Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. ಆದರೆ ಇತ್ತೀಚೆಗೆ ಹಾಗಾಗಿಲ್ಲ.

Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..
ಪುರಿ ಜಗನ್ನಾಥ್
Follow us
ರಾಜೇಶ್ ದುಗ್ಗುಮನೆ
|

Updated on:May 12, 2023 | 7:12 AM

ಕಳೆದ ವರ್ಷ ರಿಲೀಸ್ ಆದ ಪುರಿ ಜಗನ್ನಾಥ್ (Puri Jagannadh) ನಿರ್ದೇಶನದ, ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಹೀನಾಯವಾಗಿ ಸೋಲು ಕಂಡಿತು. ಈ ಸೋಲು ಇಬ್ಬರಿಗೂ ದೊಡ್ಡ ಹೊಡೆತ ನೀಡಿತು. ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ಸಿನಿಮಾ ಮಾಡಬೇಕಿತ್ತು. ಅದ್ದೂರಿಯಾಗಿ ಈ ಸಿನಿಮಾ ಲಾಂಚ್ ಆಗಿತ್ತು ಕೂಡ. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ. ‘ಲೈಗರ್’ (Liger Movie)ಸೋಲು ಎಷ್ಟು ಕೆಟ್ಟದಾಗಿತ್ತು ಎಂಬುದಕ್ಕೆ ಇದೊಂದು ನಿದರ್ಶನ. ಈ ಸಿನಿಮಾ ಬಳಿಕ ಸಿನಿಮಾ ಮಾಡೋಕೆ ಪುರಿ ಜಗನ್ನಾಥ್​ಗೆ ಯಾವುದೇ ಹೀರೋ ಸಿಕ್ಕಿರಲಿಲ್ಲ. ಈಗ ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾರೆ. ರಾಮ್ ಪೋತಿನೇನಿ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. 2000ನೇ ಇಸವಿಯಿಂದ 2020ರವರೆಗೆ ಇದು ಫಾಲೋ ಆಗಿದೆ. ಕೊವಿಡ್ ಹಾಗೂ ‘ಲೈಗರ್’ ಸಿನಿಮಾ ಕೆಲಸದ  ಕಾರಣದಿಂದ 2020 ಹಾಗೂ 2021ರಲ್ಲಿ ಅವರ ನಿರ್ದೇಶನದ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ‘ಲೈಗರ್​’ ಚಿತ್ರಕ್ಕಾಗಿ ಮೂರು ವರ್ಷ ಮುಡಿಪಿಟ್ಟಿದ್ದು ವ್ಯರ್ಥವಾಗಿದೆ.

‘ಲೈಗರ್’ ಬಳಿಕ ಪುರಿ ಜಗನ್ನಾಥ್ ಅವರು ಸ್ಟಾರ್ ಹೀರೋ ಜೊತೆ ಕೆಲಸ ಮಾಡಬೇಕು ಎಂದು ಕನಸು ಕಂಡಿದ್ದರು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಅವರ ಜೊತೆ ಸಿನಿಮಾ ಮಾಡೋಕೆ ಯಾರೂ ಮುಂದೆ ಬರುತ್ತಿಲ್ಲ. ಇದು ಅವರನ್ನು ಚಿಂತೆಗೆ ಈಡು ಮಾಡಿತ್ತು. ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾನೆ.

ಇದನ್ನೂ ಓದಿ: ನಿರ್ದೇಶಕ ಪೂರಿ ಜಗನ್ನಾಥ್​ ಹೊಸ ಸಿನಿಮಾದಲ್ಲಿ ನಟ ಧ್ರುವ ಸರ್ಜಾ?

‘ಇಸ್ಮಾರ್ಟ್​ ಶಂಕರ್’ ಸಿನಿಮಾ 2019ರಲ್ಲಿ ತೆರೆಗೆ ಬಂದು ಯಶಸ್ಸು ಕಂಡಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ರಾಮ್ ಪೋತಿನೇನಿ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದರು. ಸೀಕ್ವೆಲ್​ನಲ್ಲೂ ಅವರೇ ಮುಂದುವರಿಯಲಿದ್ದಾರೆ. ಚಿತ್ರದ ಕಥೆ ಇಷ್ಟವಾಗಿದ್ದು, ಅವರು ಸಿನಿಮಾ ಮಾಡೋಕೆ ಒಪ್ಪಿದ್ದಾರೆ. ಹೀಗಾಗಿ, ಸ್ಟಾರ್ ಹೀರೋ ಜೊತೆ ಮಾಡಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:09 am, Fri, 12 May 23

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..