AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರ ಸ್ವರೂಪ ಪಡೆದುಕೊಂಡ ಬ್ಲಾಕ್​ಮೇಲ್ ಪ್ರಕರಣ; ಭಯಗೊಂಡ ನಿರ್ದೇಶಕ ಪುರಿ ಜಗನ್ನಾಥ್

ಕೆಲ ಹಂಚಿಕೆದಾರರು ನಷ್ಟ ಉಂಟಾಗಿದೆ ಎಂದು ಆರೋಪ ಮಾಡಿದ್ದರು. ಅವರೆಲ್ಲರಿಗೂ ಪುರಿ ನಷ್ಟ ತುಂಬಿಕೊಟ್ಟಿದ್ದರು. ಇಷ್ಟಾದರೂ ಸುಮ್ಮನಾಗದ ಹಂಚಿಕೆದಾರರು ಪುರಿ ಜಗನ್ನಾಥ್ ಅವರನ್ನು ಬ್ಲಾಕ್​ಮೇಲ್ ಮಾಡಿದ್ದರು.

ಗಂಭೀರ ಸ್ವರೂಪ ಪಡೆದುಕೊಂಡ ಬ್ಲಾಕ್​ಮೇಲ್ ಪ್ರಕರಣ; ಭಯಗೊಂಡ ನಿರ್ದೇಶಕ ಪುರಿ ಜಗನ್ನಾಥ್
ಪುರಿ ಜಗನ್ನಾಥ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 27, 2022 | 7:14 AM

Share

‘ಲೈಗರ್’ ಸಿನಿಮಾ (Liger Movie) ಸೋಲಿನಿಂದ ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರು ಇನ್ನೂ ಚೇತರಿಸಿಕೊಂಡಿಲ್ಲ. ಅವರಿಗೆ ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಬಾಲಿವುಡ್​ನಲ್ಲಿ ಅವರ ಫೇಮ್ ಕಡಿಮೆ ಆಗಿದ್ದು ಒಂದು ಕಡೆಯಾದರೆ ಮತ್ತೊಂದು ಕಡೆ ಅವರು ಬ್ಲಾಕ್​ಮೇಲ್ ​ ಎದುರಿಸುತ್ತಿದ್ದಾರೆ. ಹಣದ ವಿಚಾರದಲ್ಲಿ ಹಂಚಿಕೆದಾರರು ಪುರಿ ಜಗನ್ನಾಥ್ ಅವರನ್ನು ಬೆದರಿಸುತ್ತಿದ್ದಾರೆ. ಇದರಿಂದ ‘ಲೈಗರ್’ ನಿರ್ದೇಶಕ ಭಯಗೊಂಡಿದ್ದಾರೆ. ಈಗ ಅವರು ಕೆಲವರ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಇದರಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಏನಿದು ಪ್ರಕರಣ?

ಪುರಿ ಜಗನ್ನಾಥ್ ಅವರು ಲೈಗರ್ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರಕ್ಕೆ ಅವರು ನಿರ್ಮಾಪಕ ಕೂಡ ಹೌದು. ಈ ಸಿನಿಮಾದಿಂದ ಅನೇಕರು ನಷ್ಟ ಅನುಭವಿಸಿದ್ದಾರೆ. ಕೆಲ ಹಂಚಿಕೆದಾರರು ನಷ್ಟ ಉಂಟಾಗಿದೆ ಎಂದು ಆರೋಪ ಮಾಡಿದ್ದರು. ಅವರೆಲ್ಲರಿಗೂ ಪುರಿ ನಷ್ಟ ತುಂಬಿಕೊಟ್ಟಿದ್ದರು. ಇಷ್ಟಾದರೂ ಸುಮ್ಮನಾಗದ ಹಂಚಿಕೆದಾರರು ಪುರಿ ಜಗನ್ನಾಥ್ ಅವರನ್ನು ಬ್ಲಾಕ್​ಮೇಲ್ ಮಾಡಿದ್ದರು. ಈ ಸಂಬಂಧ ಆಡಿಯೋ ರೆಕಾರ್ಡ್ ಒಂದು ಲೀಕ್ ಆಗಿತ್ತು. ಈಗ ಪುರಿ ಅವರು ಈ ಪ್ರಕರಣದಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಇದನ್ನೂ ಓದಿ
Image
‘ಲೈಗರ್’ ಸಿನಿಮಾದ ಖಳನಟ ವಿಶ್​ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ
Image
Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Vijay Devarakonda: ಒಂದೇ ದಿನದಲ್ಲಿ 5 ಕೋಟಿ​ಗಿಂತ ಹೆಚ್ಚು ಬಾರಿ ವೀಕ್ಷಣೆ ಕಂಡ ‘ಲೈಗರ್​’ ಟ್ರೇಲರ್​

ವಾರಂಗಲ್ ಶ್ರೀನು ವಿರುದ್ಧ ಪುರಿ ಜಗನ್ನಾಥ್ ಅವರು ದೂರು ದಾಖಲು ಮಾಡಿದ್ದಾರೆ. ಹೈದರಾಬಾದ್​ನಲ್ಲಿರುವ ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಿ ಎಂದು ಅವರು ಕೋರಿದ್ದಾರೆ. ಇದಲ್ಲದೆ, ಫೈನಾನ್ಸರ್ ಜಿ. ಶೋಭನ್ ಬಾಬು ವಿರುದ್ಧವೂ ನಿರ್ದೇಶಕ ದೂರು ಕೊಟ್ಟಿದ್ದಾರೆ. ಅವರು ತಮ್ಮ ವಿರುದ್ಧ ಹಿಂಸೆ ಮಾಡಲು ಪ್ರೇರೇಪಿಸಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ.

ಆಡಿಯೋ ರೆಕಾರ್ಡ್​ನಲ್ಲಿ ಏನಿತ್ತು?

‘ಪ್ರಾಮಾಣಿಕತೆ ಇಲ್ಲದ ವಿತರಕರ ಜೊತೆ ವ್ಯವಹಾರ ಮಾಡಿ ನನಗೆ ಸಾಕಾಗಿದೆ. ಇವರೆಲ್ಲ ಬಾಕ್ಸ್​ ಆಫೀಸ್​ ಲೆಕ್ಕಾಚಾರದಲ್ಲಿ ಮೋಸ ಮಾಡ್ತಾರೆ. ಲೈಗರ್​ ಚಿತ್ರವನ್ನು ಉತ್ತರ ಭಾರತದಲ್ಲಿ ವಿತರಣೆ ಮಾಡಿದ ಅನಿಲ್​ ಥಡಾನಿ ಅವರು ನಮಗೆ ಸರಿಯಾದ ಲೆಕ್ಕ ನೀಡ್ತಾರೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂತಲೂ ಅದು ಹೆಚ್ಚಾಗಿತ್ತು. ಅದಕ್ಕಾಗಿಯೇ ನಾನು ಅವರ ಜೊತೆ ಕುಳಿತು ಮಾತನಾಡಲು ಇಷ್ಟಪಡುತ್ತೇನೆ. ಆದರೆ ಇಲ್ಲಿನ ನಮ್ಮ ವಿತರಕರನ್ನು ನೋಡಿದರೆ ನನಗೆ ಅಸಹ್ಯ ಆಗುತ್ತದೆ’ ಎಂದು ಪುರಿ ಜಗನ್ನಾಥ್ ಅವರು ಆಡಿಯೋದಲ್ಲಿ ಹೇಳಿದ್ದರು.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು