Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. ಆದರೆ ಇತ್ತೀಚೆಗೆ ಹಾಗಾಗಿಲ್ಲ.

Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..
ಪುರಿ ಜಗನ್ನಾಥ್
Follow us
|

Updated on:May 12, 2023 | 7:12 AM

ಕಳೆದ ವರ್ಷ ರಿಲೀಸ್ ಆದ ಪುರಿ ಜಗನ್ನಾಥ್ (Puri Jagannadh) ನಿರ್ದೇಶನದ, ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಹೀನಾಯವಾಗಿ ಸೋಲು ಕಂಡಿತು. ಈ ಸೋಲು ಇಬ್ಬರಿಗೂ ದೊಡ್ಡ ಹೊಡೆತ ನೀಡಿತು. ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ಸಿನಿಮಾ ಮಾಡಬೇಕಿತ್ತು. ಅದ್ದೂರಿಯಾಗಿ ಈ ಸಿನಿಮಾ ಲಾಂಚ್ ಆಗಿತ್ತು ಕೂಡ. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ. ‘ಲೈಗರ್’ (Liger Movie)ಸೋಲು ಎಷ್ಟು ಕೆಟ್ಟದಾಗಿತ್ತು ಎಂಬುದಕ್ಕೆ ಇದೊಂದು ನಿದರ್ಶನ. ಈ ಸಿನಿಮಾ ಬಳಿಕ ಸಿನಿಮಾ ಮಾಡೋಕೆ ಪುರಿ ಜಗನ್ನಾಥ್​ಗೆ ಯಾವುದೇ ಹೀರೋ ಸಿಕ್ಕಿರಲಿಲ್ಲ. ಈಗ ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾರೆ. ರಾಮ್ ಪೋತಿನೇನಿ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. 2000ನೇ ಇಸವಿಯಿಂದ 2020ರವರೆಗೆ ಇದು ಫಾಲೋ ಆಗಿದೆ. ಕೊವಿಡ್ ಹಾಗೂ ‘ಲೈಗರ್’ ಸಿನಿಮಾ ಕೆಲಸದ  ಕಾರಣದಿಂದ 2020 ಹಾಗೂ 2021ರಲ್ಲಿ ಅವರ ನಿರ್ದೇಶನದ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ‘ಲೈಗರ್​’ ಚಿತ್ರಕ್ಕಾಗಿ ಮೂರು ವರ್ಷ ಮುಡಿಪಿಟ್ಟಿದ್ದು ವ್ಯರ್ಥವಾಗಿದೆ.

‘ಲೈಗರ್’ ಬಳಿಕ ಪುರಿ ಜಗನ್ನಾಥ್ ಅವರು ಸ್ಟಾರ್ ಹೀರೋ ಜೊತೆ ಕೆಲಸ ಮಾಡಬೇಕು ಎಂದು ಕನಸು ಕಂಡಿದ್ದರು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಅವರ ಜೊತೆ ಸಿನಿಮಾ ಮಾಡೋಕೆ ಯಾರೂ ಮುಂದೆ ಬರುತ್ತಿಲ್ಲ. ಇದು ಅವರನ್ನು ಚಿಂತೆಗೆ ಈಡು ಮಾಡಿತ್ತು. ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾನೆ.

ಇದನ್ನೂ ಓದಿ: ನಿರ್ದೇಶಕ ಪೂರಿ ಜಗನ್ನಾಥ್​ ಹೊಸ ಸಿನಿಮಾದಲ್ಲಿ ನಟ ಧ್ರುವ ಸರ್ಜಾ?

‘ಇಸ್ಮಾರ್ಟ್​ ಶಂಕರ್’ ಸಿನಿಮಾ 2019ರಲ್ಲಿ ತೆರೆಗೆ ಬಂದು ಯಶಸ್ಸು ಕಂಡಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ರಾಮ್ ಪೋತಿನೇನಿ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದರು. ಸೀಕ್ವೆಲ್​ನಲ್ಲೂ ಅವರೇ ಮುಂದುವರಿಯಲಿದ್ದಾರೆ. ಚಿತ್ರದ ಕಥೆ ಇಷ್ಟವಾಗಿದ್ದು, ಅವರು ಸಿನಿಮಾ ಮಾಡೋಕೆ ಒಪ್ಪಿದ್ದಾರೆ. ಹೀಗಾಗಿ, ಸ್ಟಾರ್ ಹೀರೋ ಜೊತೆ ಮಾಡಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:09 am, Fri, 12 May 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್