‘ಲೈಗರ್’ ಸೋಲಿನ ಬಳಿಕ ಹೀನಾಯ ಪರಿಸ್ಥಿತಿ ತಲುಪಿದ ಪುರಿ ಜಗನ್ನಾಥ್; ಹುಡುಕಿದರೂ ಸಿಗ್ತಿಲ್ಲ ಹೀರೋಗಳು

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಮತ್ತೊಂದು ಸಿನಿಮಾ ಒಟ್ಟಾಗಿ ಮಾಡಬೇಕಿತ್ತು.ಸದ್ಯ ಸಿನಿಮಾ ಹೋಲ್ಡ್​ನಲ್ಲಿದೆ.

‘ಲೈಗರ್’ ಸೋಲಿನ ಬಳಿಕ ಹೀನಾಯ ಪರಿಸ್ಥಿತಿ ತಲುಪಿದ ಪುರಿ ಜಗನ್ನಾಥ್; ಹುಡುಕಿದರೂ ಸಿಗ್ತಿಲ್ಲ ಹೀರೋಗಳು
Follow us
|

Updated on:Mar 25, 2023 | 10:14 AM

ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಅಪ್ಪು’ ಚಿತ್ರವನ್ನು (Appu Movie) ಡೈರೆಕ್ಷನ್ ಮಾಡಿದ್ದು ಪುರಿ ಜಗನ್ನಾಥ್ ಅವರೇ. ಆದರೆ, ಇತ್ತೀಚೆಗೆ ಅವರು ಟ್ರ್ಯಾಕ್ ತಪ್ಪಿದ್ದಾರೆ. ಎಷ್ಟೇ ಪ್ರಯತ್ನಪಟ್ಟರೂ ಗೆಲುವಿನ ರುಚಿ ಸವಿಯಲು ಸಾಧ್ಯವಾಗುತ್ತಿಲ್ಲ. ‘ಲೈಗರ್’ ಸೋಲಿನ ಬಳಿಕ ಅವರ ಪರಿಸ್ಥಿತಿ ಹೀನಾಯ ಸ್ಥಿತಿ ತಲುಪಿದೆ. ಅವರ ಮುಂದಿನ ಚಿತ್ರಕ್ಕೆ ಹೀರೋ ಆಗೋಕೆ ಯಾರೂ ಮುಂದೆ ಬರುತ್ತಿಲ್ಲ. ಹೀಗೆ ಮುಂದುವರಿದರೆ ನಿರ್ದೇಶಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಬಾಕ್ಸಿಂಗ್ ಕಥೆ ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಸಿನಿಮಾ ಪ್ರಚಾರದ ವೇಳೆ ಕೊಟ್ಟ ಬಿಲ್ಡಪ್​​ಗೂ ಸಿನಿಮಾಗೂ ಯಾವುದೇ ಸಂಬಂಧ ಇರಲಿಲ್ಲ. ಸಿನಿಮಾ ಹೀನಾಯ ಸೋಲು ಕಂಡಿತು. ಇದರಿಂದ ಪುರಿ ಜಗನ್ನಾಥ್ ಅವರ ಮೇಲಿದ್ದ ನಂಬಿಕೆ ಸಂಪೂರ್ಣವಾಗಿ ನಾಶವಾಯಿತು. ಹೀಗಾಗಿ ಯಾರೂ ಅವರ ಜೊತೆ ಸಿನಿಮಾ ಮಾಡುತ್ತಿಲ್ಲ.

ಒಪ್ಪಿಕೊಂಡಿದ್ದ ಸಿನಿಮಾ ಕೂಡ ನಿಂತು ಹೋಯಿತು

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಮತ್ತೊಂದು ಸಿನಿಮಾ ಒಟ್ಟಾಗಿ ಮಾಡಬೇಕಿತ್ತು. ಈ ಚಿತ್ರಕ್ಕೆ ‘ಜನ ಗಣ ಮನ’ ಎಂದು ಶೀರ್ಷಿಕೆ ಇಡಲಾಗಿತ್ತು. ಅದ್ದೂರಿಯಾಗಿ ಈ ಚಿತ್ರಕ್ಕೆ ಚಾಲನೆ ಕೂಡ ನೀಡಲಾಗಿತ್ತು. ಆದರೆ, ಈ ಸಿನಿಮಾದ ಕೆಲಸಗಳು ನಿಂತಿವೆ. ಆದರೆ, ‘ಲೈಗರ್’ ಸೋಲಿನ ಬಳಿಕ ವಿಜಯ್ ಹಿಂದೇಟು ಹಾಕಿದ್ದಾರೆ. ಸದ್ಯ ಸಿನಿಮಾ ಹೋಲ್ಡ್​ನಲ್ಲಿದೆ.

ರಾಮ್ ಚರಣ್​ ಕೂಡ ನೋ ಅಂದ್ರು

ರಾಮ್ ಚರಣ್ ಜೊತೆ ಕೆಲಸ ಮಾಡಲು ಪುರಿ ಜಗನ್ನಾಥ್ ಪ್ಲ್ಯಾನ್ ಮಾಡಿಕೊಂಡರು. ಚಿರಂಜೀವಿ ಮೂಲಕ ರಾಮ್ ಚರಣ್​ಗೆ ಕಥೆ ಹೇಳುವ ಕೆಲಸವೂ ಆಗಿತ್ತು. ಆದರೆ, ಯಾವುದೂ ವರ್ಕೌಟ್ ಆಗಿಲ್ಲ. ರಾಮ್ ಚರಣ್ ಒಂದೇ ಮಾತಿನಲ್ಲಿ ನೋ ಎಂದಿದ್ದರು. ಅಂದಹಾಗೆ, ರಾಮ್ ಚರಣ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪುರಿ ಜಗನ್ನಾಥ್ ಅವರೇ.

ಹೊಸ ಹೀರೋ ಜೊತೆಯೂ ಇಲ್ಲ ಅವಕಾಶ

ಸ್ಟಾರ್ ಹೀರೋಗಳು ಸಿಗದ ಕಾರಣ ಹೊಸ ಹೀರೋ ಜೊತೆ ಸಿನಿಮಾ ಮಾಡೋಕೆ ಪುರಿ ಜಗನ್ನಾಥ್ ಪ್ಲ್ಯಾನ್ ರೂಪಿಸಿದರು. ‘ಇಸ್ಮಾರ್ಟ್ ಶಂಕರ್’ ಖ್ಯಾತಿಯ ರಾಮ್ ಪೋತಿನೇನಿ ಜೊತೆ ಮಾತುಕತೆ ನಡೆಸಿದರು. ಇದು ಕೂಡ ವರ್ಕೌಟ್ ಆಗುವ ರೀತಿಯಲ್ಲಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:34 am, Sat, 25 March 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್