AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. ಆದರೆ ಇತ್ತೀಚೆಗೆ ಹಾಗಾಗಿಲ್ಲ.

Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..
ಪುರಿ ಜಗನ್ನಾಥ್
ರಾಜೇಶ್ ದುಗ್ಗುಮನೆ
|

Updated on:May 12, 2023 | 7:12 AM

Share

ಕಳೆದ ವರ್ಷ ರಿಲೀಸ್ ಆದ ಪುರಿ ಜಗನ್ನಾಥ್ (Puri Jagannadh) ನಿರ್ದೇಶನದ, ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಹೀನಾಯವಾಗಿ ಸೋಲು ಕಂಡಿತು. ಈ ಸೋಲು ಇಬ್ಬರಿಗೂ ದೊಡ್ಡ ಹೊಡೆತ ನೀಡಿತು. ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ಸಿನಿಮಾ ಮಾಡಬೇಕಿತ್ತು. ಅದ್ದೂರಿಯಾಗಿ ಈ ಸಿನಿಮಾ ಲಾಂಚ್ ಆಗಿತ್ತು ಕೂಡ. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ. ‘ಲೈಗರ್’ (Liger Movie)ಸೋಲು ಎಷ್ಟು ಕೆಟ್ಟದಾಗಿತ್ತು ಎಂಬುದಕ್ಕೆ ಇದೊಂದು ನಿದರ್ಶನ. ಈ ಸಿನಿಮಾ ಬಳಿಕ ಸಿನಿಮಾ ಮಾಡೋಕೆ ಪುರಿ ಜಗನ್ನಾಥ್​ಗೆ ಯಾವುದೇ ಹೀರೋ ಸಿಕ್ಕಿರಲಿಲ್ಲ. ಈಗ ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾರೆ. ರಾಮ್ ಪೋತಿನೇನಿ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. 2000ನೇ ಇಸವಿಯಿಂದ 2020ರವರೆಗೆ ಇದು ಫಾಲೋ ಆಗಿದೆ. ಕೊವಿಡ್ ಹಾಗೂ ‘ಲೈಗರ್’ ಸಿನಿಮಾ ಕೆಲಸದ  ಕಾರಣದಿಂದ 2020 ಹಾಗೂ 2021ರಲ್ಲಿ ಅವರ ನಿರ್ದೇಶನದ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ‘ಲೈಗರ್​’ ಚಿತ್ರಕ್ಕಾಗಿ ಮೂರು ವರ್ಷ ಮುಡಿಪಿಟ್ಟಿದ್ದು ವ್ಯರ್ಥವಾಗಿದೆ.

‘ಲೈಗರ್’ ಬಳಿಕ ಪುರಿ ಜಗನ್ನಾಥ್ ಅವರು ಸ್ಟಾರ್ ಹೀರೋ ಜೊತೆ ಕೆಲಸ ಮಾಡಬೇಕು ಎಂದು ಕನಸು ಕಂಡಿದ್ದರು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಅವರ ಜೊತೆ ಸಿನಿಮಾ ಮಾಡೋಕೆ ಯಾರೂ ಮುಂದೆ ಬರುತ್ತಿಲ್ಲ. ಇದು ಅವರನ್ನು ಚಿಂತೆಗೆ ಈಡು ಮಾಡಿತ್ತು. ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾನೆ.

ಇದನ್ನೂ ಓದಿ: ನಿರ್ದೇಶಕ ಪೂರಿ ಜಗನ್ನಾಥ್​ ಹೊಸ ಸಿನಿಮಾದಲ್ಲಿ ನಟ ಧ್ರುವ ಸರ್ಜಾ?

‘ಇಸ್ಮಾರ್ಟ್​ ಶಂಕರ್’ ಸಿನಿಮಾ 2019ರಲ್ಲಿ ತೆರೆಗೆ ಬಂದು ಯಶಸ್ಸು ಕಂಡಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ರಾಮ್ ಪೋತಿನೇನಿ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದರು. ಸೀಕ್ವೆಲ್​ನಲ್ಲೂ ಅವರೇ ಮುಂದುವರಿಯಲಿದ್ದಾರೆ. ಚಿತ್ರದ ಕಥೆ ಇಷ್ಟವಾಗಿದ್ದು, ಅವರು ಸಿನಿಮಾ ಮಾಡೋಕೆ ಒಪ್ಪಿದ್ದಾರೆ. ಹೀಗಾಗಿ, ಸ್ಟಾರ್ ಹೀರೋ ಜೊತೆ ಮಾಡಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:09 am, Fri, 12 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು