AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ರಾಜ್​ಕುಮಾರ್​ ನಿಧನದ ಆಘಾತದಿಂದ ಕತ್ತಲಾವರಿಸಿದೆ; ಅಮಿತಾಭ್ ಬಚ್ಚನ್ ಸಂತಾಪ

ಕನ್ನಡ ಚಿತ್ರರಂಗದ ಶ್ರೇಷ್ಠ ನಟ ರಾಜ್​ಕುಮಾರ್ ಅವರ ಮಗ ಪುನೀತ್ ರಾಜ್​ಕುಮಾರ್ ಸಾವಿನ ಸುದ್ದಿ ಬಹಳ ಆಘಾತಕಾರಿಯಾಗಿದೆ. ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಕೇವಲ 46 ವರ್ಷವಾಗಿತ್ತು. ಈ ಸುದ್ದಿ ನಮ್ಮೆಲ್ಲರನ್ನು ತೀವ್ರ ಆಘಾತಕ್ಕೆ ತಳ್ಳಿದೆ ಎಂದು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಸಂತಾಪ ಸೂಚಿಸಿದ್ದಾರೆ.

Puneeth Rajkumar: ಪುನೀತ್ ರಾಜ್​ಕುಮಾರ್​ ನಿಧನದ ಆಘಾತದಿಂದ ಕತ್ತಲಾವರಿಸಿದೆ; ಅಮಿತಾಭ್ ಬಚ್ಚನ್ ಸಂತಾಪ
ಪುನೀತ್ ರಾಜ್​ಕುಮಾರ್- ಅಮಿತಾಭ್ ಬಚ್ಚನ್
TV9 Web
| Updated By: ಸುಷ್ಮಾ ಚಕ್ರೆ|

Updated on:Oct 30, 2021 | 1:07 PM

Share

ಯಾರೂ ಊಹಿಸಿರದ ರೀತಿಯಲ್ಲಿ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಪ್ಪು ಸಾವಿಗೆ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲೆಯಾಳಂ, ಹಿಂದಿ ಚಿತ್ರರಂಗದವರು ಕೂಡ ಸಂತಾಪ ಸೂಚಿಸಿದ್ದಾರೆ. ಡಾ. ರಾಜ್​ಕುಮಾರ್ ಕುಟುಂಬದ ಜೊತೆ ನಿಕಟ ಸಂಬಂಧ ಹೊಂದಿದ್ದ ಬಾಲಿವುಡ್​ ಬಿಗ್​ಬಿ ಅಮಿತಾಭ್ ಬಚ್ಚನ್ ಕೂಡ ಪುನೀತ್ ರಾಜ್​ಕುಮಾರ್ ನಿಧನದ ಸುದ್ದಿ ಕೇಳಿ ಶಾಕ್ ಆಗಿದ್ದಾರೆ. ಕೇವಲ 46ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಪುನೀತ್ ರಾಜ್​ಕುಮಾರ್ ನಿಧನ ನನಗೆ ಅತ್ಯಂತ ದೊಡ್ಡ ಶಾಕ್ ಉಂಟುಮಾಡಿದೆ ಎಂದು ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್​ನಲ್ಲಿ ಬರೆದುಕೊಂಡಿದ್ದಾರೆ.

ನಿನ್ನೆ ಜಿಮ್​ನಲ್ಲಿ ವರ್ಕ್​ಔಟ್ ಮುಗಿಸಿ, ಸುಸ್ತಾಗಿದ್ದ ಪುನೀತ್​ ರಾಜ್​ಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮನೆಯ ಬಳಿಯಿದ್ದ ಆಸ್ಪತ್ರೆಗೆ ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ರಂ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಅಪ್ಪು ನಿಧನದಿಂದ ಅವರ ಕುಟುಂಬಸ್ಥರು, ಲಕ್ಷಾಂತರ ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಶಾಕ್ ಆಗಿದ್ದಾರೆ. ನಿನ್ನೆ ಸಂಜೆಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್​ಕುಮಾರ್ ಮೃತದೇಹವನ್ನು ಅಭಿಮಾನಿಗಳ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ರಾತ್ರಿಯಿಡೀ ಸಾವಿರಾರು ಅಭಿಮಾನಿಗಳು ತಮ್ಮ ಪ್ರೀತಿಯ ಅಪ್ಪುವನ್ನು ಕೊನೆಯ ಬಾರಿಗೆ ಕಣ್ತುಂಬಿಕೊಂಡಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರು ಬಚ್ಚನ್‌ ಕುಟುಂಬಕ್ಕೆ ಆಪ್ತರಾಗಿದ್ದ ಡಾ. ರಾಜ್‌ಕುಮಾರ್ ಅವರ ಮಗ. ನನ್ನ ಆತ್ಮೀಯ ಬಳಗದ ಇಬ್ಬರು ಇಂದು ನಮ್ಮನ್ನು ಅಗಲಿದ್ದಾರೆ. ಅದರಲ್ಲಿ ಒಬ್ಬರು ಕನ್ನಡದ ತಾರೆ ಪುನೀತ್ ರಾಜ್​ಕುಮಾರ್. ಬೆಳಿಗ್ಗೆಯಿಂದ ಹತ್ತಿರದ ಮತ್ತು ಆತ್ಮೀಯರ ಎರಡು ಸಾವುಗಳು ಸಂಭವಿಸಿವೆ. ಈ ಬಗ್ಗೆ ನನಗೆ ಪದಗಳಲ್ಲಿ ಹೇಳಲಾಗದಷ್ಟು ದುಃಖ ಉಂಟಾಗಿದೆ. ಅದರಲ್ಲೂ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ರಾಜ್​ಕುಮಾರ್ ಅವರ ಮಗ ಪುನೀತ್ ರಾಜ್​ಕುಮಾರ್ ಸಾವಿನ ಸುದ್ದಿ ಬಹಳ ಆಘಾತಕಾರಿಯಾಗಿದೆ. ಅಪ್ಪನ ಕಾರಣದಿಂದ ಮಾತ್ರವಲ್ಲದೆ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಕೇವಲ 46 ವರ್ಷವಾಗಿತ್ತು. ಇದು ನಮ್ಮೆಲ್ಲರನ್ನು ತೀವ್ರ ಆಘಾತಕ್ಕೆ ತಳ್ಳಿದೆ. ದಿವಂಗತ ರಾಜ್‌ಕುಮಾರ್ ಅವರ ಕುಟುಂಬಕ್ಕೆ ನಾನು ತುಂಬಾ ಹತ್ತಿರವಾಗಿದ್ದೇನೆ. ನನ್ನ ಸುತ್ತಲೂ ಕತ್ತಲೆ ಆವರಿಸಿಕೊಂಡಂತೆ ಭಾಸವಾಗುತ್ತಿದೆ. ಅವರ ಕುಟುಂಬ ಈ ಆಘಾತದಿಂದ ಹೊರಬರುವಂತಾಗಲಿ ಎಂದು ಅಮಿತಾಭ್ ಬಚ್ಚನ್ ಬರೆದುಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್ ಅವರ ಹಿರಿಯ ಮಗಳು ವಿದೇಶದಲ್ಲಿ ಓದುತ್ತಿರುವುದರಿಂದ ಅವರು ಇಂದು ಸಂಜೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ತಮ್ಮ ತಂದೆಯ ಅಂತಿಮ ದರ್ಶನ ಮಾಡಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜ್​ಕುಮಾರ್ ಹಾಗೂ ಪಾರ್ವತಮ್ಮ ರಾಜ್​ಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಪುನೀತ್​ ರಾಜ್​ಕುಮಾರ್​ ಸಮಾಧಿಯನ್ನು ನಿರ್ಮಿಸಲಾಗುವುದು.

ಇದನ್ನೂ ಓದಿ: Puneeth Rajkumar: ಕಂಠೀರವ ಸ್ಟುಡಿಯೋದಲ್ಲಿ ಭಾನುವಾರ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ

Puneeth Rajkumar Songs: ಕಾಣದಂತೆ ಮಾಯವಾದನು!; ಪುನೀತ್ ರಾಜ್​ಕುಮಾರ್ ಹಾಡಿದ ಟಾಪ್ 20 ಹಾಡುಗಳಿವು

Published On - 1:04 pm, Sat, 30 October 21

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್