ಅಬ್ಬಬ್ಬಾ.. ‘ಪುಷ್ಪ 2’ ಸಿನಿಮಾದ ನಿರ್ದೇಶನಕ್ಕೆ ಸುಕುಮಾರ್​ ಪಡೆಯುವ ಸಂಭಾವನೆ ಇಷ್ಟೊಂದಾ?

Director Sukumar Remuneration: ‘ಪುಷ್ಪ 2’ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಇದೆ. ಅದನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಲೇ ಬೇಕಾದ ಒತ್ತಡ ಸುಕುಮಾರ್​ ಅವರ ಮೇಲಿದೆ.

ಅಬ್ಬಬ್ಬಾ.. ‘ಪುಷ್ಪ 2’ ಸಿನಿಮಾದ ನಿರ್ದೇಶನಕ್ಕೆ ಸುಕುಮಾರ್​ ಪಡೆಯುವ ಸಂಭಾವನೆ ಇಷ್ಟೊಂದಾ?
ಸುಕುಮಾರ್​, ಅಲ್ಲು ಅರ್ಜುನ್​
Follow us
| Updated By: ಮದನ್​ ಕುಮಾರ್​

Updated on:May 29, 2022 | 9:47 AM

ಪ್ಯಾನ್​ ಇಂಡಿಯಾ ಸಿನಿಮಾಗಳ ಸೌಂಡು ಜೋರಾಗಿದೆ. ಇಂಥ ಸಿನಿಮಾಗಳಲ್ಲಿ ಹೀರೋಗಳ ರೀತಿ ನಿರ್ದೇಶಕರು ಕೂಡ ಶೈನ್​ ಆಗುತ್ತಾರೆ. ಆ ರೀತಿ ರಾಷ್ಟ್ರ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಕೆಲವೇ ನಿರ್ದೇಶಕರ ಪೈಕಿ ಸುಕುಮಾರ್​ ಕೂಡ ಪ್ರಮುಖರು. ತೆಲುಗು ಚಿತ್ರರಂಗದಲ್ಲಿ ಫೇಮಸ್​ ಆಗಿದ್ದ ಸುಕುಮಾರ್​ ಅವರು ‘ಪುಷ್ಪ’ (Pushpa Movie) ಚಿತ್ರದ ಗೆಲುವಿನ ನಂತರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಕೆಲಸದ ಮೇಲೆ ದೇಶವ್ಯಾಪಿ ಇರುವ ಸಿನಿಪ್ರಿಯರಿಗೆ ಭರವಸೆ ಮೂಡಿದೆ. ಸುಕುಮಾರ್​ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾಗಳ ಮೇಲೆ ಸಿಕ್ಕಾಪಟ್ಟೆ ಹೈಪ್​ ಸೃಷ್ಟಿ ಆಗಿದೆ. ಶೀಘ್ರದಲ್ಲೇ ಅವರು ‘ಪುಷ್ಪ 2’ (Pushap 2) ಸಿನಿಮಾದ ಶೂಟಿಂಗ್​ ಆರಂಭಿಸಲಿದ್ದಾರೆ. ಅಷ್ಟರಲ್ಲಾಗಲೇ ಅವರ ಸಂಭಾವನೆ ಬಗ್ಗೆ ಒಂದಷ್ಟು ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾಗೆ ನಿರ್ದೇಶನ ಮಾಡುವುದಕ್ಕೆ ಸುಕುಮಾರ್​ ( Sukumar) ಅವರು ಬಹುಕೋಟಿ ರೂಪಾಯಿ ಸಂಬಳ ಪಡೆಯಲಿದ್ದಾರೆ ಎಂಬುದು ಖಚಿತ. ಮೂಲಗಳ ಪ್ರಕಾರ ಅವರಿಗೆ ಬರೋಬ್ಬರಿ 40 ಕೋಟಿ ರೂಪಾಯಿ ಸಂಭಾವನೆ ಸಿಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

‘ಪುಷ್ಪ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿತ್ತು. ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದ ಈ ಚಿತ್ರದಲ್ಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಸ್ಟಾರ್​ ಕಲಾವಿದರು ನಟಿಸಿದ್ದರು. ಇಡೀ ಸಿನಿಮಾದ ಗೆಲುವಿನಲ್ಲಿ ನಿರ್ದೇಶಕ ಸುಕುಮಾರ್​ ಅವರ ಕೊಡುಗೆಯೇ ದೊಡ್ಡದು. ಕೇವಲ ಹಿಂದಿ ವರ್ಷನ್​ನಿಂದಲೇ ಈ ಸಿನಿಮಾ ನೂರು ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣ ಗಳಿಸಿತು. ಈಗ ‘ಪುಷ್ಪ’ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅದನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಲೇಬೇಕಾದ ಒತ್ತಡ ಸುಕುಮಾರ್​ ಅವರ ಮೇಲಿದೆ.

ಇದನ್ನೂ ಓದಿ: ‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

ಇದನ್ನೂ ಓದಿ
Image
‘ಕೆಜಿಎಫ್ 2’ ಎಫೆಕ್ಟ್​; ಹೆಚ್ಚಿತು ‘ಪುಷ್ಪ 2’ ಚಿತ್ರದ ಬೇಡಿಕೆ, ಶೂಟಿಂಗ್​ಗೂ​ ಮೊದಲೇ 700 ಕೋಟಿ ರೂಪಾಯಿ ಡೀಲ್
Image
‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​
Image
‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?
Image
ತಾವು ಓದಿದ ಸರ್ಕಾರಿ ಶಾಲೆಗೆ 18 ಲಕ್ಷ ರೂ. ದೇಣಿಗೆ ನೀಡಿದ ‘ಪುಷ್ಪ’ ನಿರ್ದೇಶಕ ಸುಕುಮಾರ್​

ಮೊದಲ ಪಾರ್ಟ್​ಗಿಂತಲೂ ಎರಡನೇ ಪಾರ್ಟ್​ ಅನ್ನು ಹೆಚ್ಚು ಭರ್ಜರಿಯಾಗಿ ಚಿತ್ರಿಸುವ ಹೊಣೆಯನ್ನು ಸುಕುಮಾರ್​ ಹೊತ್ತುಕೊಂಡಿದ್ದಾರೆ. ಇದಕ್ಕಾಗಿ ಅವರಿಗೆ 40 ಕೋಟಿ ರೂಪಾಯಿ ಸಂಭಾವನೆ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದಲ್ಲಿ ಧನಂಜಯ ಪಾತ್ರದ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ನಿರ್ದೇಶಕ ಸುಕುಮಾರ್​

‘ಕೆಜಿಎಫ್​’ ಮತ್ತು ‘ಪುಷ್ಪ’ ಸಿನಿಮಾಗಳ ನಡುವೆ ಪರೋಕ್ಷವಾದ ಪೈಪೋಟಿ ಇದೆ. ‘ಕೆಜಿಎಫ್​’ ಚಿತ್ರಕ್ಕಿಂತಲೂ ಹೆಚ್ಚು ಕಲೆಕ್ಷನ್​ ಅನ್ನು ‘ಪುಷ್ಪ’ ಸಿನಿಮಾ ಮಾಡಿತ್ತು. ‘ಪುಷ್ಪ’ ಸಿನಿಮಾದ ಹಲವು ದಾಖಲೆಗಳನ್ನು ‘ಕೆಜಿಎಫ್​ 2’ ಸಿನಿಮಾ ಅಳಿಸಿ ಹಾಕಿತು. ಹಾಗಾಗಿ ಈಗ ‘ಕೆಜಿಎಫ್​ 2’ ಚಿತ್ರಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಗೆಲ್ಲಬೇಕು ಎಂಬ ಒತ್ತಡ ‘ಪುಷ್ಪ 2’ ತಂಡದ ಮೇಲಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:47 am, Sun, 29 May 22

ತಾಜಾ ಸುದ್ದಿ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ