AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. ಆದರೆ ಇತ್ತೀಚೆಗೆ ಹಾಗಾಗಿಲ್ಲ.

Puri Jagannadh: ಕೊನೆಗೂ ಪುರಿ ಜಗನ್ನಾಥ್​ಗೆ ಸಿಕ್ಕ ಹೀರೋ; ಆದರೆ ನಿರ್ದೇಶಕರು ಅಂದುಕೊಂಡಂತೆ ಆಗಲೇ ಇಲ್ಲ..
ಪುರಿ ಜಗನ್ನಾಥ್
ರಾಜೇಶ್ ದುಗ್ಗುಮನೆ
|

Updated on:May 12, 2023 | 7:12 AM

Share

ಕಳೆದ ವರ್ಷ ರಿಲೀಸ್ ಆದ ಪುರಿ ಜಗನ್ನಾಥ್ (Puri Jagannadh) ನಿರ್ದೇಶನದ, ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಹೀನಾಯವಾಗಿ ಸೋಲು ಕಂಡಿತು. ಈ ಸೋಲು ಇಬ್ಬರಿಗೂ ದೊಡ್ಡ ಹೊಡೆತ ನೀಡಿತು. ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ಸಿನಿಮಾ ಮಾಡಬೇಕಿತ್ತು. ಅದ್ದೂರಿಯಾಗಿ ಈ ಸಿನಿಮಾ ಲಾಂಚ್ ಆಗಿತ್ತು ಕೂಡ. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ. ‘ಲೈಗರ್’ (Liger Movie)ಸೋಲು ಎಷ್ಟು ಕೆಟ್ಟದಾಗಿತ್ತು ಎಂಬುದಕ್ಕೆ ಇದೊಂದು ನಿದರ್ಶನ. ಈ ಸಿನಿಮಾ ಬಳಿಕ ಸಿನಿಮಾ ಮಾಡೋಕೆ ಪುರಿ ಜಗನ್ನಾಥ್​ಗೆ ಯಾವುದೇ ಹೀರೋ ಸಿಕ್ಕಿರಲಿಲ್ಲ. ಈಗ ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾರೆ. ರಾಮ್ ಪೋತಿನೇನಿ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪುರಿ ಜಗನ್ನಾಥ್ ಅವರ ಒಂದು ಸಿನಿಮಾ ರಿಲೀಸ್ ಆದ ಬಳಿಕ ಮತ್ತೊಂದು ಸಿನಿಮಾ ಅನೌನ್ಸ್ ಆಗುತ್ತಿತ್ತು. ಹೀಗಾಗಿ ಪ್ರತಿ ವರ್ಷ ಅವರ ನಿರ್ದೇಶನದ ಒಂದು ಚಿತ್ರವಾದರೂ ರಿಲೀಸ್ ಆಗುತ್ತಿತ್ತು. 2000ನೇ ಇಸವಿಯಿಂದ 2020ರವರೆಗೆ ಇದು ಫಾಲೋ ಆಗಿದೆ. ಕೊವಿಡ್ ಹಾಗೂ ‘ಲೈಗರ್’ ಸಿನಿಮಾ ಕೆಲಸದ  ಕಾರಣದಿಂದ 2020 ಹಾಗೂ 2021ರಲ್ಲಿ ಅವರ ನಿರ್ದೇಶನದ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ‘ಲೈಗರ್​’ ಚಿತ್ರಕ್ಕಾಗಿ ಮೂರು ವರ್ಷ ಮುಡಿಪಿಟ್ಟಿದ್ದು ವ್ಯರ್ಥವಾಗಿದೆ.

‘ಲೈಗರ್’ ಬಳಿಕ ಪುರಿ ಜಗನ್ನಾಥ್ ಅವರು ಸ್ಟಾರ್ ಹೀರೋ ಜೊತೆ ಕೆಲಸ ಮಾಡಬೇಕು ಎಂದು ಕನಸು ಕಂಡಿದ್ದರು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಅವರ ಜೊತೆ ಸಿನಿಮಾ ಮಾಡೋಕೆ ಯಾರೂ ಮುಂದೆ ಬರುತ್ತಿಲ್ಲ. ಇದು ಅವರನ್ನು ಚಿಂತೆಗೆ ಈಡು ಮಾಡಿತ್ತು. ಕೊನೆಗೂ ಅವರಿಗೆ ಹೀರೋ ಸಿಕ್ಕಿದ್ದಾನೆ.

ಇದನ್ನೂ ಓದಿ: ನಿರ್ದೇಶಕ ಪೂರಿ ಜಗನ್ನಾಥ್​ ಹೊಸ ಸಿನಿಮಾದಲ್ಲಿ ನಟ ಧ್ರುವ ಸರ್ಜಾ?

‘ಇಸ್ಮಾರ್ಟ್​ ಶಂಕರ್’ ಸಿನಿಮಾ 2019ರಲ್ಲಿ ತೆರೆಗೆ ಬಂದು ಯಶಸ್ಸು ಕಂಡಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ರಾಮ್ ಪೋತಿನೇನಿ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದರು. ಸೀಕ್ವೆಲ್​ನಲ್ಲೂ ಅವರೇ ಮುಂದುವರಿಯಲಿದ್ದಾರೆ. ಚಿತ್ರದ ಕಥೆ ಇಷ್ಟವಾಗಿದ್ದು, ಅವರು ಸಿನಿಮಾ ಮಾಡೋಕೆ ಒಪ್ಪಿದ್ದಾರೆ. ಹೀಗಾಗಿ, ಸ್ಟಾರ್ ಹೀರೋ ಜೊತೆ ಮಾಡಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:09 am, Fri, 12 May 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ