.

ಪುನೀತ್ 11ನೇ ದಿನದ ತಿಥಿ ಇಂದು: ಅಪ್ಪನ ಅಗಲಿಕೆಯ ನೋವಲ್ಲಿ ಪರೀಕ್ಷೆ ಬರೆಯಲಿರೋ ಪುನೀತ್ ರಾಜ್​ಕುಮಾರ್ ಪುತ್ರಿ ವಂದಿತಾ
ಪುನೀತ್
Follow us
TV9 Web
| Updated By: ಆಯೇಷಾ ಬಾನು

Updated on:Nov 08, 2021 | 9:36 AM

ಬೆಂಗಳೂರು: ಅಭಿಮಾನಿಗಳ ಆರಾಧ್ಯದೈವ ಪುನೀತ್ ರಾಜ್​ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಹನ್ನೊಂದನೇ ದಿನ. ಹೀಗಾಗಿ, ಇಂದು ಅಪ್ಪು ಕುಟುಂಬಸ್ಥರು 11ನೇ ದಿನ ಕಾರ್ಯ ನಡೆಸಲಿದ್ದಾರೆ. ಆದ್ರೆ ಅಪ್ಪ ಜೊತೆಗಿಲ್ಲ ಎಂಬ ನೋವಲ್ಲೂ ಅಪ್ಪು ಮಗಳು ವಂದಿತಾ ಪರೀಕ್ಷೆ ಬರೆಯುವಂತಹ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಪ್ಯಾಲೇಸ್ ರಸ್ತೆಯ ಸೋಫಿಯಾ ಶಾಲೆಯಲ್ಲಿ ICSE 10th ತರಗತಿಯಲ್ಲಿ ಓದುತ್ತಿರೊ ವಂದಿತಾಳಿಗೆ ಮುಂದಿನ ವಾರದಲ್ಲಿ ICSE 10th ಸೆಮಿಸ್ಟರ್ ಎಕ್ಸಾಂ ಹಿನ್ನಲೆ ಇಂದಿನಿಂದ ICSE 10th ಪೂರ್ತ ತಯಾರಿ ಎಕ್ಸಾಂ ಆರಂಭವಾಗಿದೆ. ಹೀಗಾಗಿ ತಂದೆಯ 11ನೇ ದಿನದ ಕಾರ್ಯದ ನಡುವೆಯೂ ಪರೀಕ್ಷೆಯನ್ನು ತಪ್ಪಿಸದೆ ವಂದಿತಾ ಪರೀಕ್ಷೆಗೆ ಹಾಜರಾಗಲಿದ್ದಾಳೆ. ಅಪ್ಪನ ಅಗಲಿಕೆಯ ನೋವಿನಲ್ಲಿ ಪರೀಕ್ಷೆ ಬರೆಯಲು ವಂದಿತಾ ಮುಂದಾಗಿದ್ದಾಳೆ.

ಪುನೀತ್ ರಾಜಕುಮಾರ್ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ರು. ಕಲಿಕೆಯಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕಾಳಜಿ ವಹಿಸಿದ್ರು. ತಂದೆಯ ಆಸೆಯಂತೆ ನೋವಿನ ನಡುವೆಯೂ ಎಕ್ಸಾಂ ಬರೆಯಲು ವಂದಿತಾ ಮನಸ್ಸು ಮಾಡಿದ್ದಾಳೆ. ಇಂದಿನಿಂದ ICSE 10th ಪೂರ್ತ ತಯಾರಿ ಎಕ್ಸಾಂ ಆರಂಭವಾಗಿದೆ. ಆಫ್ ಲೈನ್ ಮಾದರಿಯಲ್ಲಿ ಈ ಪರೀಕ್ಷೆ ನಡೆಯಲಿದೆ. ಪುನೀತ್ ರಾಜ್​ಕುಮಾರ್ ಮಗಳು ವಂದಿತಾಗೆ ಎಕ್ಸಾಂ ಇರುವ ಹಿನ್ನಲೆಯಲ್ಲಿ ಬೆಳ್ಳಗ್ಗೆಯೇ ಸಾಧ್ಯವಾದಷ್ಟು ಬೇಗ ಪೂಜಾ ಕಾರ್ಯ ಮುಗಿಸಲು ಪುನೀತ್ ರಾಜ್​ಕುಮಾರ್ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ಪುಣ್ಯ ಸ್ಮರಣೆ: ಕುಟುಂಬದವರಿಂದ 11ನೇ ದಿನದ ಪೂಜೆ; ಸಮಾಧಿ ಬಳಿ ಯಾರಿಗೆ ಪ್ರವೇಶ?

Published On - 8:24 am, Mon, 8 November 21

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು