AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್​’ ಸೋತ ಬೆನ್ನಲ್ಲೇ ಪುರಿ ಜಗನ್ನಾಥ್​ ಸಹಾಯಕ ನಿರ್ದೇಶಕ ಸಾಯಿ ಕುಮಾರ್​ ಆತ್ಮಹತ್ಯೆ

Sai Kumar suicide: ಸಾಯಿ ಕುಮಾರ್​ ಅವರಿಗೆ 35 ವರ್ಷ ವಯಸ್ಸಾಗಿತ್ತು. ಅವರ ಮೃತದೇಹ ಸಿಕ್ಕ ಬಳಿಕ ಪೊಲೀಸರು ಕೇಸ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

‘ಲೈಗರ್​’ ಸೋತ ಬೆನ್ನಲ್ಲೇ ಪುರಿ ಜಗನ್ನಾಥ್​ ಸಹಾಯಕ ನಿರ್ದೇಶಕ ಸಾಯಿ ಕುಮಾರ್​ ಆತ್ಮಹತ್ಯೆ
ಸಾಯಿ ಕುಮಾರ್, ಪುರಿ ಜಗನ್ನಾಥ್
TV9 Web
| Edited By: |

Updated on:Sep 11, 2022 | 3:20 PM

Share

ಖ್ಯಾತ ನಿರ್ದೇಶಕ, ನಿರ್ಮಾಪಕ ಪುರಿ ಜಗನ್ನಾಥ್​ (Puri Jagannadh) ಅವರಿಗೆ 2022ರ ವರ್ಷ ತುಂಬ ನೆಗೆಟಿವ್​ ಆಗಿದೆ. ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಲೈಗರ್​’ ಸಿನಿಮಾ (Liger) ಸೋಲು ಕಂಡಿತು. ಇದರ ಬೆನ್ನಲ್ಲೇ ಮತ್ತೊಂದು ಕಹಿ ಸುದ್ದಿ ಕೇಳಿಬಂದಿದೆ. ಪುರಿ ಜಗನ್ನಾಥ್​ ಅವರ ಜೊತೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಸಾಯಿ ಕುಮಾರ್​ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ಕೇಳಿ ಇಡೀ ಟಾಲಿವುಡ್​ ಮರುಕ ವ್ಯಕ್ತಪಡಿಸುತ್ತಿದೆ. ಕಳೆದ ಕೆಲವು ತಿಂಗಳಿಂದ ಸಾಯಿ ಕುಮಾರ್​ ಅವರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಹಾಗಾಗಿ ಅವರು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಕ್ಕೆ ಹಣಕಾಸಿನ ತೊಂದರೆಯೇ ಕಾರಣ ಎಂದು ಹೇಳಲಾಗುತ್ತಿದೆ. ಪೊಲೀಸ್​ ತನಿಖೆ ಬಳಿಕ ಸ್ಪಷ್ಟ ಚಿತ್ರಣ ದೊರಕಬೇಕಿದೆ.

ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಚಿತ್ರಕ್ಕೆ ಪುರಿ ಜಗನ್ನಾಥ್​ ಅವರು ನಿರ್ದೇಶನ ಮಾಡಿದ್ದರು. ನಿರ್ಮಾಣದಲ್ಲೂ ಅವರು ಪಾಲುದಾರಿಕೆ ಹೊಂದಿದ್ದರು. ಅಂದುಕೊಂಡ ರೀತಿಯಲ್ಲಿ ಈ ಚಿತ್ರಕ್ಕೆ ಕಲೆಕ್ಷನ್ ಆಗಲಿಲ್ಲ. ಆ ಬಳಿಕ ಅನೇಕ ಸುದ್ದಿಗಳು ಹರಿದಾಡಲು ಆರಂಭಿಸಿವೆ. ಮುಂಬೈನಲ್ಲಿ ಪುರಿ ಜಗನ್ನಾಥ್​ ಮಾಡಿಕೊಂಡಿದ್ದ ಆಫೀಸ್​ ಕಟ್ಟಡವನ್ನು ತೆರವುಗೊಳಿಸಿದ್ದಾರೆ ಎನ್ನಲಾಗಿದೆ. ಭಾರಿ ನಷ್ಟದಿಂದಾಗಿ ತಮ್ಮ ಸಿಬ್ಬಂದಿಗಳಿಗೂ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಅದರ ಬೆನ್ನಲ್ಲೇ ಸಹಾಯಕ ನಿರ್ದೇಶಕ ಸಾಯಿ ಕುಮಾರ್​ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಸಾಯಿ ಕುಮಾರ್​ ಅವರಿಗೆ 35 ವರ್ಷ ವಯಸ್ಸಾಗಿತ್ತು. ಅವರ ಮೃತದೇಹ ಸಿಕ್ಕ ಬಳಿಕ ಪೊಲೀಸರು ಕೇಸ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ‘ಲೈಗರ್​’ ಸಿನಿಮಾದ ಸೋಲಿಗೂ, ಸಾಯಿ ಕುಮಾರ್​ ಆತ್ಮಹತ್ಯೆಗೂ ಏನಾದರೂ ನೇರ ಸಂಬಂಧ ಇದೆಯೇ ಎಂಬುದು ತನಿಖೆ ಬಳಿಕವೇ ಗೊತ್ತಾಗಬೇಕಿದೆ.

ಇದನ್ನೂ ಓದಿ
Image
ಆತ್ಮಹತ್ಯೆ ಮಾಡಿಕೊಂಡ ಮಲಯಾಳಂ ನಟ; ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್ ಶವ ಪತ್ತೆ
Image
18ನೇ ವಯಸ್ಸಿಗೆ ಮದುವೆ, ನಿರಂತರ ಕಿರುಕುಳ; ಕಿಟಕಿ ಸರಳಿಗೆ ನೇಣು ಬಿಗಿದುಕೊಂಡು ಯುವನಟಿಯ ಆತ್ಮಹತ್ಯೆ
Image
ಆತ್ಮಹತ್ಯೆ ಮಾಡಿಕೊಂಡ ಆಸ್ಕರ್​ ಪುರಸ್ಕೃತ ನಟಿಯ ಮಗ; ರೆಜೀನಾ ಕಿಂಗ್​ ಬಾಳಿನಲ್ಲಿ ಆವರಿಸಿತು ಕತ್ತಲು
Image
ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಆತ್ಮಹತ್ಯೆ; ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು

ಹೊರಗಿನಿಂದ ನೋಡುವವರಿಗೆ ಚಿತ್ರರಂಗ ಕಲರ್​ಫುಲ್​ ಆಗಿ ಕಾಣುತ್ತದೆ. ಆದರೆ ಈ ಕ್ಷೇತ್ರದಲ್ಲೂ ಕೂಡ ಕಷ್ಟ-ನಷ್ಟ ಎದುರಾಗುತ್ತದೆ ಎಂಬುದು ಹೊರಗಿನವರಿಗೆ ಅರ್ಥ ಆಗುವುದು ವಿರಳ. ಒಂದು ಸಿನಿಮಾ ಸೋತರೆ ಅದರಿಂದ ಅನೇಕರ ಜೀವನ ಕಷ್ಟಕ್ಕೆ ತಳ್ಳಲ್ಪಡುತ್ತದೆ. ಸರಿಯಾದ ಅವಕಾಶ ಸಿಗದೇ ಇದ್ದರೆ ಬದುಕು ನಡೆಸುವುದೇ ಕಷ್ಟ ಆಗಿಬಿಡುತ್ತದೆ.

‘ಲೈಗರ್​’ ಚಿತ್ರದ ಸೋಲಿನಿಂದ ಅನೇಕರ ಕನಸು ಭಗ್ನ ಆಗಿದೆ. ಈ ಮೊದಲು ಪುರಿ ಜಗನ್ನಾಥ್​ ಮತ್ತು ವಿಜಯ್​ ದೇವರಕೊಂಡ ಕಾಂಬಿನೇಷನ್​ನಲ್ಲಿ ‘ಜನ ಗಣ ಮನ’ ಸಿನಿಮಾ ಅನೌನ್ಸ್​ ಮಾಡಲಾಗಿತ್ತು. ಈಗ ಆ ಚಿತ್ರವನ್ನು ಕೈ ಬಿಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:20 pm, Sun, 11 September 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ