AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು

ಮಂಗಳವಾರ (ಮಾ.30) ಮುಂಜಾನೆ ಬೆಳಗ್ಗೆ ಅಮೃತ್​ಸರದಿಂದ ಕರ್ತಾಪುರ್​ನಲ್ಲಿರುವ ತಮ್ಮ ನಿವಾಸಕ್ಕೆ ದಿಲ್​​ಜಾನ್​ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಗುದ್ದಿದೆ.

ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು
ಮೃತಪಟ್ಟ ದಿಲ್​ಜಾನ್​
ರಾಜೇಶ್ ದುಗ್ಗುಮನೆ
|

Updated on:Mar 30, 2021 | 6:45 PM

Share

ಅಮೃತ್​ ಸರದ ಜಂಡಿಯಾಲಾ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಸಿಂಗರ್​ ದಿಲ್​ಜಾನ್​ (31) ಅವರು ಮೃತಪಟ್ಟಿದ್ದಾರೆ. ಅವರ ಸಾವಿಗೆ ಟ್ವಿಟರ್​ನಲ್ಲಿ ಶೋಕ ವ್ಯಕ್ತವಾಗಿದೆ. ಮಂಗಳವಾರ (ಮಾ.30) ಮುಂಜಾನೆ ಬೆಳಗ್ಗೆ ಅಮೃತ್​ಸರದಿಂದ ಕರ್ತಾಪುರ್​ನಲ್ಲಿರುವ ತಮ್ಮ ನಿವಾಸಕ್ಕೆ ದಿಲ್​​ಜಾನ್​ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಗುದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ದಿಲ್​ಜಾನ್​ ಹೆಂಡತಿ ಹಾಗೂ ಮಕ್ಕಳು ಕೆನಡಾದಲ್ಲಿ ವಾಸವಾಗಿದ್ದಾರೆ.

ಅಪಘಾತವಾಗಿದ್ದು ಹೇಗೆ? ದಿಲ್​ಜಾನ್​ ಕರ್ತಾಪುರ್​​ದಲ್ಲಿ ವಾಸವಾಗಿದ್ದಾರೆ. ಮಂಗಳವಾರ ಮುಂಜಾನೆ ಅಮೃತ್​ಸರ-ಜಲಂದರ್​ ಜಿಟಿ ರಸ್ತೆಯಲ್ಲಿ ದಿಲ್​ಜಾನ್​ ತಮ್ಮ ಕಾರಿನಲ್ಲಿ ಸಾಗುತ್ತಿದ್ದರು. ಅಪಘಾತವಾದ ರಭಸಕ್ಕೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನುವ ಮಾಹಿತಿ ಕೂಡ ಕೇಳಿ ಬಂದಿದೆ. ಈ ಅಪಘಾತಕ್ಕೆ ಕಾರಣವೇನು ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಿಲ್​ಜಾನ್​ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲ ವರದಿಗಳ ಪ್ರಕಾರ ಕಾರು ವೇಗವಾಗಿ ಸಾಗುತ್ತಿತ್ತಂತೆ. ಹೀಗಾಗಿ, ಕಾರು ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಪಂಜಾಬಿ ಇಂಡಸ್ಟ್ರಿ ಕಂಬನಿ ದಿಲ್​ಜಾನ್​ ಸಾವಿಗೆ ಪಂಜಾಬಿ ಸಂಗೀತ ಇಂಡಸ್ಟ್ರಿ ಬೇಸರ ಹೊರ ಹಾಕಿದೆ. ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಈ ಗಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ದಿಲ್​ಜಾನ್​ ಯಾರು? ದಿಲ್​ಜಾನ್​ ಪಂಜಾಬ್​ನ ಖ್ಯಾತ ಸಿಂಗರ್​. ಸುರ್​ ಕ್ಷೇತ್ರ (2012) ರಿಯಾಲಿಟಿ ಶೋನ ಸ್ಪರ್ಧಿ ಆಗಿದ್ದರು. ಈ ಕಾರ್ಯಕ್ರಮದ ನಂತರ ಇವರ ಖ್ಯಾತಿ ಹೆಚ್ಚಿತ್ತು. ದಿಲ್​ಜಾನ್​ ಸಾಕಷ್ಟು ಪಂಜಾಬಿ ಹಾಡುಗಳಿಗೆ ಧ್ವನಿ ಆಗಿದ್ದಾರೆ.

ಇದನ್ನೂ ಓದಿ: Tamil Nadu: ಧಾರಾಪುರಂನಲ್ಲಿ ಕಾರು ಅಪಘಾತ; ತಮಿಳುನಾಡು ವಿಧಾನಸಭೆಯ ಸ್ಪೀಕರ್ ಪಿ.ಧನಪಾಲ್​ಗೆ ಗಾಯ

Published On - 6:27 pm, Tue, 30 March 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?