AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾಗೆ ರಿಮೇಕ್ ಆಗಿತ್ತು ‘ಅಪ್ಪು’; ನಿರ್ಮಾಪಕರಿಗೆ 30 ಪಟ್ಟು ಲಾಭ ನೀಡಿತ್ತು ಈ ಚಿತ್ರ

ಪುನೀತ್ ರಾಜ್ಕುಮಾರ್ ಅವರ ಚೊಚ್ಚಲ ಚಿತ್ರವಾದ "ಅಪ್ಪು" ಮಾರ್ಚ್ 14 ರಂದು ಮರು ಬಿಡುಗಡೆಯಾಗುತ್ತಿದೆ. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಂಡು, ಹಲವು ಭಾಷೆಗಳಿಗೆ ರಿಮೇಕ್ ಆಗಿತ್ತು. ಚಿತ್ರದ ಯಶಸ್ಸಿನ ಹಿಂದಿನ ಕಾರಣಗಳು, ಪುನೀತ್ ರಾಜಕುಮಾರ್ ಅವರ ಅಭಿನಯ, ಗುರು ಕಿರಣ್ ಅವರ ಸಂಗೀತ ಮತ್ತು ಚಿತ್ರದ ಕಥಾವಸ್ತು ಎನ್ನಬಹುದು.

ಬಾಂಗ್ಲಾಗೆ ರಿಮೇಕ್ ಆಗಿತ್ತು ‘ಅಪ್ಪು’; ನಿರ್ಮಾಪಕರಿಗೆ 30 ಪಟ್ಟು ಲಾಭ ನೀಡಿತ್ತು ಈ ಚಿತ್ರ
ರಕ್ಷಿತಾ-ಪುನೀತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 13, 2025 | 11:05 AM

Share

ಪುನೀತ್ ರಾಜ್​ಕುಮಾರ್ ನಟನೆಯ ‘ಅಪ್ಪು’ (Appu Movie) ಚಿತ್ರವು ಮಾರ್ಚ್​ 14ರಂದು ರೀ-ರಿಲೀಸ್ ಆಗುತ್ತಿದೆ. ಈ ಚಿತ್ರ ಆಗಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದು ಪುನೀತ್ ರಾಜ್​ಕುಮಾರ್ ಹೀರೋ ಆಗಿ ನಟಿಸಿದ ಮೊದಲ ಸಿನಿಮಾ. ಈ ಕಾರಣದಿಂದಲೂ ಜನರು ಚಿತ್ರವನ್ನು ಮೆಚ್ಚಿಕೊಂಡರು. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡಿತ್ತು. ಇದನ್ನು ರಿಮೇಕ್ ಮಾಡಿದವರೂ ಕೂಡ ಲಾಭ ಕಂಡಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಪುನೀತ್ ರಾಜ್​ಕುಮಾರ್ ನಟನೆಯ ‘ಅಪ್ಪು’ ಚಿತ್ರವನ್ನು ಪುರಿ ಜಗನ್ನಾಥ್ ಅವರು ನಿರ್ದೇಶನ ಮಾಡಿದ್ದರು. ಪುರಿ ಜಗನ್ನಾಥ್ ಅವರೇ ಚಿತ್ರಕ್ಕೆ ಕಥೆ ಬರೆದಿದ್ದರು. ಪುನೀತ್ ಜೊತೆ ರಕ್ಷಿತಾ, ಅವಿನಾಶ್ ಮೊದಲಾದವರು ನಟಿಸಿದ್ದರು. ಈ ಸಿನಿಮಾನ ಪಾರ್ವತಮ್ಮ ರಾಜ್​ಕುಮಾರ್ ಅವರು ನಿರ್ಮಾಣ ಮಾಡಿದ್ದರು. ಈ ಸಿನಿಮಾ ಹಲವು ಭಾಷೆಗೆ ರಿಮೇಕ್ ಆಯಿತು.

‘ಅಪ್ಪು’ ಸಿನಿಮಾ ಮೊದಲು ತೆಲುಗಿಗೆ ರಿಮೇಕ್ ಆಯಿತು. ‘ಈಡಿಯಟ್’ ಹೆಸರಲ್ಲಿ ಚಿತ್ರವನ್ನು ರಿಮೇಕ್ ಮಾಡಲಾಯಿತು. 2003ರಲ್ಲಿ ತಮಿಳಿನಲ್ಲಿ ‘ದಮ್’ ಹೆಸರಲ್ಲಿ ಈ ಚಿತ್ರವನ್ನು ರಿಮೇಕ್ ಮಾಡಲಾಯಿತು. 2006ರಲ್ಲಿ ಬೆಂಗಾಲಿ ಭಾಷೆಗೆ ‘ಹೀರೋ’ ಹೆಸರಲ್ಲಿ ರಿಮೇಕ್ ಮಾಡಲಾಯಿತು. 2008ರಲ್ಲಿ ಈ ಚಿತ್ರ ಬಾಂಗ್ಲಾಗೆ ಹೋಯಿತು.

ಇದನ್ನೂ ಓದಿ
Image
18 ಕೋಟಿ ರೂ.ಗೆ ಕನ್ಯತ್ವ ಮಾರಿಕೊಂಡ ವಿದ್ಯಾರ್ಥಿನಿ; ಹಾಲಿವುಡ್ ಹೀರೋ ಖರೀದಿ
Image
ಬೇಸರದಲ್ಲಿರೋ ಸೋನು ನಿಗಮ್ ಬೆಂಬಲಕ್ಕೆ ನಿಂತ ಸಂಗೀತಾ ಶೃಂಗೇರಿ
Image
ಯಶ್​ ಬಗ್ಗೆ ಗುಣಗಾನ ಮಾಡಿದ ಹಾಲಿವುಡ್ ತಂತ್ರಜ್ಞ; ಕನ್ನಡ ಚಿತ್ರರಂಗದ ಹೆಮ್ಮೆ
Image
‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು

ಹೌದು, ಬಾಂಗ್ಲಾ ಬೆಂಗಾಲಿಯಲ್ಲಿ ಚಿತ್ರವನ್ನು 2008ರಲ್ಲಿ ರಿಮೇಕ್ ಮಾಡಲಾಯಿತು. ಈ ಚಿತ್ರಕ್ಕೆ ‘ಪ್ರಿಯಾ ಅಮರ್ ಪ್ರಿಯಾ’ ಎಂದು ಟೈಟಲ್ ಕೊಡಲಾಯಿತು. ಕೇವಲ 1 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾ, ಸುಮಾರು 30 ಕೋಟಿ ರೂಪಾಯಿ ಲಾಭವನ್ನು ಕಂಡಿತ್ತು.

ಇದನ್ನೂ ಓದಿ: ‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು; ಇಲ್ಲಿದೆ ಹಳೆಯ ವಿಡಿಯೋ

‘ಅಪ್ಪು’ ಸಿನಿಮಾ ಹಿಟ್ ಆಗಲು ಹಲವು ಕಾರಣಗಳು ಇದ್ದವು. ಈ ಸಿನಿಮಾ ಪುನೀತ್ ರಾಜ್​ಕುಮಾರ್​ ಮ್ಯಾನರಿಸಂಗೆ ಸರಿಯಾಗಿ ಹೊಂದಾಣಿಕೆ ಆಗುವ ರೀತಿಯಲ್ಲಿ ಇತ್ತು. ಅವರ ಮೊದಲ ಚಿತ್ರ ಇದಾಗಿತ್ತು. ಇನ್ನು ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದು ಗುರು ಕಿರಣ್. ಅವರ ಹಾಡುಗಳು ಸೂಪರ್ ಹಿಟ್ ಆದವು. ಈ ಹಾಡಿನ ಮೂಲಕ ಚಿತ್ರವು ಮತ್ತಷ್ಟಯು ಗಮನ ಸೆಳೆಯಿತು ಎಂದೇ ಹೇಳಬಹುದು. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಚಿತ್ರದ 100 ದಿನಗಳ ಸಂಭ್ರಮಾಚರಣೆ ಹೇಗಿತ್ತು ಎಂಬುದರ ವಿಡಿಯೋ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ