AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೇಮ್ಸ್​’ ಕೌಂಟ್​ಡೌನ್ 5 ದಿನ: ​ಮಾರ್ಚ್​​ 13ಕ್ಕೆ ‘ಜೇಮ್ಸ್’ ಪ್ರೀ-ರಿಲೀಸ್​ ಇವೆಂಟ್​; ಯಾರೆಲ್ಲ ಬರ್ತಾರೆ? ಫ್ಯಾನ್ಸ್​ಗೆ ಎಂಟ್ರಿ ಹೇಗೆ?

ಪ್ಯಾಲೇಸ್​ ಗ್ರೌಂಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಮುಖ್ಯ ಅತಿಥಿಯಾಗಿ ಪುನೀತ್​ ಸಹೋದರ ಶಿವರಾಜ್​ಕುಮಾರ್ ಆಗಮಿಸುತ್ತಿದ್ದಾರೆ. ಇವರಲ್ಲದೆ, ಚಿತ್ರರಂಗದ ಅನೇಕ ಪ್ರಮುಖರು ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದೆ.

‘ಜೇಮ್ಸ್​’ ಕೌಂಟ್​ಡೌನ್ 5 ದಿನ: ​ಮಾರ್ಚ್​​ 13ಕ್ಕೆ ‘ಜೇಮ್ಸ್’ ಪ್ರೀ-ರಿಲೀಸ್​ ಇವೆಂಟ್​; ಯಾರೆಲ್ಲ ಬರ್ತಾರೆ? ಫ್ಯಾನ್ಸ್​ಗೆ ಎಂಟ್ರಿ ಹೇಗೆ?
ಪುನೀತ್
TV9 Web
| Edited By: |

Updated on:Mar 12, 2022 | 7:35 AM

Share

ಪುನೀತ್​ ರಾಜ್​ಕುಮಾರ್ (Puneeth Rajkumar)ನಟನೆಯ ‘ಜೇಮ್ಸ್​’ ಸಿನಿಮಾ (James Movie) ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದೆ. ಹೀರೋ ಆಗಿ ಪುನೀತ್​ ರಾಜ್​ಕುಮಾರ್​ ನಟಿಸಿದ ಕೊನೆಯ ಸಿನಿಮಾ ಇದು ಎನ್ನುವ ಕಾರಣಕ್ಕೆ ಈ ಚಿತ್ರಕ್ಕೆ ಅಭಿಮಾನಿಗಳು ಭಾವನಾತ್ಮಕವಾಗಿ ಕನೆಕ್ಟ್​ ಆಗಿದ್ದಾರೆ. ಪುನೀತ್​ ರಾಜ್​ಕುಮಾರ್ ಬರ್ತ್​ಡೇ ಪ್ರಯುಕ್ತ ಮಾರ್ಚ್​ 17ರಂದು ಸಿನಿಮಾ ರಿಲೀಸ್​ ಆಗುತ್ತಿದೆ. ರಾಜ್ಯದ ಶೇ. 80 ಚಿತ್ರಮಂದಿರಗಳಲ್ಲಿ ‘ಜೆಮ್ಸ್​’ ಪ್ರದರ್ಶನ ಕಾಣುತ್ತಿರುವುದು ವಿಶೇಷ. ಹೀಗಾಗಿ, ಕಲೆಕ್ಷನ್​ ವಿಚಾರದಲ್ಲಿ ಈ ಸಿನಿಮಾ ಬಹುದೊಡ್ಡ ದಾಖಲೆ ಬರೆಯುವ ಸೂಚನೆ ಸಿಕ್ಕಿದೆ. ಇದಕ್ಕೂ ಮೊದಲು ಚಿತ್ರತಂಡ ಪ್ರೀ-ರಿಲೀಸ್​ ಇವೆಂಟ್​ (James Pre-Release Event)ನಡೆಸೋಕೆ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್​ 13 ಅಂದರೆ ಭಾನುವಾರ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ಅದ್ದೂರಿಯಾಗಿ ಈ ಕಾರ್ಯಕ್ರಮ ನಡೆಯುತ್ತಿದೆ.

ಪ್ಯಾಲೇಸ್​ ಗ್ರೌಂಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಮುಖ್ಯ ಅತಿಥಿಯಾಗಿ ಪುನೀತ್​ ಸಹೋದರ ಶಿವರಾಜ್​ಕುಮಾರ್ ಆಗಮಿಸುತ್ತಿದ್ದಾರೆ. ಇವರಲ್ಲದೆ, ಚಿತ್ರರಂಗದ ಅನೇಕ ಪ್ರಮುಖರು ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದೆ. ಶ್ರೀಮುರಳಿ, ವಿನಯ್​ ರಾಜ್​ಕುಮಾರ್ ಮೊದಲಾದವರು ಈ ಅದ್ದೂರಿ ಪ್ರೀ-ರಿಲೀಸ್​ ಇವೆಂಟ್​ಗೆ ಸಾಕ್ಷಿಯಾಗಲಿದ್ದಾರೆ.

ಅಭಿಮಾನಿಗಳು ಈ ಕಾರ್ಯಕ್ರಮದ ಕಳೆಯನ್ನು ಮತ್ತಷ್ಟು ಹೆಚ್ಚಿಸಲಿದ್ದಾರೆ. ಈ ಇವೆಂಟ್​ ಓಪನ್​ ಗ್ರೌಂಡ್​ನಲ್ಲಿ ನಡೆಯುತ್ತಿದೆ. ಹೀಗಾಗಿ ಅಭಿಮಾನಿಗಳಿಗೆ ಯಾವುದೇ ಪಾಸ್​ ಅಗತ್ಯವಿರುವುದಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಈ ಮೊದಲು ‘ಜೇಮ್ಸ್​’ ಪ್ರೀ-ರಿಲೀಸ್​ ಇವೆಂಟ್​ ಬಗ್ಗೆ ವದಂತಿ ಒಂದು ಹರಿದಾಡಿತ್ತು. ಚಿತ್ರತಂಡ ಮಾರ್ಚ್​ 6ರಂದು ಹೊಸಪೇಟೆಯಲ್ಲಿ ಭರ್ಜರಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲು ನಿರ್ಧರಿಸಿದೆ ಎನ್ನಲಾಗಿತ್ತು. ಈ ಕಾರ್ಯಕ್ರಮಕ್ಕೆ ಜ್ಯೂ.ಎನ್​ಟಿಆರ್ ಹಾಗೂ ಚಿರಂಜೀವಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದೂ ಹೇಳಲಾಗಿತ್ತು. ಈ ಬಗ್ಗೆ ಚಿತ್ರತಂಡವೇ ಸ್ಪಷ್ಟನೆ ನೀಡಿತ್ತು. ಈಗ ಬೆಂಗಳೂರಿನಲ್ಲೇ ಅದ್ದೂರಿ ಕಾರ್ಯಕ್ರಮ ನಡೆಯುತ್ತಿದೆ.

ಬುಕಿಂಗ್​ ಶುರು:

ಈ ಮೊದಲು ‘ಜೇಮ್ಸ್​’ ಸಿನಿಮಾದ ಟೀಸರ್​ಅನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್​ನಲ್ಲಿ ಪುನೀತ್​ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ‘ಟ್ರೇಡ್​ಮಾರ್ಕ್​..’ ಸಾಂಗ್​ ರಿಲೀಸ್​ ಮಾಡಲಾಯಿತು. ಇದನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.  ಈ ಎಲ್ಲಾ ಕಾರಣಕ್ಕೆ ಪುನೀತ್​ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ವಿಶ್ವಾದ್ಯಂತ 4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಆನ್​ಲೈನ್​ ಬುಕಿಂಗ್​ ಓಪನ್​ ಆಗಿದೆ.

ಇದನ್ನೂ ಓದಿ: Salaam Soldier: ‘ಜೇಮ್ಸ್​’ ಹೊಸ ಹಾಡು ‘ಸಲಾಂ ಸೋಲ್ಜರ್​’ ರಿಲೀಸ್​; ಸಲಾಂ​ ಪುನೀತ್​ ಎಂದ ಅಪ್ಪು ಫ್ಯಾನ್ಸ್​​

ಸೈನಿಕನ ಗೆಟಪ್​ನಲ್ಲಿ ಆಹಾ ಎಷ್ಟು ಚಂದ ಪುನೀತ್​; ಇಲ್ಲಿವೆ ‘ಜೇಮ್ಸ್​’ ಸಿನಿಮಾದ ಫೋಟೋಗಳು

Published On - 7:34 am, Sat, 12 March 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!