AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್’ ಸೋಲಿನ ಬಳಿಕ ಹೀನಾಯ ಪರಿಸ್ಥಿತಿ ತಲುಪಿದ ಪುರಿ ಜಗನ್ನಾಥ್; ಹುಡುಕಿದರೂ ಸಿಗ್ತಿಲ್ಲ ಹೀರೋಗಳು

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಮತ್ತೊಂದು ಸಿನಿಮಾ ಒಟ್ಟಾಗಿ ಮಾಡಬೇಕಿತ್ತು.ಸದ್ಯ ಸಿನಿಮಾ ಹೋಲ್ಡ್​ನಲ್ಲಿದೆ.

‘ಲೈಗರ್’ ಸೋಲಿನ ಬಳಿಕ ಹೀನಾಯ ಪರಿಸ್ಥಿತಿ ತಲುಪಿದ ಪುರಿ ಜಗನ್ನಾಥ್; ಹುಡುಕಿದರೂ ಸಿಗ್ತಿಲ್ಲ ಹೀರೋಗಳು
ರಾಜೇಶ್ ದುಗ್ಗುಮನೆ
|

Updated on:Mar 25, 2023 | 10:14 AM

Share

ಮುಖ್ಯಾಂಶಗಳು

  • ‘ಲೈಗರ್’ ಚಿತ್ರದ ಮೂಲಕ ಪುರಿ ಜಗನ್ನಾಥ್​ಗೆ ಸೋಲು
  • ಪುರಿ ಜಗನ್ನಾಥ್ ಹೊಸ ಸಿನಿಮಾಗೆ ಸಿಗುತ್ತಿಲ್ಲ ಹೀರೋ
  • ವಿಜಯ್ ದೇವರಕೊಂಡ ಜೊತೆಗಿನ ಚಿತ್ರವೂ ನಿಂತೋಯ್ತು

ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಅಪ್ಪು’ ಚಿತ್ರವನ್ನು (Appu Movie) ಡೈರೆಕ್ಷನ್ ಮಾಡಿದ್ದು ಪುರಿ ಜಗನ್ನಾಥ್ ಅವರೇ. ಆದರೆ, ಇತ್ತೀಚೆಗೆ ಅವರು ಟ್ರ್ಯಾಕ್ ತಪ್ಪಿದ್ದಾರೆ. ಎಷ್ಟೇ ಪ್ರಯತ್ನಪಟ್ಟರೂ ಗೆಲುವಿನ ರುಚಿ ಸವಿಯಲು ಸಾಧ್ಯವಾಗುತ್ತಿಲ್ಲ. ‘ಲೈಗರ್’ ಸೋಲಿನ ಬಳಿಕ ಅವರ ಪರಿಸ್ಥಿತಿ ಹೀನಾಯ ಸ್ಥಿತಿ ತಲುಪಿದೆ. ಅವರ ಮುಂದಿನ ಚಿತ್ರಕ್ಕೆ ಹೀರೋ ಆಗೋಕೆ ಯಾರೂ ಮುಂದೆ ಬರುತ್ತಿಲ್ಲ. ಹೀಗೆ ಮುಂದುವರಿದರೆ ನಿರ್ದೇಶಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಬಾಕ್ಸಿಂಗ್ ಕಥೆ ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಸಿನಿಮಾ ಪ್ರಚಾರದ ವೇಳೆ ಕೊಟ್ಟ ಬಿಲ್ಡಪ್​​ಗೂ ಸಿನಿಮಾಗೂ ಯಾವುದೇ ಸಂಬಂಧ ಇರಲಿಲ್ಲ. ಸಿನಿಮಾ ಹೀನಾಯ ಸೋಲು ಕಂಡಿತು. ಇದರಿಂದ ಪುರಿ ಜಗನ್ನಾಥ್ ಅವರ ಮೇಲಿದ್ದ ನಂಬಿಕೆ ಸಂಪೂರ್ಣವಾಗಿ ನಾಶವಾಯಿತು. ಹೀಗಾಗಿ ಯಾರೂ ಅವರ ಜೊತೆ ಸಿನಿಮಾ ಮಾಡುತ್ತಿಲ್ಲ.

ಒಪ್ಪಿಕೊಂಡಿದ್ದ ಸಿನಿಮಾ ಕೂಡ ನಿಂತು ಹೋಯಿತು

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಮತ್ತೊಂದು ಸಿನಿಮಾ ಒಟ್ಟಾಗಿ ಮಾಡಬೇಕಿತ್ತು. ಈ ಚಿತ್ರಕ್ಕೆ ‘ಜನ ಗಣ ಮನ’ ಎಂದು ಶೀರ್ಷಿಕೆ ಇಡಲಾಗಿತ್ತು. ಅದ್ದೂರಿಯಾಗಿ ಈ ಚಿತ್ರಕ್ಕೆ ಚಾಲನೆ ಕೂಡ ನೀಡಲಾಗಿತ್ತು. ಆದರೆ, ಈ ಸಿನಿಮಾದ ಕೆಲಸಗಳು ನಿಂತಿವೆ. ಆದರೆ, ‘ಲೈಗರ್’ ಸೋಲಿನ ಬಳಿಕ ವಿಜಯ್ ಹಿಂದೇಟು ಹಾಕಿದ್ದಾರೆ. ಸದ್ಯ ಸಿನಿಮಾ ಹೋಲ್ಡ್​ನಲ್ಲಿದೆ.

ರಾಮ್ ಚರಣ್​ ಕೂಡ ನೋ ಅಂದ್ರು

ರಾಮ್ ಚರಣ್ ಜೊತೆ ಕೆಲಸ ಮಾಡಲು ಪುರಿ ಜಗನ್ನಾಥ್ ಪ್ಲ್ಯಾನ್ ಮಾಡಿಕೊಂಡರು. ಚಿರಂಜೀವಿ ಮೂಲಕ ರಾಮ್ ಚರಣ್​ಗೆ ಕಥೆ ಹೇಳುವ ಕೆಲಸವೂ ಆಗಿತ್ತು. ಆದರೆ, ಯಾವುದೂ ವರ್ಕೌಟ್ ಆಗಿಲ್ಲ. ರಾಮ್ ಚರಣ್ ಒಂದೇ ಮಾತಿನಲ್ಲಿ ನೋ ಎಂದಿದ್ದರು. ಅಂದಹಾಗೆ, ರಾಮ್ ಚರಣ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪುರಿ ಜಗನ್ನಾಥ್ ಅವರೇ.

ಹೊಸ ಹೀರೋ ಜೊತೆಯೂ ಇಲ್ಲ ಅವಕಾಶ

ಸ್ಟಾರ್ ಹೀರೋಗಳು ಸಿಗದ ಕಾರಣ ಹೊಸ ಹೀರೋ ಜೊತೆ ಸಿನಿಮಾ ಮಾಡೋಕೆ ಪುರಿ ಜಗನ್ನಾಥ್ ಪ್ಲ್ಯಾನ್ ರೂಪಿಸಿದರು. ‘ಇಸ್ಮಾರ್ಟ್ ಶಂಕರ್’ ಖ್ಯಾತಿಯ ರಾಮ್ ಪೋತಿನೇನಿ ಜೊತೆ ಮಾತುಕತೆ ನಡೆಸಿದರು. ಇದು ಕೂಡ ವರ್ಕೌಟ್ ಆಗುವ ರೀತಿಯಲ್ಲಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:34 am, Sat, 25 March 23

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ