AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಕಂಠೀರವ ಸ್ಟುಡಿಯೋದಲ್ಲಿ ಭಾನುವಾರ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ

Puneeth Rajkumar Funeral: ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್ ಅವರ ಸಮಾಧಿಯ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ.

Puneeth Rajkumar: ಕಂಠೀರವ ಸ್ಟುಡಿಯೋದಲ್ಲಿ ಭಾನುವಾರ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Oct 29, 2021 | 8:37 PM

Share

ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ (Puneeth Rajkumar Funeral) ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರಿಗೆ ಅಪ್ಪು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್ ಅವರ ಸಮಾಧಿಯ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ.

ಪುನೀತ್ ರಾಜ್​ಕುಮಾರ್ ಅವರ ಮಗಳು ಅಮೆರಿಕದಿಂದ ಆಗಮಿಸಬೇಕಿರುವ ಹಿನ್ನೆಲೆ ಭಾನುವಾರ ನಟ ಪುನೀತ್ ರಾಜ್​​ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್​ಕುಮಾರ್​ಗೆ ಸಕಲ ಸರ್ಕಾರಿ​ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅವರ ತಂದೆ-ತಾಯಿಯಾದ ಡಾ. ರಾಜ್ ಕುಮಾರ್ ಹಾಗೂ, ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ಇಂದು ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯಿಂದ ನಾಳೆ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಮೊದಲು ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಪುನೀತ್ ರಾಜ್​ಕುಮಾರ್ ಈ ಜಾಗದಲ್ಲಿ ಡಾ. ರಾಜಕುಮಾರ್ ಶಾಲೆ ಆರಂಭಿಸಬೇಕೆಂಬ ಕನಸು ಕಂಡಿದ್ದರು. ಆದರೆ, ಈ ಫಾರ್ಮ್​ಹೌಸಿನ ಬದಲು ಕಂಠೀರವ ಸ್ಟುಡಿಯೋದಲ್ಲೇ ಪುನೀತ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ದೊಡ್ಮನೆಯ ಪ್ರೀತಿಯ ಅಪ್ಪು ಪಂಚಭೂತಗಳಲ್ಲಿ ಲೀನವಾಗಲಿದ್ದಾರೆ.

ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ರಜೆ: ಪುನೀತ್ ರಾಜ್​ಕುಮಾರ್ ನಿಧನಕ್ಕೆ ಶೋಕ

Puneeth Rajkumar Songs: ಕಾಣದಂತೆ ಮಾಯವಾದನು!; ಪುನೀತ್ ರಾಜ್​ಕುಮಾರ್ ಹಾಡಿದ ಟಾಪ್ 20 ಹಾಡುಗಳಿವು

Published On - 8:31 pm, Fri, 29 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?