ಪುನೀತ್ ರಾಜ್ಕುಮಾರ್ಗಾಗಿ ಫ್ಯಾನ್ಸ್ ನಿರ್ಮಿಸಿದ ಮಿನಿ ಸ್ಮಾರಕ; ಹೊಸೂರು ಗ್ರಾಮಸ್ಥರ ಅಭಿಮಾನದ ಕಾರ್ಯ
Puneeth Rajkumar: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೊಸೂರು ಗ್ರಾಮದ ಅಭಿಮಾನಿಗಳು ಅಪ್ಪುಗಾಗಿ ಮಿನಿ ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಅಲ್ಲಿನ ಮಾರುಕಟ್ಟೆಗೂ ಪುನೀತ್ ರಾಜ್ಕುಮಾರ್ ಹೆಸರು ಇಡಲಾಗಿದೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಬಗ್ಗೆ ಜನರು ಇಟ್ಟುಕೊಂಡಂತಹ ಪ್ರೀತಿ ಅಪಾರ. ಇಂದು ಪುನೀತ್ ನಮ್ಮೊಂದಿಗೆ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರನ್ನು ಪ್ರತಿ ದಿನ ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಹಲವಾರು ರೀತಿಯಲ್ಲಿ ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ಅವರ ಸಮಾಧಿ (Puneeth Rajkumar Samadhi) ಇದೆ. ವಿಶೇಷ ಎಂದರೆ, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೊಸೂರು ಗ್ರಾಮದ ಅಭಿಮಾನಿಗಳು ಅಪ್ಪುಗಾಗಿ ಮಿನಿ ಸ್ಮಾರಕ (Puneeth Rajkumar Mini Smaraka) ನಿರ್ಮಾಣ ಮಾಡಿದ್ದಾರೆ. ಅಲ್ಲಿನ ಸಂತೆ ಮಾರುಕಟ್ಟಗೆ ಈಗ ‘ಪುನೀತ್ ರಾಜ್ಕುಮಾರ್ ಸಂತೆ ಮಾರ್ಕೆಟ್’ ಎಂದು ಹೆಸರು ಇಡಲಾಗಿದೆ. ಗ್ರಾಮಸ್ಥರಿಂದ ಈ ಕಾರ್ಯ ನೆರವೇರಿದೆ. ಅಪ್ಪು ಮೇಲಿನ ಅಭಿಮಾನವನ್ನು ಜನರು ಈ ರೀತಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:
ಪುನೀತ್ ಅವರ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಿದ ಶಿವಣ್ಣ; ಊರಿಗೆ ಕ್ಷೇಮವಾಗಿ ತಲುಪುವಂತೆ ಸಲಹೆ
ಸದನದಲ್ಲೂ ಪುನೀತ್ ಬಗ್ಗೆ ಮಾತು; ಕರ್ನಾಟಕ ರತ್ನ, ಪದ್ಮಶ್ರೀ ಪ್ರಶಸ್ತಿ ಬಗ್ಗೆ ಸಿಎಂ ಹೇಳಿದ್ದೇನು?
Published on: Dec 16, 2021 09:57 AM
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

