AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deep Sidhu ಪಂಜಾಬಿ ನಟ-ಕಾರ್ಯಕರ್ತ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸುವ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಸಿಧು ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು.

Deep Sidhu ಪಂಜಾಬಿ ನಟ-ಕಾರ್ಯಕರ್ತ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು
ದೀಪ್ ಸಿಧು (ಸಂಗ್ರಹ ಚಿತ್ರ)
TV9 Web
| Edited By: |

Updated on:Feb 15, 2022 | 10:55 PM

Share

ದೆಹಲಿ: ಕಳೆದ ವರ್ಷ ಗಣರಾಜ್ಯೋತ್ಸವದಂದು (Republic Day) ರೈತರ ಪ್ರತಿಭಟನೆಯ ವೇಳೆ ಕೆಂಪು ಕೋಟೆ ಹಿಂಸಾಚಾರದ ನಂತರ ಬೆಳಕಿಗೆ ಬಂದ ಪಂಜಾಬಿ ನಟ-ಕಾರ್ಯಕರ್ತ ದೀಪ್ ಸಿಧು (Deep Sidhu) ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸುವ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಸಿಧು ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ದೆಹಲಿಯನ್ನು ಬೈಪಾಸ್ ಮಾಡುವ ಕುಂಡ್ಲಿ-ಮನೇಸರ್-ಪಲ್ವಾಲ್ (KMP) ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳದ ದೃಶ್ಯಗಳು ಟ್ರೈಲರ್ ಟ್ರಕ್‌ನ ಹಿಂಭಾಗದಲ್ಲಿ ಬಿಳಿ ಮಹೀಂದ್ರಾ ಸ್ಕಾರ್ಪಿಯೊ ಒಡೆದಿರುವುದನ್ನು ತೋರಿಸುತ್ತವೆ.ಎಸ್ ಯುವಿಯ ನ ಡ್ರೈವರ್ ಸೈಡ್ ಸಂಪೂರ್ಣ ಹಾನಿಗೊಳಗಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಸಿಧು ಅವರು ದೆಹಲಿಯಿಂದ ಪಂಜಾಬ್‌ನ ಭಟಿಂಡಾಗೆ ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ 9:30 ಕ್ಕೆ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆಸ್ಪತ್ರೆಗೆ ತರುವಾಗಲೇ ಅವರು ಮೃತಪಟ್ಟಿದ್ದರು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.ಕಳೆದ ವರ್ಷ ಫೆಬ್ರುವರಿಯಲ್ಲಿ ದೀಪ್ ಸಿಧು ಬಂಧನದ ನಂತರ, “ಹಿಂಸಾಚಾರವನ್ನು ಸೃಷ್ಟಿಸುವುದು ಮತ್ತು ನಮ್ಮ ರಾಷ್ಟ್ರಧ್ವಜವನ್ನು ಕಡೆಗಣಿಸುವುದು” ಆತನ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದರು. ಸಿಧು ಅವರು ಕೆಂಪು ಕೋಟೆಯ ಘಟನೆಯ “ಮುಖ್ಯ ಗಲಭೆಕೋರ ಮತ್ತು ಪ್ರಚೋದಕ”, ಅವರು “ಜನರನ್ನು ಕೆರಳಿಸಿ ಹಿಂಸಾಚಾರವನ್ನು ಪ್ರಚೋದಿಸಿದರು”. ಅವರು ಕತ್ತಿ, ಕೋಲು ಮತ್ತು ಬಾವುಟ ಹಿಡಿದಿರುವ ವಿಡಿಯೊ ಇದೆ ಎಂದು ಪೊಲೀಸರು ದೆಹಲಿ  ನ್ಯಾಯಾಲಯದಲ್ಲಿ ಹೇಳಿದ್ದರು.

ಆದಾಗ್ಯೂ, ನ್ಯಾಯಾಲಯವು ಈ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿದ್ದು, ಅವರು ಜನಪ್ರಿಯರಾಗಿದ್ದರಿಂದ ಪ್ರಾಸಿಕ್ಯೂಷನ್ ಅವರನ್ನು ಉದಾಹರಣೆಯಾಗಿ ಮಾಡಲು ಪ್ರಯತ್ನಿಸಿದೆ. ಆದರೆ ಇದು “ನ್ಯಾಯದ ವೈಫಲ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ” ಮತ್ತು ಅವರ ನಿರಂತರ ಬಂಧನವು ಅವರ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು.

ಕೆಲವು ಗಂಟೆಗಳ ನಂತರ, ಸ್ಮಾರಕಕ್ಕೆ ಹಾನಿ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರ ಅಪರಾಧ ವಿಭಾಗವು ಸಿಧು ಅವರನ್ನು ಬಂಧಿಸಿತು. ಅವರ ಬಂಧನವನ್ನು ಅತೀ ಕೆಟ್ಟ ಕ್ರಮ ಎಂದು ಕರೆದ ದೆಹಲಿ ನ್ಯಾಯಾಲಯವು ಅವರಿಗೆ ಎರಡನೇ ಬಾರಿಗೆ ಜಾಮೀನು ನೀಡಿತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಜಾತಿಗೆ ಸಂಬಂಧಿಸಿದ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ದೀಪ್ ಸಿಧು ಅವರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಅಸ್ಸಾಂನಲ್ಲಿ ಸಾವಿರಾರು ದೂರುಗಳು ದಾಖಲು

Published On - 10:17 pm, Tue, 15 February 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್