AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aman Dhaliwal: ಪಂಜಾಬಿ ನಟ ಅಮನ್​ ಧಾಲಿವಾಲ್​ ಮೇಲೆ ಮಾರಣಾಂತಿಕ ಹಲ್ಲೆ; ವಿಡಿಯೋ ವೈರಲ್​

Aman Dhaliwal Viral Video: ಅಮನ್​ ಧಾಲಿವಾಲ್​ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗ ಕಿಡಿಗೇಡಿಯೊಬ್ಬ ಒಳಗೆ ಪ್ರವೇಶಿಸಿದ್ದಾನೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದು ಹಲ್ಲೆ ಮಾಡಿದ್ದಾನೆ.

Aman Dhaliwal: ಪಂಜಾಬಿ ನಟ ಅಮನ್​ ಧಾಲಿವಾಲ್​ ಮೇಲೆ ಮಾರಣಾಂತಿಕ ಹಲ್ಲೆ; ವಿಡಿಯೋ ವೈರಲ್​
ಅಮನ್ ಧಾಲಿವಾಲ್
Follow us
ಮದನ್​ ಕುಮಾರ್​
|

Updated on: Mar 16, 2023 | 4:04 PM

ಪಂಜಾಬಿ ಮತ್ತು ಹಿಂದಿ ಚಿತ್ರರಂಗದಲ್ಲಿ ನಟಿಸಿ ಫೇಮಸ್​ ಆಗಿರುವ ನಟ ಅಮನ್​ ಧಾಲಿವಾಲ್ (Aman Dhaliwal)​ ಅವರು ಅಮೆರಿಕದಲ್ಲಿ ನೆಲೆಸಿದ್ದಾರೆ. ಅಲ್ಲಿ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ (Assaut) ಮಾಡಲಾಗಿದೆ. ಅಮನ್​ ಧಾಲಿವಾಲ್​ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ. ಈ ಶಾಕಿಂಗ್​ ಘಟನೆಯ ವಿಡಿಯೋ (Aman Dhaliwal Viral Video) ವೈರಲ್​ ಆಗಿದೆ. ಗಂಭೀರವಾಗಿ ಗಾಯಗೊಂಡಿರುವ ಅಮನ್​ ಧಾಲಿವಾಲ್​ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ವೈರಲ್​ ವಿಡಿಯೋದಲ್ಲಿ ಏನಿದೆ?

ಅಮನ್​ ಧಾಲಿವಾಲ್​ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗ ಕಿಡಿಗೇಡಿಯೊಬ್ಬ ಒಳಗೆ ಪ್ರವೇಶಿಸಿದ್ದಾನೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದು ಎಲ್ಲರನ್ನೂ ಬೆದರಿಸಿದ್ದಾನೆ. ನೀರು ಕೊಡುವಂತೆ ದಬಾಯಿಸಿದ್ದಾನೆ. ಅಮನ್​ ಧಾಲಿವಾಲ್​ ಕಡೆಗೆ ಮಚ್ಚು ತೋರಿಸಿ ಹೆದರಿಸಿದ್ದಾನೆ. ಈ ವೇಳೆ ಆತನನ್ನು ಮಣಿಸಲು ಅಮನ್​ ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಂಭೀರ ಗಾಯಗಳು ಆಗಿವೆ. ವೈರಲ್​ ವಿಡಿಯೋ ನೋಡಿ ನೆಟ್ಟಿಗರಿಗೆ ಶಾಕ್​ ಆಗಿದೆ.

ಪೊಲೀಸ್​ ವಶದಲ್ಲಿ ಕಿಡಿಗೇಡಿ:

ಜಿಮ್​ನಲ್ಲಿ ಇದ್ದ ಎಲ್ಲರೂ ಸೇರಿ ಆ ಕಿಡಿಗೇಡಿಯನ್ನು ಹಿಡಿದಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ನಡೆಯುತ್ತಿದ್ದು, ಘಟನೆಯ ವಿವರಗಳನ್ನು ಇನ್ನಷ್ಟೇ ಸಿಗಬೇಕಿದೆ. ಯಾವುದಾದರೂ ವೈಯಕ್ತಿಕ ದ್ವೇಷದಿಂದ ಈ ಹಲ್ಲೆ ನಡೆದಿರಬಹುದೇ ಎಂಬ ಅನುಮಾನ ಕೂಡ ಮೂಡಿದೆ.

ಅಮನ್​ ಧಾಲಿವಾಲ್ ಹಿನ್ನಲೆ:

ಬಾಲಿವುಡ್​ ಸಿನಿಮಾಗಳು ಹಾಗೂ ಪಂಜಾಬಿ ಸಿನಿಮಾಗಳಲ್ಲಿ ಅಮನ್​ ಧಾಲಿವಾಲ್ ಅವರು ನಟಿಸಿದ್ದಾರೆ. ‘ಜೋದಾ ಅಖ್ಬರ್​’ ಚಿತ್ರದಲ್ಲಿ ಅವರು ಹೃತಿಕ್​ ರೋಷನ್​ ಮತ್ತು ಐಶ್ವರ್ಯಾ ರೈ ಜೊತೆ ಕೆಲಸ ಮಾಡಿದ್ದಾರೆ. ಈಗ ಅವರು ಅಮೆರಿಕದಲ್ಲಿ ಸೆಟ್ಲ್​ ಆಗಿದ್ದಾರೆ. ‘ಬಿಗ್​ ಬ್ರದರ್​’, ‘ಇಕ್​ ಕುಡಿ ಪಂಜಾಬ್​ ದಿ’, ‘ಅಜ್​ ದೇ ರಾಂಜಾ’ ಮುಂತಾದ ಸಿನಮಾದಲ್ಲಿ ಅವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ