AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರ ಸ್ವರೂಪ ಪಡೆದುಕೊಂಡ ಬ್ಲಾಕ್​ಮೇಲ್ ಪ್ರಕರಣ; ಭಯಗೊಂಡ ನಿರ್ದೇಶಕ ಪುರಿ ಜಗನ್ನಾಥ್

ಕೆಲ ಹಂಚಿಕೆದಾರರು ನಷ್ಟ ಉಂಟಾಗಿದೆ ಎಂದು ಆರೋಪ ಮಾಡಿದ್ದರು. ಅವರೆಲ್ಲರಿಗೂ ಪುರಿ ನಷ್ಟ ತುಂಬಿಕೊಟ್ಟಿದ್ದರು. ಇಷ್ಟಾದರೂ ಸುಮ್ಮನಾಗದ ಹಂಚಿಕೆದಾರರು ಪುರಿ ಜಗನ್ನಾಥ್ ಅವರನ್ನು ಬ್ಲಾಕ್​ಮೇಲ್ ಮಾಡಿದ್ದರು.

ಗಂಭೀರ ಸ್ವರೂಪ ಪಡೆದುಕೊಂಡ ಬ್ಲಾಕ್​ಮೇಲ್ ಪ್ರಕರಣ; ಭಯಗೊಂಡ ನಿರ್ದೇಶಕ ಪುರಿ ಜಗನ್ನಾಥ್
ಪುರಿ ಜಗನ್ನಾಥ್
TV9 Web
| Edited By: |

Updated on: Oct 27, 2022 | 7:14 AM

Share

‘ಲೈಗರ್’ ಸಿನಿಮಾ (Liger Movie) ಸೋಲಿನಿಂದ ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರು ಇನ್ನೂ ಚೇತರಿಸಿಕೊಂಡಿಲ್ಲ. ಅವರಿಗೆ ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಬಾಲಿವುಡ್​ನಲ್ಲಿ ಅವರ ಫೇಮ್ ಕಡಿಮೆ ಆಗಿದ್ದು ಒಂದು ಕಡೆಯಾದರೆ ಮತ್ತೊಂದು ಕಡೆ ಅವರು ಬ್ಲಾಕ್​ಮೇಲ್ ​ ಎದುರಿಸುತ್ತಿದ್ದಾರೆ. ಹಣದ ವಿಚಾರದಲ್ಲಿ ಹಂಚಿಕೆದಾರರು ಪುರಿ ಜಗನ್ನಾಥ್ ಅವರನ್ನು ಬೆದರಿಸುತ್ತಿದ್ದಾರೆ. ಇದರಿಂದ ‘ಲೈಗರ್’ ನಿರ್ದೇಶಕ ಭಯಗೊಂಡಿದ್ದಾರೆ. ಈಗ ಅವರು ಕೆಲವರ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಇದರಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಏನಿದು ಪ್ರಕರಣ?

ಪುರಿ ಜಗನ್ನಾಥ್ ಅವರು ಲೈಗರ್ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರಕ್ಕೆ ಅವರು ನಿರ್ಮಾಪಕ ಕೂಡ ಹೌದು. ಈ ಸಿನಿಮಾದಿಂದ ಅನೇಕರು ನಷ್ಟ ಅನುಭವಿಸಿದ್ದಾರೆ. ಕೆಲ ಹಂಚಿಕೆದಾರರು ನಷ್ಟ ಉಂಟಾಗಿದೆ ಎಂದು ಆರೋಪ ಮಾಡಿದ್ದರು. ಅವರೆಲ್ಲರಿಗೂ ಪುರಿ ನಷ್ಟ ತುಂಬಿಕೊಟ್ಟಿದ್ದರು. ಇಷ್ಟಾದರೂ ಸುಮ್ಮನಾಗದ ಹಂಚಿಕೆದಾರರು ಪುರಿ ಜಗನ್ನಾಥ್ ಅವರನ್ನು ಬ್ಲಾಕ್​ಮೇಲ್ ಮಾಡಿದ್ದರು. ಈ ಸಂಬಂಧ ಆಡಿಯೋ ರೆಕಾರ್ಡ್ ಒಂದು ಲೀಕ್ ಆಗಿತ್ತು. ಈಗ ಪುರಿ ಅವರು ಈ ಪ್ರಕರಣದಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಇದನ್ನೂ ಓದಿ
Image
‘ಲೈಗರ್’ ಸಿನಿಮಾದ ಖಳನಟ ವಿಶ್​ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ
Image
Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Vijay Devarakonda: ಒಂದೇ ದಿನದಲ್ಲಿ 5 ಕೋಟಿ​ಗಿಂತ ಹೆಚ್ಚು ಬಾರಿ ವೀಕ್ಷಣೆ ಕಂಡ ‘ಲೈಗರ್​’ ಟ್ರೇಲರ್​

ವಾರಂಗಲ್ ಶ್ರೀನು ವಿರುದ್ಧ ಪುರಿ ಜಗನ್ನಾಥ್ ಅವರು ದೂರು ದಾಖಲು ಮಾಡಿದ್ದಾರೆ. ಹೈದರಾಬಾದ್​ನಲ್ಲಿರುವ ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಿ ಎಂದು ಅವರು ಕೋರಿದ್ದಾರೆ. ಇದಲ್ಲದೆ, ಫೈನಾನ್ಸರ್ ಜಿ. ಶೋಭನ್ ಬಾಬು ವಿರುದ್ಧವೂ ನಿರ್ದೇಶಕ ದೂರು ಕೊಟ್ಟಿದ್ದಾರೆ. ಅವರು ತಮ್ಮ ವಿರುದ್ಧ ಹಿಂಸೆ ಮಾಡಲು ಪ್ರೇರೇಪಿಸಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ.

ಆಡಿಯೋ ರೆಕಾರ್ಡ್​ನಲ್ಲಿ ಏನಿತ್ತು?

‘ಪ್ರಾಮಾಣಿಕತೆ ಇಲ್ಲದ ವಿತರಕರ ಜೊತೆ ವ್ಯವಹಾರ ಮಾಡಿ ನನಗೆ ಸಾಕಾಗಿದೆ. ಇವರೆಲ್ಲ ಬಾಕ್ಸ್​ ಆಫೀಸ್​ ಲೆಕ್ಕಾಚಾರದಲ್ಲಿ ಮೋಸ ಮಾಡ್ತಾರೆ. ಲೈಗರ್​ ಚಿತ್ರವನ್ನು ಉತ್ತರ ಭಾರತದಲ್ಲಿ ವಿತರಣೆ ಮಾಡಿದ ಅನಿಲ್​ ಥಡಾನಿ ಅವರು ನಮಗೆ ಸರಿಯಾದ ಲೆಕ್ಕ ನೀಡ್ತಾರೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂತಲೂ ಅದು ಹೆಚ್ಚಾಗಿತ್ತು. ಅದಕ್ಕಾಗಿಯೇ ನಾನು ಅವರ ಜೊತೆ ಕುಳಿತು ಮಾತನಾಡಲು ಇಷ್ಟಪಡುತ್ತೇನೆ. ಆದರೆ ಇಲ್ಲಿನ ನಮ್ಮ ವಿತರಕರನ್ನು ನೋಡಿದರೆ ನನಗೆ ಅಸಹ್ಯ ಆಗುತ್ತದೆ’ ಎಂದು ಪುರಿ ಜಗನ್ನಾಥ್ ಅವರು ಆಡಿಯೋದಲ್ಲಿ ಹೇಳಿದ್ದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್