AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಸೋಲಿನ ಬಳಿಕ ಹೀನಾಯ ಪರಿಸ್ಥಿತಿ ತಲುಪಿದ ಪುರಿ ಜಗನ್ನಾಥ್; ಹುಡುಕಿದರೂ ಸಿಗ್ತಿಲ್ಲ ಹೀರೋಗಳು

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಮತ್ತೊಂದು ಸಿನಿಮಾ ಒಟ್ಟಾಗಿ ಮಾಡಬೇಕಿತ್ತು.ಸದ್ಯ ಸಿನಿಮಾ ಹೋಲ್ಡ್​ನಲ್ಲಿದೆ.

‘ಲೈಗರ್’ ಸೋಲಿನ ಬಳಿಕ ಹೀನಾಯ ಪರಿಸ್ಥಿತಿ ತಲುಪಿದ ಪುರಿ ಜಗನ್ನಾಥ್; ಹುಡುಕಿದರೂ ಸಿಗ್ತಿಲ್ಲ ಹೀರೋಗಳು
ರಾಜೇಶ್ ದುಗ್ಗುಮನೆ
|

Updated on:Mar 25, 2023 | 10:14 AM

Share

ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಅಪ್ಪು’ ಚಿತ್ರವನ್ನು (Appu Movie) ಡೈರೆಕ್ಷನ್ ಮಾಡಿದ್ದು ಪುರಿ ಜಗನ್ನಾಥ್ ಅವರೇ. ಆದರೆ, ಇತ್ತೀಚೆಗೆ ಅವರು ಟ್ರ್ಯಾಕ್ ತಪ್ಪಿದ್ದಾರೆ. ಎಷ್ಟೇ ಪ್ರಯತ್ನಪಟ್ಟರೂ ಗೆಲುವಿನ ರುಚಿ ಸವಿಯಲು ಸಾಧ್ಯವಾಗುತ್ತಿಲ್ಲ. ‘ಲೈಗರ್’ ಸೋಲಿನ ಬಳಿಕ ಅವರ ಪರಿಸ್ಥಿತಿ ಹೀನಾಯ ಸ್ಥಿತಿ ತಲುಪಿದೆ. ಅವರ ಮುಂದಿನ ಚಿತ್ರಕ್ಕೆ ಹೀರೋ ಆಗೋಕೆ ಯಾರೂ ಮುಂದೆ ಬರುತ್ತಿಲ್ಲ. ಹೀಗೆ ಮುಂದುವರಿದರೆ ನಿರ್ದೇಶಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಬಾಕ್ಸಿಂಗ್ ಕಥೆ ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಸಿನಿಮಾ ಪ್ರಚಾರದ ವೇಳೆ ಕೊಟ್ಟ ಬಿಲ್ಡಪ್​​ಗೂ ಸಿನಿಮಾಗೂ ಯಾವುದೇ ಸಂಬಂಧ ಇರಲಿಲ್ಲ. ಸಿನಿಮಾ ಹೀನಾಯ ಸೋಲು ಕಂಡಿತು. ಇದರಿಂದ ಪುರಿ ಜಗನ್ನಾಥ್ ಅವರ ಮೇಲಿದ್ದ ನಂಬಿಕೆ ಸಂಪೂರ್ಣವಾಗಿ ನಾಶವಾಯಿತು. ಹೀಗಾಗಿ ಯಾರೂ ಅವರ ಜೊತೆ ಸಿನಿಮಾ ಮಾಡುತ್ತಿಲ್ಲ.

ಒಪ್ಪಿಕೊಂಡಿದ್ದ ಸಿನಿಮಾ ಕೂಡ ನಿಂತು ಹೋಯಿತು

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಮತ್ತೊಂದು ಸಿನಿಮಾ ಒಟ್ಟಾಗಿ ಮಾಡಬೇಕಿತ್ತು. ಈ ಚಿತ್ರಕ್ಕೆ ‘ಜನ ಗಣ ಮನ’ ಎಂದು ಶೀರ್ಷಿಕೆ ಇಡಲಾಗಿತ್ತು. ಅದ್ದೂರಿಯಾಗಿ ಈ ಚಿತ್ರಕ್ಕೆ ಚಾಲನೆ ಕೂಡ ನೀಡಲಾಗಿತ್ತು. ಆದರೆ, ಈ ಸಿನಿಮಾದ ಕೆಲಸಗಳು ನಿಂತಿವೆ. ಆದರೆ, ‘ಲೈಗರ್’ ಸೋಲಿನ ಬಳಿಕ ವಿಜಯ್ ಹಿಂದೇಟು ಹಾಕಿದ್ದಾರೆ. ಸದ್ಯ ಸಿನಿಮಾ ಹೋಲ್ಡ್​ನಲ್ಲಿದೆ.

ರಾಮ್ ಚರಣ್​ ಕೂಡ ನೋ ಅಂದ್ರು

ರಾಮ್ ಚರಣ್ ಜೊತೆ ಕೆಲಸ ಮಾಡಲು ಪುರಿ ಜಗನ್ನಾಥ್ ಪ್ಲ್ಯಾನ್ ಮಾಡಿಕೊಂಡರು. ಚಿರಂಜೀವಿ ಮೂಲಕ ರಾಮ್ ಚರಣ್​ಗೆ ಕಥೆ ಹೇಳುವ ಕೆಲಸವೂ ಆಗಿತ್ತು. ಆದರೆ, ಯಾವುದೂ ವರ್ಕೌಟ್ ಆಗಿಲ್ಲ. ರಾಮ್ ಚರಣ್ ಒಂದೇ ಮಾತಿನಲ್ಲಿ ನೋ ಎಂದಿದ್ದರು. ಅಂದಹಾಗೆ, ರಾಮ್ ಚರಣ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪುರಿ ಜಗನ್ನಾಥ್ ಅವರೇ.

ಹೊಸ ಹೀರೋ ಜೊತೆಯೂ ಇಲ್ಲ ಅವಕಾಶ

ಸ್ಟಾರ್ ಹೀರೋಗಳು ಸಿಗದ ಕಾರಣ ಹೊಸ ಹೀರೋ ಜೊತೆ ಸಿನಿಮಾ ಮಾಡೋಕೆ ಪುರಿ ಜಗನ್ನಾಥ್ ಪ್ಲ್ಯಾನ್ ರೂಪಿಸಿದರು. ‘ಇಸ್ಮಾರ್ಟ್ ಶಂಕರ್’ ಖ್ಯಾತಿಯ ರಾಮ್ ಪೋತಿನೇನಿ ಜೊತೆ ಮಾತುಕತೆ ನಡೆಸಿದರು. ಇದು ಕೂಡ ವರ್ಕೌಟ್ ಆಗುವ ರೀತಿಯಲ್ಲಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:34 am, Sat, 25 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು