AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು

ಮಂಗಳವಾರ (ಮಾ.30) ಮುಂಜಾನೆ ಬೆಳಗ್ಗೆ ಅಮೃತ್​ಸರದಿಂದ ಕರ್ತಾಪುರ್​ನಲ್ಲಿರುವ ತಮ್ಮ ನಿವಾಸಕ್ಕೆ ದಿಲ್​​ಜಾನ್​ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಗುದ್ದಿದೆ.

ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು
ಮೃತಪಟ್ಟ ದಿಲ್​ಜಾನ್​
ರಾಜೇಶ್ ದುಗ್ಗುಮನೆ
|

Updated on:Mar 30, 2021 | 6:45 PM

Share

ಅಮೃತ್​ ಸರದ ಜಂಡಿಯಾಲಾ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಸಿಂಗರ್​ ದಿಲ್​ಜಾನ್​ (31) ಅವರು ಮೃತಪಟ್ಟಿದ್ದಾರೆ. ಅವರ ಸಾವಿಗೆ ಟ್ವಿಟರ್​ನಲ್ಲಿ ಶೋಕ ವ್ಯಕ್ತವಾಗಿದೆ. ಮಂಗಳವಾರ (ಮಾ.30) ಮುಂಜಾನೆ ಬೆಳಗ್ಗೆ ಅಮೃತ್​ಸರದಿಂದ ಕರ್ತಾಪುರ್​ನಲ್ಲಿರುವ ತಮ್ಮ ನಿವಾಸಕ್ಕೆ ದಿಲ್​​ಜಾನ್​ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಗುದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ದಿಲ್​ಜಾನ್​ ಹೆಂಡತಿ ಹಾಗೂ ಮಕ್ಕಳು ಕೆನಡಾದಲ್ಲಿ ವಾಸವಾಗಿದ್ದಾರೆ.

ಅಪಘಾತವಾಗಿದ್ದು ಹೇಗೆ? ದಿಲ್​ಜಾನ್​ ಕರ್ತಾಪುರ್​​ದಲ್ಲಿ ವಾಸವಾಗಿದ್ದಾರೆ. ಮಂಗಳವಾರ ಮುಂಜಾನೆ ಅಮೃತ್​ಸರ-ಜಲಂದರ್​ ಜಿಟಿ ರಸ್ತೆಯಲ್ಲಿ ದಿಲ್​ಜಾನ್​ ತಮ್ಮ ಕಾರಿನಲ್ಲಿ ಸಾಗುತ್ತಿದ್ದರು. ಅಪಘಾತವಾದ ರಭಸಕ್ಕೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನುವ ಮಾಹಿತಿ ಕೂಡ ಕೇಳಿ ಬಂದಿದೆ. ಈ ಅಪಘಾತಕ್ಕೆ ಕಾರಣವೇನು ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಿಲ್​ಜಾನ್​ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲ ವರದಿಗಳ ಪ್ರಕಾರ ಕಾರು ವೇಗವಾಗಿ ಸಾಗುತ್ತಿತ್ತಂತೆ. ಹೀಗಾಗಿ, ಕಾರು ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಪಂಜಾಬಿ ಇಂಡಸ್ಟ್ರಿ ಕಂಬನಿ ದಿಲ್​ಜಾನ್​ ಸಾವಿಗೆ ಪಂಜಾಬಿ ಸಂಗೀತ ಇಂಡಸ್ಟ್ರಿ ಬೇಸರ ಹೊರ ಹಾಕಿದೆ. ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಈ ಗಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ದಿಲ್​ಜಾನ್​ ಯಾರು? ದಿಲ್​ಜಾನ್​ ಪಂಜಾಬ್​ನ ಖ್ಯಾತ ಸಿಂಗರ್​. ಸುರ್​ ಕ್ಷೇತ್ರ (2012) ರಿಯಾಲಿಟಿ ಶೋನ ಸ್ಪರ್ಧಿ ಆಗಿದ್ದರು. ಈ ಕಾರ್ಯಕ್ರಮದ ನಂತರ ಇವರ ಖ್ಯಾತಿ ಹೆಚ್ಚಿತ್ತು. ದಿಲ್​ಜಾನ್​ ಸಾಕಷ್ಟು ಪಂಜಾಬಿ ಹಾಡುಗಳಿಗೆ ಧ್ವನಿ ಆಗಿದ್ದಾರೆ.

ಇದನ್ನೂ ಓದಿ: Tamil Nadu: ಧಾರಾಪುರಂನಲ್ಲಿ ಕಾರು ಅಪಘಾತ; ತಮಿಳುನಾಡು ವಿಧಾನಸಭೆಯ ಸ್ಪೀಕರ್ ಪಿ.ಧನಪಾಲ್​ಗೆ ಗಾಯ

Published On - 6:27 pm, Tue, 30 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More