AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್​’ ಸೋತ ಬಳಿಕ ಮುಂಬೈ ಬಿಟ್ಟು ಬಂದ ನಿರ್ದೇಶಕ ಪುರಿ ಜಗನ್ನಾಥ್​ ಈಗ ಎಲ್ಲಿದ್ದಾರೆ?

Puri Jagannadh | Liger: ಚಿತ್ರರಂಗದಲ್ಲಿ ಪುರಿ ಜಗನ್ನಾಥ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಾಗಿದ್ದರೂ ಕೂಡ ಅವರು ‘ಲೈಗರ್​’ ಸಿನಿಮಾದಲ್ಲಿ ಎಡವಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತು.

‘ಲೈಗರ್​’ ಸೋತ ಬಳಿಕ ಮುಂಬೈ ಬಿಟ್ಟು ಬಂದ ನಿರ್ದೇಶಕ ಪುರಿ ಜಗನ್ನಾಥ್​ ಈಗ ಎಲ್ಲಿದ್ದಾರೆ?
ಪುರಿ ಜಗನ್ನಾಥ್
TV9 Web
| Updated By: ಮದನ್​ ಕುಮಾರ್​|

Updated on: Sep 27, 2022 | 7:30 AM

Share

ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾ (Liger) ಗೆದ್ದೇ ಗೆಲ್ಲುತ್ತದೆ ಎಂದು ಚಿತ್ರತಂಡ ಸಖತ್​ ನಂಬಿಕೆ ಇಟ್ಟುಕೊಂಡಿತ್ತು. ಟ್ರೇಲರ್​ಗೆ ಸಿಕ್ಕ ಪ್ರತಿಕ್ರಿಯೆ ನೋಡಿ ಈ ಪರಿ ಭರವಸೆ ಇಟ್ಟುಕೊಳ್ಳಲಾಗಿತ್ತು. ವಿಜಯ್​ ದೇವರಕೊಂಡ (Vijay Deverakonda) ಅವರು ಸಿನಿಮಾ ಬಿಡುಗಡೆಗೂ ಮುನ್ನವೇ ಅದನ್ನು ಬ್ಲಾಕ್​ ಬಸ್ಟರ್​ ಎಂದು ಘೋಷಿಸಿದ್ದರು. ಅಷ್ಟರಮಟ್ಟಿಗೆ ಅವರಿಗೆ ಆತ್ಮವಿಶ್ವಾಸ ಇತ್ತು. ಆದರೆ ಅಂತಿಮವಾಗಿ ಆಗಿದ್ದೇ ಬೇರೆ. ಪುರಿ ಜಗನ್ನಾಥ್​ ನಿರ್ದೇಶನದ ಆ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡುವಲ್ಲಿ ಸೋತಿತು. ಅದರ ಪರಿಣಾಮವಾಗಿ ಚಿತ್ರತಂಡದವರ ದಿನಚರಿ ಕೂಡ ಬದಲಾಯಿತು. ಪುರಿ ಜಗನ್ನಾಥ್​ (Puri Jagannadh) ಅವರು ಊರನ್ನೇ ಬದಲಿಸಬೇಕಾಯಿತು!

‘ಲೈಗರ್​’ ಸಿನಿಮಾ ಹಲವು ಭಾಷೆಯಲ್ಲಿ ಮೂಡಿಬಂತು. ಚಿತ್ರತಂಡ ಹೆಚ್ಚು ಒತ್ತು ನೀಡಿದ್ದು ಹಿಂದಿ ಭಾಷೆಗೆ. ಬಾಲಿವುಡ್​ನಲ್ಲಿ ವಿಜಯ್​ ದೇವರಕೊಂಡ ಅವರಿಗೆ ಈ ಚಿತ್ರದಿಂದ ಭದ್ರವಾದ ನೆಲೆ ಸಿಗುವಂತೆ ಮಾಡಬೇಕು ಎಂಬುದು ನಿರ್ದೇಶಕ ಪುರಿ ಜಗನ್ನಾಥ್​ ಅವರು ಪ್ಲ್ಯಾನ್​ ಆಗಿತ್ತು. ಅದಕ್ಕಾಗಿ ಅವರು ಮುಂಬೈನಲ್ಲೇ ಲಕ್ಷ ಲಕ್ಷ ರೂಪಾಯಿ ಬಾಡಿಗೆ ನೀಡಿ ಆಫೀಸ್​ ಮಾಡಿಕೊಂಡು, ಅದನ್ನೇ ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದರು. ಆದರೆ ‘ಲೈಗರ್​’ ಸಿನಿಮಾ ಸೋತ ಬಳಿಕ ಅವರು ಅಲ್ಲಿಂದ ಕಾಲು ಕೀಳುವುದು ಅನಿವಾರ್ಯ ಆಯಿತು.

ದುಬಾರಿ ಬಾಡಿಗೆ ನೀಡುವ ಆ ಆಫೀಸ್​ ಬಾಗಿಲು ಮುಚ್ಚಿಕೊಂಡು, ಪುರಿ ಜಗನ್ನಾಥ್​ ಅವರು ಸದ್ದಿಲ್ಲದೇ ಮುಂಬೈ ತೊರೆದಿದ್ದಾರೆ. ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಅವರೀಗ ಗೋವಾದಲ್ಲಿದ್ದಾರೆ. ಅಲ್ಲಿ ತಮ್ಮ ತಂಡದ ಜೊತೆ ಸೇರಿಕೊಂಡು ಹೊಸ ಚಿತ್ರಕ್ಕಾಗಿ ಸ್ಕ್ರಿಪ್ಟ್​ ಬರೆಯುತ್ತಿದ್ದಾರೆ. ತಮ್ಮ ಮಗ ಆಕಾಶ್​ ನಟಿಸಲಿರುವ ಹೊಸ ಚಿತ್ರಕ್ಕಾಗಿ ಅವರು ಕಥೆ ಸಿದ್ಧಪಡಿಸುತ್ತಿದ್ದಾರೆ ಎಂಬ ಗಾಸಿಪ್​ ಹರಡಿದೆ.

ಇದನ್ನೂ ಓದಿ
Image
‘ಲೈಗರ್’ ಸಿನಿಮಾದ ಖಳನಟ ವಿಶ್​ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ
Image
Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Vijay Devarakonda: ಒಂದೇ ದಿನದಲ್ಲಿ 5 ಕೋಟಿ​ಗಿಂತ ಹೆಚ್ಚು ಬಾರಿ ವೀಕ್ಷಣೆ ಕಂಡ ‘ಲೈಗರ್​’ ಟ್ರೇಲರ್​

ಚಿತ್ರರಂಗದಲ್ಲಿ ಪುರಿ ಜಗನ್ನಾಥ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಾಗಿದ್ದರೂ ಕೂಡ ಅವರು ‘ಲೈಗರ್​’ ಸಿನಿಮಾದಲ್ಲಿ ಎಡವಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಅದ್ದೂರಿ ಮೇಕಿಂಗ್​ ಇದ್ದರೂ, ಕಥೆ ಚೆನ್ನಾಗಿಲ್ಲದಿದ್ದರೆ ಜನರು ಮೆಚ್ಚಿಕೊಳ್ಳುವುದಿಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ಮುಂದಿನ ಚಿತ್ರಕ್ಕೆ ಕಥೆ ಬರೆಯುವಾಗ ಪುರಿ ಜಗನ್ನಾಥ್​ ಅವರು ತುಂಬ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ.

‘ಲೈಗರ್’​ ಸಿನಿಮಾಗೆ ಪುರಿ ಜಗನ್ನಾಥ್​, ಕರಣ್​ ಜೋಹರ್​, ಚಾರ್ಮಿ ಕೌರ್​ ಕೂಡ ನಿರ್ಮಾಪಕರಾಗಿದ್ದರು. ಸಿನಿಮಾ ಸೋತ ಬಳಿಕ ಎಲ್ಲರೂ ಸೈಲೆಂಟ್​ ಆಗಿದ್ದಾರೆ. ತಮ್ಮ ಮುಂದಿನ ನಡೆ ಏನು ಎಂಬ ಬಗ್ಗೆ ಪುರಿ ಜಗನ್ನಾಥ್​ ಅವರು ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!